ಕ್ಯಾಂಪಸ್‌

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿಮನೆ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ. ಅವರಿಗೆ ಶಿಕ್ಷಕರಾದ ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ತರಬೇತಿ ನೀಡಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ನೀವು ಉತ್ತಮ ಭಾಷಣಗಾರರಾಗಬೇಕೇ? ಉತ್ತಮ ನಿರೂಪಕರಾಗಬೇಕೇ? | ಪ್ರೇರಣಾ ಸಂಸ್ಥೆ ನಿಮಗಾಗಿ ಹೊಸ ಅವಕಾಶವೊಂದನ್ನು ತೆರೆದಿಟ್ಟಿದೆ

ಪುತ್ತೂರು: ನೆರೆದಿರುವ ದೊಡ್ಡ ಸಭೆಯ ಮುಂದೆ ನಿಂತು ನಿರರ್ಗಳವಾಗಿ ಭಾಷಣ ಮಾಡಬೇಕು. ಅಂಜಿಕೆಯ ಸುಳಿವೇ ಇಲ್ಲದೇ ತುಂಬಿದ ಸಭೆ ಮೂಕವಿಸ್ಮಿತರಾಗುವಂತೆ ನಿರೂಪಣೆ (ಎಂ.ಸಿ.) ಮಾಡಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಇದನ್ನು ನಿಜ ಜೀವನದಲ್ಲಿ ಸಾಧ್ಯವಾಗಿಸುವುದು ಹೇಗೆ? ಕನಸುಗಳನ್ನೇನೋ ಸಹಜವಾಗಿ ಕಟ್ಟಿಕೊಂಡು ಬಿಡುತ್ತೇವೆ. ಆದರೆ ಇಂತಹ ಕನಸುಗಳನ್ನು ಸುಲಭವಾಗಿ ನನಸು ಮಾಡಬೇಕಾದರೆ ಸೂಕ್ತ ತರಬೇತಿ ಕೇಂದ್ರಗಳನ್ನೇ ಸಂಪರ್ಕಿಸಬೇಕು. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಭಾಷಣ ಹಾಗೂ ನಿರೂಪಣಾ ಸಾಮರ್ಥ್ಯವನ್ನು ಒರೆಗೆ ಹಚ್ಚುವ ಪ್ರಯತ್ನಕ್ಕೆ ಪ್ರೇರಣಾ

ನೀವು ಉತ್ತಮ ಭಾಷಣಗಾರರಾಗಬೇಕೇ? ಉತ್ತಮ ನಿರೂಪಕರಾಗಬೇಕೇ? | ಪ್ರೇರಣಾ ಸಂಸ್ಥೆ ನಿಮಗಾಗಿ ಹೊಸ ಅವಕಾಶವೊಂದನ್ನು ತೆರೆದಿಟ್ಟಿದೆ Read More »

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಭುವನ್ ರಾಮ್ ಗೆ ಚಿನ್ನದ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ ರಾಮ್ ಜಗದೀಶ್ ಭಂಡಾರಿ ಅವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿಚಿನ್ನದ ಪದಕ ಗಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಪುತ್ರ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಭುವನ್ ರಾಮ್ ಗೆ ಚಿನ್ನದ ಪದಕ Read More »

ಅಂತಾರಾಜ್ಯ ಅಥ್ಲೆಟಿಕ್ಸ್: ಕಡಬದ ಚರಿಷ್ಮ ರಾಷ್ಟ್ರಮಟ್ಟಕ್ಕೆ

ಪುತ್ತೂರು: ತೆಲಂಗಾಣದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತಾರಾಜ್ಯ ಜ್ಯೂನಿಯರ್ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಕಡಬದ ಚರಿಷ್ಮ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಚರಿಷ್ಮ ಅವರು ಅಥ್ಲೆಟಿಕ್ಸ್ ನ ಯು16 ಬಾಲಕಿಯರ 2000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಡಬ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ, ಸಿಬ್ಬಂದಿಗಳು ಚರಿಷ್ಮಾ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅಂತಾರಾಜ್ಯ ಅಥ್ಲೆಟಿಕ್ಸ್: ಕಡಬದ ಚರಿಷ್ಮ ರಾಷ್ಟ್ರಮಟ್ಟಕ್ಕೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ

ಪುತ್ತೂರು: ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶಕ್ಕೆ ಒಂದು ವಾರದ ವಿಶೇಷ ತರಬೇತಿ ತರಗತಿಯನ್ನು ಅ.16 ರಿಂದ 21ರ ವರೆಗೆ ಆಯೋಜಿಸಲಾಗಿದೆ. ಈ ತರಗತಿಗಳ ಸದುಪಯೋಗಪಡಿಸಿ ಕೊಳ್ಳಲು ಬಯಸುವ ವಿದ್ಯಾರ್ಥಿಗಳು ಬೆಳಿಗ್ಗೆ 9.30ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ 9148935808 / 96204 68869 ಸಂಪರ್ಕಿಸಬಹುದು.

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ Read More »

ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ

ಪುತ್ತೂರು: ಮಕ್ಕಳು ಕಲಿತು ಸಾಧನೆ ಮಾಡಬೇಕಾದರೆ ಕೇವಲ ಶಾಲೆಯಲ್ಲಿ ಕಲಿತರೆ ಮಾತ್ರ ಸಾಲದು. ಮಕ್ಕಳಿಗೆ ಮನೆಯಲ್ಲಿ ಓದುವ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದ್ದು,  ಅದು ಪೋಷಕರ ಕರ್ತವ್ಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.  ಶಿಕ್ಷಣ ಇಲಾಖೆ, ಮಣಿಕ್ಕರ ಸ.ಪ್ರೌಢಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಶ್ರಯದಲ್ಲಿ 2022-23ನೇ ಸಾಲಿನ ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ, ನಿವೃತ್ತ ಶಿಕ್ಷಕರಿಗೆ, ದಾನಿಗಳಿಗೆ ಸಮ್ಮಾನ ಹಾಗೂ ಪಾಲ್ತಾಡು ನ್ಯೂ ಬ್ರದರ್ಸ್ ನವರು ಶಾಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಟೀ ಶರ್ಟ್ ಅನಾವರಣ

ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ Read More »

ರಾಷ್ಟ್ರಮಟ್ಟದ ಇನ್‍ಸ್ಪೆಯರ್ ಅವಾರ್ಡ್ ಮನಕ್ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗಿ

ಪುತ್ತೂರು: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅ.9 ರಿಂದ 11ರ ವರೆಗೆ ನವದೆಹಲಿಯಲ್ಲಿ ನಡೆಸಿದ 2021-22ನೇ ಸಾಲಿನ ಇನ್‍ಸ್ಪೆಯರ್ ಅವಾರ್ಡ್ ಮನಕ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗವಹಿಸಿ, ತಮ್ಮ “Medicinal wax from Kokum seeds” (Ko-Wax) ವಿಜ್ಞಾನ ಯೋಜನೆಯನ್ನು ಪ್ರಸ್ತುತಪಡಿಸಿದ್ದಾರೆ. ಪೃಥ್ವಿರಾಜ್ ಪ್ರಭು ಮುಕ್ರಂಪಾಡಿ ನಿವಾಸಿ ಪುಂಡಲೀಕ ಪ್ರಭು ಹಾಗೂ ನಾಗಮಣಿ ಪ್ರಭು ದಂಪತಿ ಪುತ್ರ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವಾಗ ವಿಜ್ಞಾನ ಯೋಜನೆಯನ್ನು ತಯಾರಿಸಿ, ಜಿಲ್ಲಾ

ರಾಷ್ಟ್ರಮಟ್ಟದ ಇನ್‍ಸ್ಪೆಯರ್ ಅವಾರ್ಡ್ ಮನಕ್ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗಿ Read More »

ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದ್ಯಮಿ ರಾಕೇಶ್ ಬೆಂಗಳೂರು ಅವರು 1 ಲಕ್ಷ ರೂ. ದೇಣಿಗೆ ನೀಡಿದರು. ಬುಧವಾರ ಕಾಲೇಜಿಗೆ ಆಗಮಿಸಿದ ಅವರು, ಪ್ರಾಂಶುಪಾಲ ಸೋಮಶೇಖರ್ ನಾಯಕ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು. ಕಾಲೇಜಿನಲ್ಲಿ ನಡೆಯುವ ಸ್ಪರ್ಧಾತ್ಮಕ ಪರಿಕ್ಷಾ ತರಬೇತಿ ಕಾರ್ಯಕ್ಕೆ, ಕಾಲೇಜಿನ ಗಾರ್ಡನಿಂಗ್, ತೂಗು ಹೂದಾನಿ ಅಳವಡಿಕೆ ಮತ್ತು ಹೂದಾನಿ ಅಳವಡಿಕೆಗಾಗಿ ಈ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭ ಉಪನ್ಯಾಸಕರಾದ ಸವಿತಾ ಕೈಲಾಸ್,

ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ Read More »

ಸರಸ್ವತಿ ಮುಂದೆ ಹಾರ ಬದಲಿಸಿಕೊಂಡ ನವದಂಪತಿಗಳು

ಪುತ್ತೂರು: ಗುರು ಹಿರಿಯರ ಆಶೀರ್ವಾದ ಪಡೆಯುವ ವಧೂ-ವರರಿಗೆ  ಸಂಸ್ಕಾರವನ್ನು ಕೊಡುವ ಒಂದು ವಿಧಿಯೇ ಮದುವೆ. ಪ್ರಕೃತಿಯ ಶಿಶುವಾದ ಮಾನವನು ಸಂಸ್ಕೃತಿಯಿಂದ ವಿಕಸಿತನಾಗಿ, ವಿಕೃತಿಯೆಡೆಗೆ ಜಾರದಂತೆ ಧರ್ಮಾಚರಣೆಯಲ್ಲಿ ತೊಡಗಿ ಸಮೃದ್ಧಿ, ಸಂಸ್ಕೃತಿ ಎರಡರಲ್ಲೂ ಸಮತೋಲನ ಕಾಪಾಡಿಕೊಳ್ಳಬೇಕು. ಮಾತೃಧರ್ಮ ಪಾಲನೆಯೊಂದಿಗೆ  ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡುತ್ತಾ, ಅವರನ್ನು ಕುಟುಂಬದ, ತನ್ಮೂಲಕ ದೇಶದ ಆಸ್ತಿಯನ್ನಾಗಿ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು.ರಾಮಣ್ಣ ಹೇಳಿದರು. ಅವರು ಇಲ್ಲಿಯ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಮಾತನಾಡಿದರು.

ಸರಸ್ವತಿ ಮುಂದೆ ಹಾರ ಬದಲಿಸಿಕೊಂಡ ನವದಂಪತಿಗಳು Read More »

ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಧನ್ಯ ಪಿ. ಆಯ್ಕೆ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಧನ್ಯ.ಪಿ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ವಯ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿ ಆಯ್ಕೆಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಕ್ಷೇತ್ರದ ದಿಗ್ಗಜ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ

ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಧನ್ಯ ಪಿ. ಆಯ್ಕೆ Read More »

error: Content is protected !!
Scroll to Top