ಕ್ಯಾಂಪಸ್‌

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ…

ಪುತ್ತೂರು: ಅ.6 ಮತ್ತು 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ 204ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು‌ ಮಂದಿಗೆ ಉದ್ಯೋಗ ದೊರೆಯಲಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ವಿದ್ಯಾವಂತ ಯುವಕರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಗ್ರಿ ಕಾಲೇಜು, ಐಟಿಐ ತರಬೇತಿ ಕೇಂದ್ರಗಳು, ಡಿಪ್ಲೋಮಾ ಕೋರ್ಸು‌ಮಾಡಿದವರು, ಬಿಎ, ಬಿಕಾಂ, […]

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ… Read More »

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ, ಬೀದಿ ನಾಟಕ, ಜಾಥಾ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್‌.ಸಿ.ಸಿ.ಯ ಭೂದಳ ಮತ್ತು ನೌಕಾದಳ, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಹಾಗೂ ಇಕೋ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಗಾಂಧೀಜಿಯವರ ಕನಸಾಗಿತ್ತು. ಸ್ವಚ್ಛತೆ ನಮ್ಮ ಮನೆ ಪರಿಸರ ಗ್ರಾಮದಿಂದ ಪ್ರಾರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿರಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಕೇಂದ್ರ ಸರಕಾರವು ಸ್ವಚ್ಛತೆಗೆ ಹಲವು ಮಾನದಂಡಗಳನ್ನು ನಿಯೋಜಿಸಿದೆ. ಅವುಗಳನ್ನೆಲ್ಲ ಪಾಲಿಸಿದ್ದೇ

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ, ಬೀದಿ ನಾಟಕ, ಜಾಥಾ Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ Read More »

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಧನ್ವಿತ್ ಹಾಗೂ ಅನಿಕೇತ್ ಎನ್. ಅವರು ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಘಟಕ ಹಾಗೂ ಮಂಗಳೂರಿನ ಬಲ್ಮಠದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆಶ್ರಯದಲ್ಲಿ ಮಂಗಳೂರಿನ ಮಂಗಳ ಈಜು ಕ್ಲಬ್’ನಲ್ಲಿ ಸ್ಪರ್ಧೆ ನಡೆದಿತ್ತು. ಪುತ್ತೂರು ಮರೀಲಿನ ಕೇಶವ ಕುಮಾರ್ ಕೆ.ಎಂ. ಮತ್ತು ಮೀನಾಕ್ಷಿ ದಂಪತಿ ಪುತ್ರ ಧನ್ವಿತ್ 100 ಮೀಟರ್ ಫ್ರೀ

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ Read More »

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ

ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ Read More »

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’

ಉಪ್ಪಿನಂಗಡಿ: ಪುತ್ತೂರು ಶೈಕ್ಷಣಿಕ ವಲಯದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಕ್ರೀಡಾಕೂಟ ‘ಕ್ರೀಡೋತ್ಸವ-2023’ ಅ. 6ರಂದು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉಪ್ಪಿನಂಗಡಿ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ ಆಶ್ರಯದಲ್ಲಿ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ. ಅ. 6ರಂದು ಬೆಳಿಗ್ಗೆ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅ. 7ರಂದು ಶನಿವಾರ ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’ Read More »

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ

ಪುತ್ತೂರು: ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ವಿದ್ಯಾರ್ಥಿನಿ ನಿಯತಿ ಭಟ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಘಟಕದ ವತಿಯಿಂದ ಆಯೋಜಿಸಲಾದ ತಾಲೂಕು ದಸರಾ ಕ್ರೀಡಾಕೂಟದಲ್ಲಿ ಆರ್ಟಿಫಿಶಿಯಲ್ ಹಾಗೂ ಟ್ರೆಡಿಷನಲ್ ಯೋಗ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಮುಕ್ರಂಪಾಡಿಯ ಗೋಕುಲ ಲೇಔಟಿನ ಪ್ರವೀಣ ಡಿ ಹಾಗೂ ಚಿತ್ಕಲಗೌರಿ ಕೆ ಅವರ ಪುತ್ರಿಯಾಗಿರುವ ನಿಯತಿ, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸೆ.23ರಂದು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಸ್ಪರ್ಧೆ ಆಯೋಜನೆಗೊಂಡಿತ್ತು.

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ Read More »

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ

ಪುತ್ತೂರು: ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸೆ. 28ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ಪರ್ಧಾತ್ಮಕ

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ Read More »

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ  ಪಡೆದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ 4*100 ಮೀಟರ್ ರಿಲೇಯಲ್ಲಿ ಗುಣಶ್ರೀ, ಪ್ರತೀಕ್ಷಾ, ತ್ರಿಶಾ, ಕೀರ್ತಿ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ

ಮುಕ್ವೆ: ನರಿಮೊಗರು ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಅಭಿಯಾನ -2023ರಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್, ಸಲೀಂ ಮಾಯಂಗಳ, ಸೌಮ್ಯ ರಮೇಶ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯರಾದ ಪುಷ್ಪಾವತಿ, ಗಣೇಶ್, ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ವಾಣಿ, ಸ್ವಚ್ಛತಾ ಸಿಬ್ಬಂದಿಗಳಾದ ಸುಜಾತಾ, ನಮಿತಾ, ಶಾಲಾ ಶಿಕ್ಷಕರಾದ

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ Read More »

error: Content is protected !!
Scroll to Top