ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್
ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ […]










