ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ
ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಧರಿಸಿ ಅದಕ್ಕೆ ಪೂರ್ವ ತಯಾರಿಯನ್ನು ಈ ಸಂದರ್ಭದಲ್ಲಿಯೇ ಮಾಡಿಕೊಳ್ಳಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರಿನ ಟಿವಿ9 ವಾಹಿನಿಯ ವರದಿಗಾರ ಅಶೋಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ […]










