ಕ್ಯಾಂಪಸ್‌

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪರಿಮಳಾ ಎನ್.ಎಂ.ಗೆ ಸನ್ಮಾನ

ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಡೆದ 149ನೇ ಗಾಂಧೀ ಜಯಂತಿ ಆಚರಣೆ ಸಂದರ್ಭ ಪರಿಮಳಾ ಎನ್.ಎಂ. ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷಾ ಶಿಕ್ಷಕಿಯಾಗಿರುವ ಪರಿಮಳಾ ಎನ್.ಎಂ. ಅವರು ಇತ್ತೀಚೆಗೆ ಬೆಳಗಾವಿಯ ಕನ್ನಡ ದೈನಿಕ ಸಂಸ್ಥೆಯಿಂದ ಸಾವಿತ್ರಿ ಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನ ಮಾಡಲಾಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ, ಪರಿಮಳಾ ಅವರ ಶ್ರಮದ ಪರಿಣಾಮವಾಗಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಸನ್ಮಾನದಿಂದ ನಮ್ಮ ಶಿಕ್ಷಕಿಯವರಿಗೆ […]

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪರಿಮಳಾ ಎನ್.ಎಂ.ಗೆ ಸನ್ಮಾನ Read More »

ಪರ್ಪುಂಜ ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ, ಸನ್ಮಾನ | ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ಅಶೋಕ್ ರೈ

ಪುತ್ತೂರು: ತಮ್ಮ ಪ್ರತಿಷ್ಠೆಗೋಸ್ಕರ ಅಲ್ಲೊಂದು ಶಾಲೆ, ಇಲ್ಲೊಂದು ಶಾಲೆ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಿಲ್ಲ. ಇರುವ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಆಗಬೇಕಾಗಿದೆ. ಆದಕ್ಕಾಗಿ ಈಗ ಇರುವ ಶಾಲೆಗಳನ್ನು ವಿಲೀನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರಕಾರ ಕೂಡ ಚಿಂತನೆ ಮಾಡುತ್ತಿದೆ. ಇದಲ್ಲದೆ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗಳಿಗೆ ಕರೆದುಕೊಂಡು ಹೋಗಲು ಬಸ್ಸಿನ ವ್ಯವಸ್ಥೆಯನ್ನು ಮಾಡುವ ಬಗ್ಗೆಯೂ ಸರಕಾರ ಚಿಂತನೆ ನಡೆಸಿದೆ ಎಂದು ಶಾಸಕ ಅಶೋಕ್

ಪರ್ಪುಂಜ ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ, ಸನ್ಮಾನ | ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ಅಶೋಕ್ ರೈ Read More »

ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ : ಚಿದಾನಂದ ಬೈಲಾಡಿ | ಅಂಬಿಕಾ ಕಾಲೇಜಿನ ಎನ್.ಎಸ್.ಎಸ್. ತಂಡದಿಂದ ನಗರದಲ್ಲಿ ಜಾಗೃತಿ ಅರಿವು

ಪುತ್ತೂರು: ನಾವಿಂದು ಚಂದ್ರಲೋಕಕ್ಕೂ ಅಡಿಯಿಡುವ ಯೋಗ್ಯತೆಯನ್ನು ಸಂಪಾದಿಸಿದ್ದೇವೆ. ಆದರೆ ಪಕ್ಕದ ಮನೆಗೆ ಹೋಗಲಾರದಷ್ಟು ಸಮಯಹೀನರಾಗಿದ್ದೇವೆ. ಮನುಷ್ಯನ ಮೌಲ್ಯಗಳು ಹಂತಹoತವಾಗಿ ಕುಸಿಯುತ್ತಿವೆ. ಆದ್ದರಿಂದ ನಿರ್ನಾಮವಾಗುತ್ತಿರುವ ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ. ನಮ್ಮ ಸುತ್ತಲಿನ ಪರಿಸರವನ್ನು ಚೆನ್ನಾಗಿ ರೂಪಿಸುವ ಗುಣವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಹಿರಿಯ ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಆಯೋಜಿಸಲಾದ ಸ್ವಚ್ಚ ಭಾರತ – ಜಾಗೃತಿ ಅರಿವು ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ

ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ : ಚಿದಾನಂದ ಬೈಲಾಡಿ | ಅಂಬಿಕಾ ಕಾಲೇಜಿನ ಎನ್.ಎಸ್.ಎಸ್. ತಂಡದಿಂದ ನಗರದಲ್ಲಿ ಜಾಗೃತಿ ಅರಿವು Read More »

ಟ್ರಿಪಲ್ ಜಂಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ

ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಇವರು ಪುತ್ತೂರು ತಾಲೂಕನ್ನು ಪ್ರತಿನಿಧಿಸಿ, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ನಿಹಾಲ್ ರಾಜ್ ಅವರು ಕಬಕದ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ. ನಿಹಾಲ್ ರಾಜ್ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಟ್ರಿಪಲ್ ಜಂಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ Read More »

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಪುತ್ತೂರು: ಸುಳ್ಯ ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತು. ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದರು. ನಿವೃತ್ತ ಜಿಲ್ಲಾ ನ್ಯಾಯಾಧೀಶ

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ Read More »

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ…

ಪುತ್ತೂರು: ಅ.6 ಮತ್ತು 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ 204ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು‌ ಮಂದಿಗೆ ಉದ್ಯೋಗ ದೊರೆಯಲಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ವಿದ್ಯಾವಂತ ಯುವಕರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಗ್ರಿ ಕಾಲೇಜು, ಐಟಿಐ ತರಬೇತಿ ಕೇಂದ್ರಗಳು, ಡಿಪ್ಲೋಮಾ ಕೋರ್ಸು‌ಮಾಡಿದವರು, ಬಿಎ, ಬಿಕಾಂ,

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ… Read More »

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ, ಬೀದಿ ನಾಟಕ, ಜಾಥಾ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್‌.ಸಿ.ಸಿ.ಯ ಭೂದಳ ಮತ್ತು ನೌಕಾದಳ, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಹಾಗೂ ಇಕೋ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಗಾಂಧೀಜಿಯವರ ಕನಸಾಗಿತ್ತು. ಸ್ವಚ್ಛತೆ ನಮ್ಮ ಮನೆ ಪರಿಸರ ಗ್ರಾಮದಿಂದ ಪ್ರಾರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿರಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಕೇಂದ್ರ ಸರಕಾರವು ಸ್ವಚ್ಛತೆಗೆ ಹಲವು ಮಾನದಂಡಗಳನ್ನು ನಿಯೋಜಿಸಿದೆ. ಅವುಗಳನ್ನೆಲ್ಲ ಪಾಲಿಸಿದ್ದೇ

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ, ಬೀದಿ ನಾಟಕ, ಜಾಥಾ Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ Read More »

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಧನ್ವಿತ್ ಹಾಗೂ ಅನಿಕೇತ್ ಎನ್. ಅವರು ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಘಟಕ ಹಾಗೂ ಮಂಗಳೂರಿನ ಬಲ್ಮಠದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆಶ್ರಯದಲ್ಲಿ ಮಂಗಳೂರಿನ ಮಂಗಳ ಈಜು ಕ್ಲಬ್’ನಲ್ಲಿ ಸ್ಪರ್ಧೆ ನಡೆದಿತ್ತು. ಪುತ್ತೂರು ಮರೀಲಿನ ಕೇಶವ ಕುಮಾರ್ ಕೆ.ಎಂ. ಮತ್ತು ಮೀನಾಕ್ಷಿ ದಂಪತಿ ಪುತ್ರ ಧನ್ವಿತ್ 100 ಮೀಟರ್ ಫ್ರೀ

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ Read More »

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ

ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ Read More »

error: Content is protected !!
Scroll to Top