ಕ್ಯಾಂಪಸ್‌

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ

ಪುತ್ತೂರು: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನವನ್ನು ವೃದ್ಧಿಸುವ ಸಲುವಾಗಿ ಹಮ್ಮಿಕೊಳ್ಳಲಾಗುವ ಮೆಟ್ರಿಕ್ ಮೇಳ  ಸ.ಹಿರಿಯ ಪ್ರಾಥಮಿಕ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ವಿದ್ಯಾರ್ಥಿಗಳು ಬಗೆಬಗೆಯ ಸೊಪ್ಪು, ತರಕಾರಿ, ವಿವಿಧ ಬಗೆಯ ತಿನಿಸುಗಳನ್ನು ವ್ಯವಸ್ಥಿತವಾಗಿ ಜೋಡಿಸಿ ಮಾರಾಟದಲ್ಲಿ ತೊಡಗಿ ಸಂಭ್ರಮಿಸಿದರು . ಮುಖ್ಯ ಅತಿಥಿಯಾಗಿ ನಿವೃತ್ತ  ಶಿಕ್ಷಕಿ  ಸಾವಿತ್ರಿ ಕೆ ಮಾತನಾಡಿ, ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಿ ಕ್ರಿಯಾಶೀಲ ರಾಗುವಂತೆ ಮಾಡುತ್ತವೆ ಎಂದರು ಬಡಗನ್ನೂರು ಗ್ರಾಮ ಪಂಚಾಯಿತಿ ಸದಸ್ಯ ರವಿರಾಜ್ ರೈ ಸಜಂಕಾಡಿ ಮೆಟ್ರಿಕ್ ಮೇಳ ಉದ್ಘಾಟಿಸಿ ಶುಭ […]

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ Read More »

ರಾಜ್ಯಮಟ್ಟದ ಕಬಡ್ಡಿ: ರಾಮಕುಂಜೇಶ್ವರ ಪ್ರೌಢಶಾಲೆ ದ್ವಿತೀಯ | ಪ್ರೌಢಶಾಲೆಯ ನಾಲ್ವರು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಮಕುಂಜ: ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ‍್ಯಮ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕಾರ್ತಿಕ್ ಬೆಸ್ಟ್ ರೈಡರ್ ಆಗಿ ಹೊರಹೊಮ್ಮಿದ್ದು, ಕಾರ್ತಿಕ್, ಶ್ರೇಯಸ್ ಹಿತೇಶ್, ಸತ್ಯ ನಾಲ್ವರು ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಿವೃತ್ತ ಯುವಜನ ಕ್ರೀಡಾಧಿಕಾರಿ ಮಾಧವ್ ಬಿ.ಕೆ., ಕೋಚ್ ಜಸ್ವಂತ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ತರಬೇತಿ ನೀಡಿದ್ದಾರೆ. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಗುರುಗಳು, ಶಿಕ್ಷಕರು ಅಭಿನಂದಿಸಿದ್ದಾರೆ.

ರಾಜ್ಯಮಟ್ಟದ ಕಬಡ್ಡಿ: ರಾಮಕುಂಜೇಶ್ವರ ಪ್ರೌಢಶಾಲೆ ದ್ವಿತೀಯ | ಪ್ರೌಢಶಾಲೆಯ ನಾಲ್ವರು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ!

ಕೆದಿಲ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್ ಪತ್ತೆಯಾಗಿದ್ದು, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ ಘಟನೆ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ. ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದ್ದು, ಪೋಷಕರು ಈ ಪೆನ್ಸಿಲ್ ನ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಶಾಲೆಗಳಿಗೆ ಭೇಟಿ ನೀಡುವ ಈ ಮಾರಾಟಗಾರರು ಮಕ್ಕಳಿಗೆ ಬೇಕಾಗುವ ಪೆನ್ಸಿಲ್ ನ ಆರ್ಡರ್ ಪಡೆದುಕೊಂಡು ಹೋಗುತ್ತಾರೆ. ಅದರ ಬೆಲೆಯನ್ನು

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ! Read More »

ವ್ಯಕ್ತಿತ್ವ ವಿಕಸನದ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸುವುದು ಅತ್ಯಗತ್ಯ: ಪ್ರತಿಭಾ ಶೋಭನಮ್’ನಲ್ಲಿ ಕನಿಷ್ಕ ಎಸ್ ಚಂದ್ರ

ಪುತ್ತೂರು: ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮೊಳಗಿನ ಶಕ್ತಿಯ ಅರಿವುಂಟಾಗುತ್ತದೆ. ಇದು ಹೊಸ ಅನುಭವಗಳನ್ನು ತೆರೆದಿಡಲು ಸಹಾಯವಾಗುತ್ತದೆ.  ಮುಂದಿನ ತಲೆಮಾರಿಗೆ ನಮ್ಮೊಳಗಿನ ಜ್ಞಾನವನ್ನು ಹಂಚಬೇಕು. ಕಾಲಕ್ಕೆ ತಕ್ಕುದಾದ ಬದಲಾವಣೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಾವು ಯಾವ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂಬುದನ್ನು ನಿರ್ಧರಿಸುವುದು ಉತ್ತಮ ಎಂದು ಪುತ್ತೂರು ಪಿಡಬ್ಲ್ಯುಡಿ ಇಂಜಿನಿಯರ್ ಕನಿಷ್ಕ ಎಸ್ ಚಂದ್ರ ಹೇಳಿದರು. ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಪ್ರತಿಭಾ ಶೋಭನಮ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ

ವ್ಯಕ್ತಿತ್ವ ವಿಕಸನದ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸುವುದು ಅತ್ಯಗತ್ಯ: ಪ್ರತಿಭಾ ಶೋಭನಮ್’ನಲ್ಲಿ ಕನಿಷ್ಕ ಎಸ್ ಚಂದ್ರ Read More »

ಬೆಳಂದೂರು ಕಾಲೇಜಿನಲ್ಲಿ ರಂಗ ತರಬೇತಿ ಶಿಬಿರ

ಬೆಳಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ಒಂದು ದಿನದ ರಂಗ ತರಬೇತಿ ಶಿಬಿರ ನಡೆಯಿತು. ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ರಂಗ ತರಬೇತುದಾರ ರಾಕೇಶ್ ಆಚಾರ್ಯ ಬನಾರಿ ಭಾಗವಹಿಸಿ, ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಮತ್ತು ಕಲೆಯೂ ಹೇಗೆ ವ್ಯಕ್ತಿತ್ವದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ

ಬೆಳಂದೂರು ಕಾಲೇಜಿನಲ್ಲಿ ರಂಗ ತರಬೇತಿ ಶಿಬಿರ Read More »

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂತ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಿಂಚನ ಬೈಲಾಡಿ ಅವರು 76 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ ಇವರು ಪುತ್ತೂರು ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪುತ್ತೂರಿನ ಯಂಗ್ ಸ್ಟರ್ ಬಾರ್ ಬೆಲ್ ಕ್ಲಬ್ ಸದಸ್ಯರಾಗಿದ್ದಾರೆ. ಇವರಿಗೆ ಪುಷ್ಪರಾಜ್ ಗೌಡ

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ Read More »

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ!

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ ಡಿ. 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ (ಸ್ವಾಯತ್ತ) ನಡೆಯಲಿದೆ. ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆ ನಡೆಯಲಿದೆ. ಕೆ.ಎ.ಎಸ್, ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ! Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ

ಪುತ್ತೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 1ನೇ ತರಗತಿಯ ತನಯ್ ಡಿ.ಕೆ. ಪ್ರಥಮ ಸ್ಥಾನಿಯಾಗಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದಿಸಿದ್ದಾರೆ. ತನಯ್ ಡಿ.ಕೆ. ಅವರು ಧನಂಜಯ ಮರ್ಕಂಜ ಮತ್ತು ಚೇತನಾ ಎಸ್. ಕೊಚ್ಚಿ ಮರ್ಕಂಜ – ಸುಳ್ಯ ದಂಪತಿ ಪುತ್ರ.

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ Read More »

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ ಕೆಪಿಎಸ್ ಕೆಯ್ಯೂರಿನಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಸರಕಾರಿ ಶಾಲೆಗಳನ್ನು ಉಳಿಸಬೇಕಾದರೆ ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕು. ಆದರೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಶಿಕ್ಷಕರ ಕೊರತೆಯ ಕಾರಣಕ್ಕೆ ಹಲವು ಮಂದಿ ಪೋಷಕರು ತಮ್ಮ

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸವಣೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿರುವ ಜೀವಿತಾ ಎಲ್.ಎಲ್. ಹಾಸನ ಲಕ್ಕುಂದದ ಲೋಹಿತಾಶ್ವ ಎಲ್. ಡಿ. ಮತ್ತು ಹರ್ಷಿತಾ ಎನ್. ಪಿ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top