ಕ್ಯಾಂಪಸ್‌

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅತ್ಪೆಟಿಕ್ ಸ್ಪರ್ಧೆ-2023 ರಲ್ಲಿ ಟ್ರಿಪಲ್‌ಜಂಪ್ ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಮತ್ತು ಮೈಸೂರು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.90 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. […]

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ Read More »

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್ Read More »

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಬೆಳಂದೂರು: ಬೆಳಂದೂರು :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ|ಶಂಕರ್ ಭಟ್ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಷಾರ್ಚನೆಗೈದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರು,  ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ Read More »

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ    ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು . ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ  ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು. ಎಸ್ ಡಿ ಎಂ ಶಿಕ್ಷಣ

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’ Read More »

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ

ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೆಸಿಐ ತರಬೇತುದಾರ, ಸುಳ್ಯ ಕಾಲೇಜಿನ ಪ್ರಾಂಶುಪಾಲ ಡಾ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿ ಮನಮೋಹನ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶಾಂತಿ ಕೆ., ರಂಜಿತ್ ಪಿ ಜೆ., , ಐಕ್ಯೂಎಸಿ ಸಂಚಾಲಕ ಸ್ವಾಮಿ ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕರುಗಳಾದ ಕ್ಷಿತಿಜ್, ಚಂದ್ರಿಕಾ ಉಪಸ್ಥಿತರಿದ್ದರು.

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ Read More »

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ

ಮೂಡಬಿದ್ರೆ: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಕಡಬ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಚರಿಷ್ಮಾ ಕೂಟ ದಾಖಲೆ ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ ಗುರಿ ಮುಟ್ಟುವ ಮೂಲಕ ಉಜಿರೆ ಎಸ್ ಡಿ.ಎಂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ Read More »

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ

ಪುತ್ತೂರು: ಪುತ್ತೂರಿನ ಕ್ಯಾಥೊಲಿಕ್‌ ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೃಹತ್‌ ನಡಿಗೆ ಜಾಥಾ ಸೋಮವಾರ ಆಯೋಜಿಸಲಾಯಿತು. ಸಂತ ಫಿಲೋಮಿನಾ ಕಾಲೇಜು ಪ್ರಾಂಗಣದಲ್ಲಿ ಕಾರ್ಯಕ್ರಮ ರೂವಾರಿ, ಮಾಯ್‌ ದೆ ದೇವುಸ್‌ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತಿ ವಂದನೀಯ ಲಾರೆನ್ಸ್‌ ಮಸ್ಕರೇಞಸ್‌ ಚಾಲನೆ ನೀಡಿ, ಮಾದಕ ದ್ರವ್ಯ ಸೇವನೆಯ ವಿದುದ್ಧ ಹೋರಾಡಲು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಡಿಗೆ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಮಹಮ್ಮಾಯಿ ದೇವಸ್ಥಾನ ರಸ್ತೆಯ ಮೂಲಕ ಸಂಚರಿಸಿ ಪುತ್ತೂರು

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅಡ್ಡಿಯಾಗಿದ್ದ ನ್ಯಾಯಾಲಯದ ತಡೆಯಾಜ್ಞೆ ತೆರವು | ಪುತ್ತೂರಿಗೆ 131 ಶಿಕ್ಷಕರ ನೇಮಕ

ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಸರಕಾರ ದ.ಕ. ಜಿಲ್ಲೆಗೆ 546 ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಈ ಪೈಕಿ ಪುತ್ತೂರಿಗೆ 131 ಶಿಕ್ಷಕರನ್ನು ನೇಮಿಸಲಾಗಿದೆ. ಪುತ್ತೂರು ಸೇರಿದಂತೆ  ದ ಕ ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೂ ಶಿಕ್ಷಕರನ್ನು ನೇಮಕ ಮಾಡುವಂತಿರಲಿಲ್ಲ. ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇದ್ದ ಕಾರಣ ಕಳೆದ ಕೆಲವು ವರ್ಷಗಳಿಂದ ಅಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿತ್ತು. ಇದೀಗ ನ್ಯಾಯಾಲಯವು

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅಡ್ಡಿಯಾಗಿದ್ದ ನ್ಯಾಯಾಲಯದ ತಡೆಯಾಜ್ಞೆ ತೆರವು | ಪುತ್ತೂರಿಗೆ 131 ಶಿಕ್ಷಕರ ನೇಮಕ Read More »

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಎನ್ಎಸ್ಎಸ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕೆಸರ್’ಡ್ ಒಂಜಿ ದಿನ’ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ಏರ್ಪಡಿಸಲಾಯಿತು. ಜಿಲ್ಲಾ ಯುವಜನ‌ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಕೃಷಿ, ಕೃಷಿಕರ ಮಹತ್ವ ಅರಿಯುವ ಅಗತ್ಯವಿದೆ. ಇರುವ ಒಂದು ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ Read More »

error: Content is protected !!
Scroll to Top