ಕ್ಯಾಂಪಸ್‌

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ

ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೆಸಿಐ ತರಬೇತುದಾರ, ಸುಳ್ಯ ಕಾಲೇಜಿನ ಪ್ರಾಂಶುಪಾಲ ಡಾ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿ ಮನಮೋಹನ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶಾಂತಿ ಕೆ., ರಂಜಿತ್ ಪಿ ಜೆ., , ಐಕ್ಯೂಎಸಿ ಸಂಚಾಲಕ ಸ್ವಾಮಿ ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕರುಗಳಾದ ಕ್ಷಿತಿಜ್, ಚಂದ್ರಿಕಾ ಉಪಸ್ಥಿತರಿದ್ದರು.

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ Read More »

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ

ಮೂಡಬಿದ್ರೆ: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಕಡಬ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಚರಿಷ್ಮಾ ಕೂಟ ದಾಖಲೆ ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ ಗುರಿ ಮುಟ್ಟುವ ಮೂಲಕ ಉಜಿರೆ ಎಸ್ ಡಿ.ಎಂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ Read More »

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ

ಪುತ್ತೂರು: ಪುತ್ತೂರಿನ ಕ್ಯಾಥೊಲಿಕ್‌ ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೃಹತ್‌ ನಡಿಗೆ ಜಾಥಾ ಸೋಮವಾರ ಆಯೋಜಿಸಲಾಯಿತು. ಸಂತ ಫಿಲೋಮಿನಾ ಕಾಲೇಜು ಪ್ರಾಂಗಣದಲ್ಲಿ ಕಾರ್ಯಕ್ರಮ ರೂವಾರಿ, ಮಾಯ್‌ ದೆ ದೇವುಸ್‌ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತಿ ವಂದನೀಯ ಲಾರೆನ್ಸ್‌ ಮಸ್ಕರೇಞಸ್‌ ಚಾಲನೆ ನೀಡಿ, ಮಾದಕ ದ್ರವ್ಯ ಸೇವನೆಯ ವಿದುದ್ಧ ಹೋರಾಡಲು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಡಿಗೆ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಮಹಮ್ಮಾಯಿ ದೇವಸ್ಥಾನ ರಸ್ತೆಯ ಮೂಲಕ ಸಂಚರಿಸಿ ಪುತ್ತೂರು

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅಡ್ಡಿಯಾಗಿದ್ದ ನ್ಯಾಯಾಲಯದ ತಡೆಯಾಜ್ಞೆ ತೆರವು | ಪುತ್ತೂರಿಗೆ 131 ಶಿಕ್ಷಕರ ನೇಮಕ

ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಸರಕಾರ ದ.ಕ. ಜಿಲ್ಲೆಗೆ 546 ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಈ ಪೈಕಿ ಪುತ್ತೂರಿಗೆ 131 ಶಿಕ್ಷಕರನ್ನು ನೇಮಿಸಲಾಗಿದೆ. ಪುತ್ತೂರು ಸೇರಿದಂತೆ  ದ ಕ ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೂ ಶಿಕ್ಷಕರನ್ನು ನೇಮಕ ಮಾಡುವಂತಿರಲಿಲ್ಲ. ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇದ್ದ ಕಾರಣ ಕಳೆದ ಕೆಲವು ವರ್ಷಗಳಿಂದ ಅಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿತ್ತು. ಇದೀಗ ನ್ಯಾಯಾಲಯವು

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅಡ್ಡಿಯಾಗಿದ್ದ ನ್ಯಾಯಾಲಯದ ತಡೆಯಾಜ್ಞೆ ತೆರವು | ಪುತ್ತೂರಿಗೆ 131 ಶಿಕ್ಷಕರ ನೇಮಕ Read More »

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಎನ್ಎಸ್ಎಸ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕೆಸರ್’ಡ್ ಒಂಜಿ ದಿನ’ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ಏರ್ಪಡಿಸಲಾಯಿತು. ಜಿಲ್ಲಾ ಯುವಜನ‌ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಕೃಷಿ, ಕೃಷಿಕರ ಮಹತ್ವ ಅರಿಯುವ ಅಗತ್ಯವಿದೆ. ಇರುವ ಒಂದು ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ Read More »

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿಮನೆ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ. ಅವರಿಗೆ ಶಿಕ್ಷಕರಾದ ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ತರಬೇತಿ ನೀಡಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ನೀವು ಉತ್ತಮ ಭಾಷಣಗಾರರಾಗಬೇಕೇ? ಉತ್ತಮ ನಿರೂಪಕರಾಗಬೇಕೇ? | ಪ್ರೇರಣಾ ಸಂಸ್ಥೆ ನಿಮಗಾಗಿ ಹೊಸ ಅವಕಾಶವೊಂದನ್ನು ತೆರೆದಿಟ್ಟಿದೆ

ಪುತ್ತೂರು: ನೆರೆದಿರುವ ದೊಡ್ಡ ಸಭೆಯ ಮುಂದೆ ನಿಂತು ನಿರರ್ಗಳವಾಗಿ ಭಾಷಣ ಮಾಡಬೇಕು. ಅಂಜಿಕೆಯ ಸುಳಿವೇ ಇಲ್ಲದೇ ತುಂಬಿದ ಸಭೆ ಮೂಕವಿಸ್ಮಿತರಾಗುವಂತೆ ನಿರೂಪಣೆ (ಎಂ.ಸಿ.) ಮಾಡಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಇದನ್ನು ನಿಜ ಜೀವನದಲ್ಲಿ ಸಾಧ್ಯವಾಗಿಸುವುದು ಹೇಗೆ? ಕನಸುಗಳನ್ನೇನೋ ಸಹಜವಾಗಿ ಕಟ್ಟಿಕೊಂಡು ಬಿಡುತ್ತೇವೆ. ಆದರೆ ಇಂತಹ ಕನಸುಗಳನ್ನು ಸುಲಭವಾಗಿ ನನಸು ಮಾಡಬೇಕಾದರೆ ಸೂಕ್ತ ತರಬೇತಿ ಕೇಂದ್ರಗಳನ್ನೇ ಸಂಪರ್ಕಿಸಬೇಕು. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಭಾಷಣ ಹಾಗೂ ನಿರೂಪಣಾ ಸಾಮರ್ಥ್ಯವನ್ನು ಒರೆಗೆ ಹಚ್ಚುವ ಪ್ರಯತ್ನಕ್ಕೆ ಪ್ರೇರಣಾ

ನೀವು ಉತ್ತಮ ಭಾಷಣಗಾರರಾಗಬೇಕೇ? ಉತ್ತಮ ನಿರೂಪಕರಾಗಬೇಕೇ? | ಪ್ರೇರಣಾ ಸಂಸ್ಥೆ ನಿಮಗಾಗಿ ಹೊಸ ಅವಕಾಶವೊಂದನ್ನು ತೆರೆದಿಟ್ಟಿದೆ Read More »

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಭುವನ್ ರಾಮ್ ಗೆ ಚಿನ್ನದ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ ರಾಮ್ ಜಗದೀಶ್ ಭಂಡಾರಿ ಅವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿಚಿನ್ನದ ಪದಕ ಗಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಪುತ್ರ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಭುವನ್ ರಾಮ್ ಗೆ ಚಿನ್ನದ ಪದಕ Read More »

ಅಂತಾರಾಜ್ಯ ಅಥ್ಲೆಟಿಕ್ಸ್: ಕಡಬದ ಚರಿಷ್ಮ ರಾಷ್ಟ್ರಮಟ್ಟಕ್ಕೆ

ಪುತ್ತೂರು: ತೆಲಂಗಾಣದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತಾರಾಜ್ಯ ಜ್ಯೂನಿಯರ್ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಕಡಬದ ಚರಿಷ್ಮ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಚರಿಷ್ಮ ಅವರು ಅಥ್ಲೆಟಿಕ್ಸ್ ನ ಯು16 ಬಾಲಕಿಯರ 2000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಡಬ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ, ಸಿಬ್ಬಂದಿಗಳು ಚರಿಷ್ಮಾ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅಂತಾರಾಜ್ಯ ಅಥ್ಲೆಟಿಕ್ಸ್: ಕಡಬದ ಚರಿಷ್ಮ ರಾಷ್ಟ್ರಮಟ್ಟಕ್ಕೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ

ಪುತ್ತೂರು: ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶಕ್ಕೆ ಒಂದು ವಾರದ ವಿಶೇಷ ತರಬೇತಿ ತರಗತಿಯನ್ನು ಅ.16 ರಿಂದ 21ರ ವರೆಗೆ ಆಯೋಜಿಸಲಾಗಿದೆ. ಈ ತರಗತಿಗಳ ಸದುಪಯೋಗಪಡಿಸಿ ಕೊಳ್ಳಲು ಬಯಸುವ ವಿದ್ಯಾರ್ಥಿಗಳು ಬೆಳಿಗ್ಗೆ 9.30ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ 9148935808 / 96204 68869 ಸಂಪರ್ಕಿಸಬಹುದು.

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ Read More »

error: Content is protected !!
Scroll to Top