ಕ್ಯಾಂಪಸ್‌

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ

ಪುತ್ತೂರು: ಅಮೃತ ಪ್ರಕಾಶನ ಪತ್ರಿಕೆಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ‘ಮೌನದೊಳಗಿನ ಮಾತು ‘ ಕವನ ಸಂಕಲನವನ್ನು  ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಲೇಖಕಿ ವೀಣಾ ಟಿ. ಶೆಟ್ಟಿ, ಕವಿಯತ್ರಿ, ಶಿಕ್ಷಕಿ ಸುಧಾ ನಾಗೇಶ್  […]

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ Read More »

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ

ಪುತ್ತೂರು: ಆಧುನಿಕ ಯುಗದಲ್ಲಿ ಸಂಸ್ಥೆಯ ಬೆಳವಣಿಗೆಗೆ ವೆಬ್ಸೈಟ್ ತುಂಬಾ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಬಹಳ ವೇಗವಾಗಿ ಬದಲಾಗುವ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಪರೀಕ್ಷೆಯ ವೇಳಾಪಟ್ಟಿಗಳು, ಶೈಕ್ಷಣಿಕ ನೆರವು, ಕೋರ್ಸ್ ವಿವರಣೆಗಳು ಮತ್ತು ಇತರ ಪ್ರಮುಖ ಪ್ರಕಟಣೆಗಳ ವಿವರಗಳನ್ನು ನೀಡಬಹುದು. ಈ ಮೂಲಕ ಕಾಲೇಜಿನ ಎಲ್ಲಾ ಮಾಹಿತಿ ಅಂಗೈ ಅಂಗಳದಲ್ಲೆ ದೊರಕುವುದು ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ  ಡಾ ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಐಕ್ಯೂಎಸಿ ಇದರ

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ Read More »

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ (ಸ್ವಾಯತ್ತ) ಮಹಿಳಾ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿ ಕುಮಾರಿ ಹಾಗೂ ಯತೀಶ್ ಕುಮಾರ್ ಬಿ. ತರಬೇತು ನೀಡಿದ್ದಾರೆ.

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ Read More »

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳಂದೂರು: ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಕಡಬ ತಾಲೂಕಿನ ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ Read More »

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು.

ಪುತ್ತೂರು: 2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನವೇ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪುತ್ತೂರು, ಕಡಬ ತಾಲೂಕಿನಲ್ಲಿ ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಸೋಮವಾರ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು. Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಕೆದಂಬಾಡಿ ಎನ್‌ ಎಸ್‌ ಕಿಲ್ಲೆ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕೆದಂಬಾಡಿ ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್‌ ರೈ ಕಾರ್ಯಕ್ರಮ ಉದ್ಘಾಟಿಸಿ, ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ  ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ.  ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ Read More »

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ 5, 8 ಮತ್ತು 9 ನೇ ತರಗತಿಯ ಪರೀಕ್ಷೆ ವಿಳಂಬದ ಹಿನ್ನಲೆಯಲ್ಲಿ ಈ ಭಾರಿ ಬೇಸಿಗೆವಿಸ್ತರಣೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬಿರು ಬೇಸಿಗೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೀರಿನ ಕೊರತೆ ಕಾಡುತ್ತಿದೆ‌. ಈ ಹಿನ್ನಲೆಯಲ್ಲಿ ಬೇಸಿಗೆ ರಜೆಯನ್ನು ಜೂ.10 ರ ತನಕ ವಿಸ್ತಿರಿಸುವ ನಿರೀಕ್ಷೆಯಿದೆ. ಪ್ರತಿಭಾರಿ ಮೇ 24 ರ ವೇಳೆಗೆ ಶಾಲಾರಂಭ ಮಾಡಲಾಗುತ್ತಿತ್ತು. ರಿವಿಸನ್ ಹಾಗೂ ಶಾಲಾ ತರಗತಿಗಳಿಗೆ ಮಕ್ಕಳನ್ನು ಅಣಿಗೊಳಿಸುವ ಕಾರಣಕ್ಕೆ ಶಾಲಾ ಆರಂಭೋತ್ಸವ, ಶಾಲೆಗೆ ದಾಖಲೀಕರಣದಂತಹ

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ Read More »

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ

ಪುತ್ತೂರು: ಮತದಾನದ ದಿನ ನಾನೊಬ್ಬ ಮತದಾನ ಮಾಡದಿದ್ದರೆ ಏನೂ ಆಗದು ಎಂಬ ಭಾವನೆ ಹಲವರಲ್ಲಿದೆ. ಆದರೆ ನಮ್ಮ ಒಂದು ಮತ ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿಯನ್ನು ಹೊಂದಿದೆ. ಇದು ಪ್ರಜೆಗಳ ಹಕ್ಕಾಗಿದ್ದು, ಕರ್ತವ್ಯವೂ ಆಗಿದೆ. ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಪುತ್ತೂರು

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ Read More »

ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು.  ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ

ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ವತಿಯಿಂದ ಮಾನವನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆ ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ, ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ, ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ನಾವು ಮಾಡುವ ಕೆಲಸ ನಿರಂತರವಾದ ಪ್ರಕ್ರಿಯೆಯಾಗಿರುವಂತೆ ನೋಡಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಂಜದ ನೆಮ್ಮದಿ ಕೌನ್ಸೆಲಿಂಗ್ ಸೆಂಟರ್ ನ ಮಾಲಕಿ ಶ್ರದ್ಧಾ ಲಲಿತ್ ರೈ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು

ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ Read More »

error: Content is protected !!
Scroll to Top