ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಪುತ್ತೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿಮನೆ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ. ಅವರಿಗೆ ಶಿಕ್ಷಕರಾದ ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ತರಬೇತಿ ನೀಡಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »










