ಕ್ಯಾಂಪಸ್‌

ಕಾಲೇಜುಗಳಲ್ಲಿ ಸೆಲ್ಫಿ ಪಾಯಿಂಟ್‌ ಸ್ಥಾಪನೆ!

ರಾಷ್ಟ್ರದ ಸಾಧನೆಗಳ ಕುರಿತು ಯುವಜನರಿಗಿರುವ ಮಾಹಿತಿ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೇಶದ ಎಲ್ಲ ವಿವಿಗಳು, ಕಾಲೇಜುಗಳ ಆವರಣಗಳಲ್ಲಿ ಭಾರತದ ಸಾಧನೆಯ ಚಿತ್ರಣಗಳಿರುವ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ಯುಜಿಸಿ ನಿರ್ದೇಶಿಸಿದೆ. ಶಿಕ್ಷಣ ಸಚಿವಾಲಯವು ಹಂಚಿಕೊಂಡಿರುವ 3ಡಿ ಲೇಔಟ್‌ಗಳಲ್ಲಿನ ಅನುಮೋದಿತ ವಿನ್ಯಾಸಗಳಿಗೆ ಅನುಗುಣವಾಗಿ ಮಾತ್ರವೇ ಕ್ಯಾಂಪಸ್‌ನಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಬೇಕಾಗಿದೆ. ಈ ಸೆಲ್ಫಿ ಪಾಯಿಂಟ್ಸ್‌ ದೇಶದ ಹೆಮ್ಮೆಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೇ, ಜಾಗತಿಕ ಮಟ್ಟದಲ್ಲಿ ಭಾರತದ ಬೆಳವಣಿಗೆಯನ್ನು ಉತ್ತೇಜಿಸಿದ ಉಪಕ್ರಮಗಳ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ತಿಳಿಸಲು ನೆರವಾಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು […]

ಕಾಲೇಜುಗಳಲ್ಲಿ ಸೆಲ್ಫಿ ಪಾಯಿಂಟ್‌ ಸ್ಥಾಪನೆ! Read More »

ದ್ವಿತೀಯ ಪಿಯು, ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ. 1ರಿಂದ ಡಿ. 15ರವರೆಗೆ ಅವಕಾಶವಿರುತ್ತದೆ. ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. ಅದೇ ರೀತಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ವೇಳಾಪಟ್ಟಿ ಮಾರ್ಚ್ 2: ಕನ್ನಡ, ಅರೇಬಿಕ್ ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ ಮಾರ್ಚ್

ದ್ವಿತೀಯ ಪಿಯು, ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾಪಟ್ಟಿ ಪ್ರಕಟ! Read More »

ಹ್ಯಾಮರ್ ತ್ರೋ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಪೃಥ್ವಿ ಕೆ. ದ್ವಿತೀಯ ಸ್ಥಾನ ಪಡೆದು, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪೃಥ್ವಿ ಕೆ. ಬೆಳ್ಳಿ ಪದಕ ಪಡೆದರು. ಅವರು ಪುತ್ತೂರು ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಪರ್ಪಂಜ ಸೌಗಂಧಿಕಾ ನರ್ಸರಿ ಮಾಲಕ ಚಂದ್ರ ಸೌಗಂಧಿಕಾ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರಿ.

ಹ್ಯಾಮರ್ ತ್ರೋ: ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಶಾಲೆಗಳಿಗೆ ಬಾಂಬ್ ಬೆದರಿಕೆ: ಇ ಮೇಲ್ ಸಂದೇಶ ರವಾನೆ!! | ಪತ್ತೆಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲ ಪತ್ತೆಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಗರದ ಹಲವು ಖಾಸಗಿ ಶಾಲೆಗಳಿಗೆ ಈ ರೀತಿ ಬಾಂಬ್ ಬೆದರಿಕೆ ಕರೆಗಳು ಪುನರಾವರ್ತನೆಯಾಗುತ್ತಿರುತ್ತವೆ. ಇಂತಹ ಘಟನೆಗಳು ನಡೆದರೆ ಪೋಷಕರು, ಮಕ್ಕಳು ಮತ್ತು ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಆತಂಕಗೊಳ್ಳುತ್ತಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಇಂತಹ ಹುಸಿ ಬಾಂಬ್ ಬೆದರಿಕೆಯನ್ನು ಯಾರು

ಶಾಲೆಗಳಿಗೆ ಬಾಂಬ್ ಬೆದರಿಕೆ: ಇ ಮೇಲ್ ಸಂದೇಶ ರವಾನೆ!! | ಪತ್ತೆಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ. ಅದು ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಾ ತರಂಗಿಣಿ-2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉನ್ನತ ಶಿಕ್ಷಣದ‌ ಕನಸು ಕಾಣಬೇಕು. ಕನಸು ನನಸು‌ಮಾಡಲೂ ಪ್ರಯತ್ನ ಅತೀ ಅಗತ್ಯವಾಗಿದೆ ಎಂದು ಹೇಳಿದರು. ಕೇವಲ‌ ಇಂಜಿನಿಯರ್, ಡಾಕ್ಟರ್ ಕಡೆ

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

ಕಾಣಿಯೂರು: ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಪುಂಡಲಿಕ ಪೂಜಾರ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು. ಕಾಲೇಜಿನ ಪ್ರಾಚಾರ್ಯರಾದ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಸುಧಾಕರ್ ಎಸ್. ಸ್ವಾಗತಿಸಿ, ಶಶಿಕಲಾ ಕೆ. ವಂದಿಸಿದರು. ಸಂಧ್ಯಾ ಜೆ. ರೈ ಕಾರ್ಯಕ್ರಮ ನಿರೂಪಿಸಿದರು.

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ Read More »

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ  ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜನಪದಗೀತೆ ಸ್ಪರ್ಧೆಯಲ್ಲಿ ರೇಷ್ಮಾ.ಟಿ ದ್ವಿತೀಯ, ಪ್ರೌಢಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ರೇಖಾ ಆಚಾರ್ಯ ದ್ವಿತೀಯ, ಪ್ರಾಥಮಿಕ

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಜ್ಯಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ‘ಸಂವಿಧಾನ ದಿನಾಚರಣೆ’ ಆಚರಿಸಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಪಾಲ್ಗೊಂಡು ಮಾಹಿತಿ ನೀಡಿದರು. ಕನ್ಯಾಸ ಸರಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಹರಿಣಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಅನುಪಮ ಪಿ. ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸಿದರು. ಎನ್‍ಎಸ್‍ಎಸ್‍ ಕಾರ್ಯಕ್ರಮ ಅಧಿಕಾರಿ ಶಾಂತಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನ ದಿನದ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ Read More »

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ Read More »

ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ

ಪುತ್ತೂರು:  ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಅದನ್ನು ಸಾಕಾರಗೊಳಿಸುವ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುವುದರ ಬಗ್ಗೆ ಸದಾ ಜಾಗೃತರಾಗಬೇಕು ಎಂದು ಯುವ ಉದ್ಯಮಿ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕೋಶಾಧಿಕಾರಿ ನರಸಿಂಹ ಪೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಕನಸನ್ನು

ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ Read More »

error: Content is protected !!
Scroll to Top