ಕ್ಯಾಂಪಸ್‌

ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ವಿಟ್ಲ: ಕನ್ಯಾನ ಗ್ರಾಮದ ದೇಲಂತಬೆಟ್ಟು ಹಿ. ಪ್ರಾ. ಶಾಲೆಯ ಅಮೃತ ಮಹೋತ್ಸವ ‘ಅಮೃತ ಸಿಂಚನ’ ಕಾರ್ಯಕ್ರಮ ಜ.13ರಂದು ನಡೆಯಲಿದೆ.1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಸಮಿತಿಯ ಅಧ್ಯಕ್ಷ ಡಿ. ಶ್ರೀನಿವಾಸ್ ತಿಳಿಸಿದ್ದಾರೆ.ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉಪನ್ಯಾಸಕ ಡಿ. ನಾರಾಯಣ ರಾವ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಬಯಲು ನೃತ್ಯ, ಪ್ರತಿಭಾ ಪುರಸ್ಕಾರ, ಪುಟಾಣಿಗಳ ಹಬ್ಬ […]

ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ Read More »

ಸಿ.ಎ ಗ್ರೂಪ್-2 ಪರೀಕ್ಷೆ ತೇರ್ಗಡೆಯಾದ ತೇಜಸ್ವಿನಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ತೇಜಸ್ವಿನಿ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ನವೆಂಬರ್ 2023 ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ – 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ. ಅವರು ಅಂಬಿಕಾ ಸಂಸ್ಥೆಯಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದರು. ತೇಜಸ್ವಿನಿ ಅವರು ಬಂಟ್ವಾಳದ ನಾರಾಯಣ ಮೂಲ್ಯ ಹಾಗೂ ಹೇಮಾವತಿ ದಂಪತಿ ಪುತ್ರಿ.

ಸಿ.ಎ ಗ್ರೂಪ್-2 ಪರೀಕ್ಷೆ ತೇರ್ಗಡೆಯಾದ ತೇಜಸ್ವಿನಿ Read More »

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ರಾಶಿ ಕೆ.ಸಿ.  ಅವರ ಹೆಸರು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‍ ನಲ್ಲಿ ದಾಖಲಾಗಿದೆ. ರಾಷ್ಟ್ರಗೀತೆಯನ್ನು 1 ಗಂಟೆ 40 ನಿಮಿಷ, 26 ಸೆಕೆಂಡ್ ನಲ್ಲಿ ಗರಿಷ್ಠ 116 ಬಾರಿ ನಿರಂತರವಾಗಿ ಹಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ರಾಶಿ ಈ ಹಿಂದೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ರೆಕಾರ್ಡ್ಸ್ ಯುನಿವರ್ಸಿಟಿ ಸಾಧನೆಯನ್ನು ಮಾಡಿರುತ್ತಾರೆ. ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯ, ನಾಟಕ, ಯೋಗ, ಕಲಿಕೆಯಲ್ಲಿಯೂ ಪ್ರತಿಭಾನ್ವಿತ

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು Read More »

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎರಡು ದಿನಗಳ ಮಟ್ಟಿಗೆ ಹಿಂದೂಡಿದೆ. ಈ ಹಿಂದೆ ಏ.20 ಹಾಗೂ 21 ರಂದು ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಇದೀಗ ಏ.18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ನೀಡಿದೆ. ಏ.21 ರಂದು ಎನ್‍ ಡಿಎ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಜ.10 ರಿಂದ

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ Read More »

ಜ. 12ರಂದು ವಿವೇಕಾನಂದ ಜಯಂತಿ ಆಚರಣೆ, ಬೊಂಬೆಯಾಟ | ಜ. 13ರಿಂದ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಪ್ತಾಹ ಸರಣಿ ವಿಚಾರ ಸಂಕಿರಣ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ಜನವರಿ 12ರಂದು ವಿವೇಕಾನಂದ ಜಯಂತಿ ನಡೆಯಲಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ರಾಮ ಪ್ರಾಣ ಪ್ರತಿಷ್ಠಾ ಸಪ್ತಾಹ ವಿಚಾರ ಸಂಕಿರಣ ಜ. 13ರಿಂದ 22ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂಬ ಪರಿಕಲ್ಪನೆಯಲ್ಲಿ ವಿವೇಕಾನಂದ ಜಯಂತಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು

ಜ. 12ರಂದು ವಿವೇಕಾನಂದ ಜಯಂತಿ ಆಚರಣೆ, ಬೊಂಬೆಯಾಟ | ಜ. 13ರಿಂದ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಪ್ತಾಹ ಸರಣಿ ವಿಚಾರ ಸಂಕಿರಣ Read More »

ಸಿಎ ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣ

ಪುತ್ತೂರು: ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಎಕೌಂಟೆಂಟ್ (ಸಿ.ಎ.) ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣರಾಗಿದ್ದಾರೆ. ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಅವರು ಪುತ್ತೂರಿನ ಸಿಎ ರಾಮಭಟ್ ಹಾಗೂ ಸಿಎ ಅರವಿಂದ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಿಎ ತರಬೇತಿ ಪಡೆದಿದ್ದರು. ಕೃತಿಕಾ ಎ.ಎಸ್‍. ಬಿಎಸ್‍ಎನ್‍ಎಲ್ ನಿವೃತ್ತ ಉಪಮಂಡಲ ಅಧಿಕಾರಿ ಎ.ಸೀತಾರಾಮ ಗೌಡ ಹಾಗೂ ಚಂದ್ರಾವತಿ ದಂಪತಿ ಪುತ್ರಿ.

ಸಿಎ ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣ Read More »

ಜೀವನ ಕೌಶಲ್ಯವನ್ನು ಕಲಿಸುವ ಪ್ರತಿಭಾ ಪುರಸ್ಕಾರ ಮೈಲುಗಲ್ಲಾಗಿ ನಿಲ್ಲಲಿ | ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮದಲ್ಲಿ ಮಾಲತಿ ಡಿ.

ಪುತ್ತೂರು: ನರಿಮೊಗರು ಕೊಡಂಕಿರಿ ಫೌಂಡೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾ ಮಂದಿರದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವರ್ಧಂತ್ಯುತ್ಸವ -2024 ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮ ಶನಿವಾರ ಸಂಜೆ ನಡೆಯಿತು. ಮುಖ್ಯ ಅತಿಥಿಯಾಗಿ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಸಮಾರಂಭ ಉದ್ಘಾಟಿಸಿ ಮಾತನಾಡಿ, ಯಾವುದೇ ಮಗುವಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹ ನೀಡಬೇಕು. ಮಗುವಿನಲ್ಲಿ ಇಲ್ಲದೆ ಇರುವ ಕಲೆಯ ಬಗ್ಗೆ ಒತ್ತಡ ಹಾಗಬಾರದು. ಈ ನಿಟ್ಟಿನಲ್ಲಿ ಪ್ರತಿಭಾ ವೇದಿಕೆ ಮಕ್ಕಳಲ್ಲಿನ ಪ್ರತಿಭೆಯನ್ನು ತೋರ್ಪಡಿಸಲು ಸಹಕಾರಿಯಾಗಬಲ್ಲದು. ಇಂತಹಾ ವೇದಿಕೆಯಿಂದ ಮಕ್ಕಳು ಇನ್ನೊಬ್ಬರ

ಜೀವನ ಕೌಶಲ್ಯವನ್ನು ಕಲಿಸುವ ಪ್ರತಿಭಾ ಪುರಸ್ಕಾರ ಮೈಲುಗಲ್ಲಾಗಿ ನಿಲ್ಲಲಿ | ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮದಲ್ಲಿ ಮಾಲತಿ ಡಿ. Read More »

ಸರಕಾರಿ ಶಾಲೆ ಬದುಕು ಧೈರ್ಯ ಕಲಿಸುತ್ತದೆ | ಚೂರಿಪದವು ಶಾಲಾ ನೂತನ ತರಗತಿ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿ‌ ಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕಾಗುತ್ತದೆ. ಸರಕಾರಿ ‌ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕೊರತೆ ಇದೆ. ಅದನ್ನು ಮುಂದಿನ ದಿನಗಳಲ್ಲಿ ನೀಗಿಸುವ

ಸರಕಾರಿ ಶಾಲೆ ಬದುಕು ಧೈರ್ಯ ಕಲಿಸುತ್ತದೆ | ಚೂರಿಪದವು ಶಾಲಾ ನೂತನ ತರಗತಿ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ Read More »

ಊರವರ ಪ್ರೀತಿಯ ಅಭಿನಂದನೆ ಪಡೆದಿದ್ದೇನೆ | ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ ಉದ್ಘಾಟಿಸಿ ಸಂಜೀವ ಮಠಂದೂರು

ಪುತ್ತೂರು: ಚೂರಿಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಪ್ರೊಜೆಕ್ಟರ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಪುತ್ತೂರು ಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ಚೂರಿಪದವು, ನಿಡ್ಪಳ್ಳಿ, ಆನಾಜೆ ಪರಿಸರದಲ್ಲಿ ಕೈಗೊಂಡ ಅನೇಕ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಒದಗಿಸಿದ್ದು, ಈ ನಿಟ್ಟಿನಲ್ಲಿ ಊರವರಿಂದ ಪ್ರೀತಿಯ ಅಭಿನಂದನೆಯನ್ನು ಪಡೆದಿದ್ದೇನೆ ಎಂದರು.

ಊರವರ ಪ್ರೀತಿಯ ಅಭಿನಂದನೆ ಪಡೆದಿದ್ದೇನೆ | ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ ಉದ್ಘಾಟಿಸಿ ಸಂಜೀವ ಮಠಂದೂರು Read More »

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ 2023 24’ ಪೆರ್ನಾಜೆ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾ ನಂದಮಯೀ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ನುಡಿದರು. ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’ Read More »

error: Content is protected !!
Scroll to Top