ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ
ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ […]