ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಬೆಳಂದೂರು: ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಕಡಬ ತಾಲೂಕಿನ ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ […]










