ಕ್ಯಾಂಪಸ್‌

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ

ಪುತ್ತೂರು: ಕಲ್ಮಡ್ಕದ ಕಲಾಗ್ರಾಮ ಆಯೋಜಿಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023″ರಲ್ಲಿ ವಿವೇಕಾನಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಪಾಲ್ಗೊಂಡಿದೆ. ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ ಟಿ. ಅವರನ್ನು ಒಳಗೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ತಂಡದಲ್ಲಿದ್ದರು.

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ Read More »

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಬಹಳ ಮಹತ್ವವಿದೆ. ಕುತೂಹಲ ಯಾವಾಗ ಮೂಡುತ್ತದೆಯೋ ಅಲ್ಲಿ ಸಂಶೋಧನೆಗೆ ಮುಂದಾಗುತ್ತಾರೆ. ನಮ್ಮಲ್ಲಿ ಕುತೂಹಲ, ಆಸಕ್ತಿ, ಹಂಬಲ ಇದ್ದಾಗ ನಾವು ಎತ್ತರಕ್ಕೆ ಬೆಳೆಯಲು ಸಾಧ್ಯ. ಇದರಿಂದ ವಿದ್ಯಾರ್ಥಿಗಳು ಬೆಳೆಯುತ್ತಾ ಸಮಾಜವನ್ನು ಬೆಳೆಸಿ ಅದರೊಂದಿಗೆ ದೇಶವು ಬೆಳೆಯುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಚಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಪುತ್ತೂರು ವಿವೇಕಾನಂದ ಇನ್ ಸ್ಟಿಟ್ಯೂಟ್ ಆಪ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿ ನಡೆದ ಮಾಹಿತಿಕಾರ್ಯಾಗಾರ ಮತ್ತು ವಿಶ್ವ ಫಾರ್ಮಸಿಸ್ಟ್

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ Read More »

ಸಣ್ಣ ಪುಟ್ಟ ಅವಕಾಶಗಳನ್ನೂ ಸದ್ಬಳಕೆ ಮಾಡಿಕೊಳ್ಳಬೇಕು: ಅಂಬಿಕಾ ವಿದ್ಯಾಲಯದಲ್ಲಿ ಅನುಪಮ ವೇದಿಕೆ ಕಾರ್ಯಕ್ರಮದಲ್ಲಿ ವಿದ್ವಾನ್ ತೇಜಶಂಕರ ಸೋಮಯಾಜಿ

ಪುತ್ತೂರು: ಯಾರಿಗೂ ಒಂದೇ ಸಲಕ್ಕೆ ಅತ್ಯುತ್ತಮ ವೇದಿಕೆಗಳು ಲಭ್ಯವಾಗುವುದಿಲ್ಲ. ಹಂತಹಂತವಾಗಿ ಬೆಳೆಯುವುದರ ಮೂಲಕ ಉನ್ನತ ವೇದಿಕೆಗಳವರೆಗೆ ತಲುಪುವುದಕ್ಕೆ ಸಾಧ್ಯವಿದೆ. ಹಾಗಾಗಿ ಕಾಲೇಜುಗಳಲ್ಲಿ ದೊರಕುವ ಸಣ್ಣ ಪುಟ್ಟ ಅವಕಾಶಗಳನ್ನೂ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಡೆಸುತ್ತಿರುವ ಅನುಪಮ ಪ್ರತಿಭಾ ವೇದಿಕೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಒಬ್ಬರೊಂದಿಗೆ ಸಾಮಾನ್ಯವಾಗಿ ಮಾತನಾಡುವುದಕ್ಕೂ,

ಸಣ್ಣ ಪುಟ್ಟ ಅವಕಾಶಗಳನ್ನೂ ಸದ್ಬಳಕೆ ಮಾಡಿಕೊಳ್ಳಬೇಕು: ಅಂಬಿಕಾ ವಿದ್ಯಾಲಯದಲ್ಲಿ ಅನುಪಮ ವೇದಿಕೆ ಕಾರ್ಯಕ್ರಮದಲ್ಲಿ ವಿದ್ವಾನ್ ತೇಜಶಂಕರ ಸೋಮಯಾಜಿ Read More »

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ  ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಜ್ವಲ್, ಗಗನ್, ಪ್ರಜ್ವಲ್,  ಶಮಿತ್ ಪ್ರಸಾದ್ ಪಿ, ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್,

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ.

ಪುತ್ತೂರು: ನಾವೆಲ್ಲರೂ ಸಮಾಜದ ಒಂದು ಭಾಗ. ಈ ಸಮಾಜವನ್ನುಳಿದು  ನಮಗೆ ಬೇರೆ ಅಸ್ತಿತ್ವವಿಲ್ಲ. ಆದ್ದರಿಂದ ನಮ್ಮ ಶ್ರೇಯಸ್ಸಿನ  ಸುತ್ತಮುತ್ತಲಿನವರ  ಹಿತದ ಕುರಿತು  ನಾವು ಗಮನ ಹರಿಸುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸುಬ್ರಮಣ್ಯ ವಿಭಾಗದ ಎಂಜಿನಿಯರ್ ಹಾಗೂ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಅಧ್ಯಕ್ಷ ಪ್ರೊಮೋದ್ ಕುಮಾರ್.ಕೆ ಹೇಳಿದರು. ಅವರು  ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನೆ, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಹಾಗೂ ಕಾಲೇಜಿನ ಎನ್‌ಎಸ್‌ಎಸ್

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ. Read More »

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್‌ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್‌

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್ Read More »

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ Read More »

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಶುಭಲತಾರಿಗೆ ಅಭಿನಂದನೆ

ಪುತ್ತೂರು: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾದ ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶುಭಲತಾ ಅವರನ್ನು ಆನಡ್ಕ ಬಿಲ್ಲವ ಗ್ರಾಮ ಸಮಿತಿ ಹಾಗೂ ಶ್ರೀ ಕ್ಷೇತ್ರ ಬಳಗ ಮರಕ್ಕೂರು ವತಿಯಿಂದ ಗೌರವಿಸಲಾಯಿತು. ಶುಭಲತಾ ಅವರು ವಿಶೇಷ ಬದ್ಧತೆಯಿಂದ ಸೇವೆ ಸಲ್ಲಿಸಿ ನಮ್ಮೂರ ಶಾಲೆಯ ಪ್ರಗತಿಗೆ ಶ್ರಮಿಸಿ, ಇದೀಗ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಅರ್ಹವಾಗಿಯೇ ಪುರಸ್ಕೃತರಾಗಿದ್ದಾರೆ ಎಂದು ಹಾರೈಸಲಾಯಿತು. ನಾರಾಯಣ ಸುವರ್ಣ, ವಿನಯ ಮರಕ್ಕೂರು, ಕಿಟ್ಟಣ್ಣ ಪೂಜಾರಿ, ಜಯನಂದ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಶುಭಲತಾರಿಗೆ ಅಭಿನಂದನೆ Read More »

ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು | ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಸುಲೇಖ ಪಿ.ಎಮ್.

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಮಕ್ಕಳ ತಜ್ಞೆ, ಸೈಕೊಥೆರಪಿಸ್ಟ್ ಡಾ.ಸುಲೇಖಾ ಪಿ.ಎಂ. ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ತಮ್ಮ

ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು | ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಸುಲೇಖ ಪಿ.ಎಮ್. Read More »

‘ತೆರೆದ ಮನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು | ಮಹಿಳಾ ಠಾಣೆಯಲ್ಲಿ ಮಕ್ಕಳನ್ನು ಕೂರಿಸಿ ಪಾಠ

ಪುತ್ತೂರು: ‘ತೆರೆದ ಮನೆ’ ಕಾರ್ಯಕ್ರಮದಡಿ  ಇಲ್ಲಿಯ ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು. ಠಾಣೆಯ ಪರಿಚಯ, ಪೊಲೀಸ್ ಕಾರ್ಯಚಟುವಟಿಕೆಗಳು, ಪೋಕ್ಸೋ ಕಾಯಿದೆ, ಸಾಮಾಜಿಕ ಜಾಲತಾಣಗಳಿಂದ ಆಗುವ ತೊಂದರೆ, ಅನಾಮಧೇಯ ಕರೆಗಳು ಮತ್ತು ಮೆಸೇಜುಗಳ  ಕುರಿತು ಮಾಹಿತಿ, ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ 1098, 112 ವಾಹನದ ಉಪಯೋಗ ಹಾಗೂ ಇನ್ನಿತರ ಕಾನೂನು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಠಾಣೆಯ ನಿರೀಕ್ಷಕರು, ಸಿಬ್ಬಂದಿಗಳು, ಶಾಲಾ

‘ತೆರೆದ ಮನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು | ಮಹಿಳಾ ಠಾಣೆಯಲ್ಲಿ ಮಕ್ಕಳನ್ನು ಕೂರಿಸಿ ಪಾಠ Read More »

error: Content is protected !!
Scroll to Top