ಕ್ಯಾಂಪಸ್‌

ಸರಕಾರಿ ಶಾಲೆ ಬದುಕು ಧೈರ್ಯ ಕಲಿಸುತ್ತದೆ | ಚೂರಿಪದವು ಶಾಲಾ ನೂತನ ತರಗತಿ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿ‌ ಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕಾಗುತ್ತದೆ. ಸರಕಾರಿ ‌ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕೊರತೆ ಇದೆ. ಅದನ್ನು ಮುಂದಿನ ದಿನಗಳಲ್ಲಿ ನೀಗಿಸುವ […]

ಸರಕಾರಿ ಶಾಲೆ ಬದುಕು ಧೈರ್ಯ ಕಲಿಸುತ್ತದೆ | ಚೂರಿಪದವು ಶಾಲಾ ನೂತನ ತರಗತಿ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ Read More »

ಊರವರ ಪ್ರೀತಿಯ ಅಭಿನಂದನೆ ಪಡೆದಿದ್ದೇನೆ | ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ ಉದ್ಘಾಟಿಸಿ ಸಂಜೀವ ಮಠಂದೂರು

ಪುತ್ತೂರು: ಚೂರಿಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಪ್ರೊಜೆಕ್ಟರ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಪುತ್ತೂರು ಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ಚೂರಿಪದವು, ನಿಡ್ಪಳ್ಳಿ, ಆನಾಜೆ ಪರಿಸರದಲ್ಲಿ ಕೈಗೊಂಡ ಅನೇಕ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಒದಗಿಸಿದ್ದು, ಈ ನಿಟ್ಟಿನಲ್ಲಿ ಊರವರಿಂದ ಪ್ರೀತಿಯ ಅಭಿನಂದನೆಯನ್ನು ಪಡೆದಿದ್ದೇನೆ ಎಂದರು.

ಊರವರ ಪ್ರೀತಿಯ ಅಭಿನಂದನೆ ಪಡೆದಿದ್ದೇನೆ | ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ ಉದ್ಘಾಟಿಸಿ ಸಂಜೀವ ಮಠಂದೂರು Read More »

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ 2023 24’ ಪೆರ್ನಾಜೆ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾ ನಂದಮಯೀ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ನುಡಿದರು. ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’ Read More »

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ 

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಗಾ ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕ ಮನೋಜ್ ಟಿ.ವಿ. ಹಾಗೂ ಸಂಧ್ಯಾ ಎಂ. ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯ ಶಿಕ್ಷಕಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ  Read More »

ರಾಜ್ಯದಲ್ಲಿ ವಿದ್ಯುತ್, ಮದ್ಯದ ಬಳಿಕ ಇದೀಗ ಶಿಕ್ಷಣವೂ ದುಬಾರಿ! | ಕಾಲೇಜು ಶುಲ್ಕವನ್ನು ಏರಿಸಿ ಶಾಕ್ ನೀಡಿದ ರಾಜ್ಯ ಸರ್ಕಾರ!

ರಾಜ್ಯ ಸರ್ಕಾರ ಇದೀಗ ಕಾಲೇಜು ವಿದ್ಯಾರ್ಥಿಗಳಿಗೆ ಶಾಕ್​ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕಾಲೇಜು ಮತ್ತು ಯೂನಿವರ್ಸಿಟಿಗಳ ಶುಲ್ಕವನ್ನು ಶೇ. 10ರಷ್ಟು ಏರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್​ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ. ಬಿಎ, ಬಿಕಾಂ, ಬಿಎಸ್​ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ. 10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಈ ಮೂಲಕ ಸರ್ಕಾರ ವಿದ್ಯಾರ್ಥಿಗಳ

ರಾಜ್ಯದಲ್ಲಿ ವಿದ್ಯುತ್, ಮದ್ಯದ ಬಳಿಕ ಇದೀಗ ಶಿಕ್ಷಣವೂ ದುಬಾರಿ! | ಕಾಲೇಜು ಶುಲ್ಕವನ್ನು ಏರಿಸಿ ಶಾಕ್ ನೀಡಿದ ರಾಜ್ಯ ಸರ್ಕಾರ! Read More »

ನಾಳೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಗ್ರಾಮೀಣ ವಿದ್ಯಾಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಸಮಾರಂಭ ಜ. 4ರಂದು ಗುರುವಾರ ಸಂಜೆ 5.10ಕ್ಕೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿಯವರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಪ್ರದಾನ ಮತ್ತು ಆಶೀರ್ವಚನ ನೀಡಲಿದ್ದಾರೆ. ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಸ್.ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಹಿಂದೂ

ನಾಳೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಪುತ್ತೂರು: ಡಿಸೆಂಬರ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗದಲ್ಲಿ ನಡೆಸಿದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಆಯಿಷತ್ ಹಿಬಾ ಮತ್ತು ನಿರೀಕ್ಷಾ ಎಚ್‍. ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ Read More »

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಕೊಂಡಾಡಿಕೊಪ್ಪ ಶಾಲೆಗೆ ಒದಗಿಸಿದ ಶಾಲಾ ಗೇಟ್ ಇದರ ಉದ್ಘಾಟನೆಯನ್ನು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಕೊಂಡಾಡಿ, ಸದಸ್ಯರಾದ ಸದಾನಂದ ಆಚಾರ್ಯ, ವಾರಿಜಾ ಶ್ವೇತಕುಮಾರ್, ಆಲಂಕಾರು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಕಮಿತ್ತಿಲು, ಉಪಾಧ್ಯಕ್ಷೆ ಲತಾ ಆಲಂಕಾರು, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪರಮೇಶ್ವರ ಗೌಡ, ನಿರ್ದೇಶಕ ಹರೀಶ್ ಗೌಡ

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ Read More »

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್

ಮಾಣಿಲ: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಸವಿತಾ ಭಟ್ ಅಡ್ಯಾಯಿ ಹೇಳಿದರು. ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ವಹಿಸಿ ಶಾಲೆಯ ಉನ್ನತಿಗೆ ಎಲ್ಲರ ಸಹಕಾರ ಕೋರಿದರು. ಮಾಣಿಲ ಗ್ರಾ.ಪಂ.ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಗ್ರಾ.ಪಂ ಸದಸ್ಯ ರಾಜೇಶ್ ಕುಮಾರ್ ಬಾಳೆಕಲ್ಲು, ಶಾಲಾ ಸ್ಥಳದಾನಿ

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್ Read More »

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು

ಪುತ್ತೂರು: ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿದ ಬಳಿಕ ದೇಶ ಬಹಳಷ್ಟು ಕ್ಷೇತ್ರಗಳಲ್ಲಿ ಪ್ರಗತಿ ಕಂಡಿದೆ. ಈ ಮೂಲಕ  ಪರಿವರ್ತನೆಯ ಯುಗ ಆರಂಭವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೀರಮಂಗಲ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಾಲೆಯನ್ನು ಪಿಎಂಶ್ರೀಗೆ ಆಯ್ಕೆ ಮಾಡಿದ ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಠಂದೂರುರವರ ಕಾರ್ಯಕ್ಷಮತೆ ಪ್ರಶಂಸನೀಯ ಎಂದರು. ಪಿಎಂಶ್ರೀಗೆ ಆಯ್ಕೆಯಾದ ವೀರಮಂಗಲ

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು Read More »

error: Content is protected !!
Scroll to Top