ಕ್ಯಾಂಪಸ್‌

ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ : ದುರ್ಗಾ ಪ್ರಸನ್ನ

ಪುತ್ತೂರು:  ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತೇವೆ ಎನ್ನುವುದನ್ನು ತಿಳಿಯುವುದು ಮುಖ್ಯ. ಅಕ್ಷರ ದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ವಿಷಯವನ್ನು ತಲುಪಿಸುವ ಕೆಲಸ ಎಂದು ಆಧುನಿಕ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ಸಹಾಯಕವಾಗಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ  ದುರ್ಗಾ ಪ್ರಸನ್ನ  ಹೇಳಿದರು. ಅವರು ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಿಕಿಪೀಡಿಯ ಜ್ಞಾನ […]

ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ : ದುರ್ಗಾ ಪ್ರಸನ್ನ Read More »

ಸಂಪ್ಯ ಅಕ್ಷಯ ಕಾಲೇಜಿನಿಂದ ಸಂವಿಧಾನ ಜಾಗೃತಿ ಜಾಥಾ-2024

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ವತಿಯಿಂದ ಸಂವಿಧಾನ ಜಾಗೃತಿ ಜಾಥಾ -2024 ಆರ್ಯಾಪು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು. ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿದ್ದು, ಜಾಥಾವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ ಸಂವಿಧಾನದ ಕುರಿತು ಮಾಹಿತಿ ನೀಡಲಾಯಿತು.ಬಳಿಕ ಸಂವಿಧಾನ ಮಾಹಿತಿ ಜಾಥಾ ಗ್ರಾಮ ಪಂಚಾಯಿತಿಯಿಂದ ಹೊರಟು ಗ್ರಾಮಾಂತರ ಆರಕ್ಷಕ ಠಾಣೆವರೆಗೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ರಾಷ್ಟ್ರೀಯ ಸೇವಾ ಯೋಜನೆ ಸಹಕಾರ್ಯಕ್ರಮಾಧಿಕಾರಿ ಮೇಘಶ್ರೀ ಹಾಗೂ ಕಾಲೇಜಿನ

ಸಂಪ್ಯ ಅಕ್ಷಯ ಕಾಲೇಜಿನಿಂದ ಸಂವಿಧಾನ ಜಾಗೃತಿ ಜಾಥಾ-2024 Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆ

ಪುತ್ತೂರು:  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ, ಪ್ರತೀ ವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುವ ಸೂರ್ಯ ತನ್ನ ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ಮೇಘಮಾಸ, ಶುಕ್ಲ ಪಕ್ಷ, ಸಪ್ತಮಿಯಾದ ಇಂದು ರಥಸಪ್ತಮಿ ಆಚರಿಸಲಾಗುತ್ತದೆ. ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿ ಇದು ಸತ್ಯ. ಈತನ ಕಿರಣಗಳಲ್ಲಿ ವಿಟಮಿನ್ ” ಡಿ ” ಹೇರಳವಾಗಿದೆ ಹಾಗೂ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆ Read More »

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಪುತ್ತೂರು: ವಿದ್ಯಾಸಂಸ್ಥೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವವರು ಹಿರಿಯ ವಿದ್ಯಾರ್ಥಿಗಳಾಗಿದ್ದು, ಅವರೇ ಕಾಲೇಜಿನ ರಾಯಭಾರಿಗಳಾಗಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ತಮ್ಮಿಂದಾದ ಸಹಾಯವನ್ನು ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘ ಬಹಳ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ 2000-03 ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ. ಸಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ Read More »

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ

ಪುತ್ತೂರು: ಶಿಕ್ಷಣ ಒಬ್ಬ ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಕೇವಲ ಪರೀಕ್ಷೆ ಬರೆಯಲು ಮಾತ್ರ ಸೀಮಿತವಾಗದೆ ಉತ್ತಮ ನಾಗರೀಕರನ್ನಾಗಿ ಮಾಡಬೇಕು. ಇಂದಿನ ಭಾರತದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು ಜವಬ್ದಾರಿಯನ್ನು ನಿಭಾಯಿಸಲು ಕಲಿಯಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತ ಕಾಮಾನಂದಜಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆದ ವಿವೇಕಾನಂದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ Read More »

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೇ ವರ್ಷಾಚರಣೆ – ದಶಾಂಬಿಕೋತ್ಸವದ ಸಮಾರೋಪ ಸಮಾರಂಭ ಎ.25 ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಸಹಿತ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭಾಗವಹಿಸಲಿದ್ದಾರೆ. ಎ.24ರಂದು ಸ್ವಾಮೀಜಿಯವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪುತ್ತೂರಿಗೆ ಬರಮಾಡಿಕೊಳ್ಳಲಾಗುವುದು. ಸಂಜೆ ಬಪ್ಪಳಿಗೆ  ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆಯನ್ನು ಸ್ವಾಮೀಜಿಯವರು ನೆರವೇರಿಸಲಿದ್ದು, ಬಳಿಕ ಅಂಬಿಕಾ ಸಮೂಹ

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ Read More »

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು  ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ,

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ

ಬಿ.ಸಿ ರೋಡ್ : ಅನೇಕ ಚಮತ್ಕಾರಿಕ ಸಂಗತಿಗಳುಳ್ಳ ನಮ್ಮ ನೆಲಮೂಲದ ಸಂಸ್ಕೃತಿ ಅದೆಷ್ಟೋ ವರ್ಷಗಳ ಇತಿಹಾಸವನ್ನು ಹೊಂದಿದೆ. ನಮ್ಮ ಪೂರ್ವಜರ ಪಾಂಡಿತ್ಯ ಹಾಗೂ ಬುದ್ಧಿಮತ್ತೆಯಿಂದ ಸಮಾಜಕ್ಕೆ ಹಲವಾರು ಕೊಡುಗೆಗಳು ಸಂದಿದೆ. ಯಾವ ಕಾಲಕ್ಕೂ ಕ್ಷೇಮಕರವಾದ ನಮ್ಮ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನರಿತು ಉಳಿಸಿಕೊಂಡು ಮುಂದಿನ ತಲೆಮಾರಿಗೂ ದಾಟಿಸಬೇಕು ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ  ಹಾಗೂ ಉಪನ್ಯಾಸಕ ತುಕಾರಾಮ ಪೂಜಾರಿ ಹೇಳಿದರು. ಅವರು ಬಿ.ಸಿ ರೋಡ್ ಸಂಜಯಗಿರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯ

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ Read More »

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ

ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನ ಎನ್.ಸಿ.ಸಿ. ಕೆಡೆಟ್ ಗಳಾದ ಜುವೊ ಫಜಲ್ ಎಸ್. ನದಾಫ್ ಹಾಗೂ ಜುವೊ ಸುಜಲ್ ಶಂಖಲಾ  ಮುಖ್ಯಮಂತ್ರಿಗಳ ಶ್ಲಾಘನಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಎನ್.ಸಿ.ಸಿ.ಯಲ್ಲಿ ಅಸಾಧಾರಣ ಸೇವೆಗಾಗಿ ಅತ್ಯಂತ ಅರ್ಹ ಕೆಡೆಟ್ ಗಳಿಗೆ  ಮುಖ್ಯಮಂತ್ರಿಗಳ ಶ್ಲಾಘನಾ ಪದಕವನ್ನು ನೀಡಲಾಗುತ್ತದೆ. ಕಾಲೇಜಿನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಆಡಳಿತಾಧಿಕಾರಿ ಸಂತೋಷ್ ಶೆಟ್ಟಿ, ಪ್ರಾಂಶುಪಾಲ ನವೀನ್ ಪ್ರಸಾದ್, ಸಹಾಯಕ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಓಂಕಾರ್ ಇಬ್ಬರೂ ಸಾಧಕರನ್ನು ಅಭಿನಂದಿಸಿದ್ದಾರೆ

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ Read More »

error: Content is protected !!
Scroll to Top