ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನೇಮಕಾತಿ ಕೋಶದ ವತಿಯಿಂದ  ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲ  ಡಾ| ವಿಜಯ ಕುಮಾರ್ ಎಂ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಅವಕಾಶಗಳು ಬಂದೊದಗುತ್ತವೆ. ಅವಕಾಶಗಳ ಸದ್ಬಳಕೆಯಿಂದ ಯಶಸ್ಸನ್ನು ಸಾಧಿಸಬಹುದು, ಅಭ್ಯರ್ಥಿಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಆತ್ಮವಿಶ್ವಾಸ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ Read More »

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ

ಪುತ್ತೂರು: ಶಿವರಾತ್ರಿ ಎಂದರೆ ಇಡೀ ರಾತ್ರಿ ಶಿವನಾಮ ಸ್ಮರಣೆಯೊಂದಿಗೆ ಶಿವನ ಬಗ್ಗೆ ಚಿಂತಿಸುತ್ತಾ ಕತ್ತಲೊಳಗೆ ಬೆಳಕನ್ನು ಕಾಣುವ ದಿನ. ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಇದಾಗಿದೆ. ಈ ಹಬ್ಬದ ಆಚರಣೆಯಿಂದ ಮನುಷ್ಯನ ಮಾನಸಿಕ ಪರಿವರ್ತನೆ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿವರಾತ್ರಿ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಾನ್ ಶಿವ ಶಾಶ್ವತ

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ Read More »

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್‌ ಅನೋಸಿಯೇಶನ್‌ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ Read More »

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ  ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಅಳವಡಿಸುವಂತೆ ಪುತ್ತೂರು ಸಂಚಾರಿ ಠಾಣಾ ನಿರೀಕ್ಷಕರಿಗೆ ಮನವಿ ಶನಿವಾರ ನೀಡಲಾಯಿತು. ಇಲ್ಲಿ ಝೀಬ್ರಾ ಪಟ್ಟಿ ಇಲ್ಲದೆ ಸಮಸ್ಯೆ ಉಂಟಾಗಿದ್ದು ಈ ನಿಟ್ಟಿನಲ್ಲಿ ಕಾಲೇಜು ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವಂತೆ  ಮನವಿ ಮೂಲಕ ವಿನಂತಿಸಲಾಯಿತು. ಈ ಸಂದರ್ಭದಲ್ಲಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು ಕಾಲೇಜು ಘಟಕದ ಅಧ್ಯಕ್ಷ ಚೇತನ್, ವಿದ್ಯಾರ್ಥಿ

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ Read More »

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪುತ್ತೂರು: ಇಂದಿನ ಯುವಜನತೆ ವಿದ್ಯಾವಂತರಾಗುತ್ತಿದ್ದಾರೆ. ಆದರೆ ಬಳಿಕ ವೃತ್ತಿಜೀವನಕ್ಕೆ ಸಂಪೂರ್ಣ ಆದ್ಯತೆ ನೀಡುತ್ತಿದ್ದು, ತಮ್ಮ ಪೋಷಕರು, ಪತ್ನಿ ಹಾಗೂ ಮಕ್ಕಳಿಗೆ ಸಮಯ ನೀಡದಷ್ಟು ಮುಂದುವರಿದಿರುವುದು ಬೇಸರದ ಸಂಗತಿ. ಶಿಕ್ಷಣ ಎಂದರೆ ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲ, ಅದರೊಂದಿಗೆ ಸಂಸ್ಕಾರ ಪಡೆಯುವುದೂ ಅತೀ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ Read More »

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ

ಪುತ್ತೂರು: ಐಸಿಎಸ್ಎಸ್ಆರ್ ಪ್ರಾಯೋಜಕತ್ವದಲ್ಲಿ ಆರ್ ಎಸ್ ವಿ ಪಿ ಸಹಯೋಗದಲ್ಲಿ ರಾಷ್ಟ್ರೀಯ ವಿಚಾರಗೋಷ್ಠಿ ‘ಭಾರತ್ @2047-ಶತಮಾನದ ದೃಷ್ಠಿ’ ಮಾ.11 ಹಾಗೂ 12 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕಿ ಡಾ.ವಿಜಯ ಸರಸ್ವತಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪಡೆದ ಬಳಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದು, ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜ್ಞಾನ ಅನುಭವಗಳನ್ನು ರಚನಾತ್ಮಕವಾಗಿ ರಾಜ್ಯ,

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ Read More »

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ

ಪುತ್ತೂರು: ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗದ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಪುತ್ತೂರು: ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ Read More »

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ Read More »

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ 

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ Read More »

error: Content is protected !!
Scroll to Top