ಕ್ಯಾಂಪಸ್‌

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಗಣೇಶ ಎಲ್ಲಾ ದೇವತೆಗಳ ಅಧಿದೇವತೆ. ಹಿಂದೂ ಸಮಾಜದಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಜಾರಿಗೆ ತಂದರು. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸುವ ಬಹುದೊಡ್ಡ ಸವಾಲು ನಮ್ಮ ಮುಂದೆ ಇದೆ. ವಿದ್ಯಾರ್ಥಿಗಳ ಯೋಚನೆಯು ಧಾರ್ಮಿಕ ಚಿಂತನೆ ಬೆಳೆಸುವತ್ತ ಇರಬೇಕು. ನಮ್ಮ ದೇಶದ ಮೂಲ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ವಿವೇಕಾನಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ […]

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್ Read More »

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸುರತ್ಕಲ್ ಕಾಟಿಪಳ್ಳ ಇನ್‌ಪೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ವನೀಶ್, ಚಿಂತನ್, ಭವಿಷ್, ಸೃಜನ್, ಕೌಶಿಕ್, ಲಿಖಿತ್, ತೇಜಸ್, ತರುಣ್, ಭಾಸ್ವತ್, ಭವಿತ್, ಕೀರ್ತನ್, ದೇಶ್ಚಿತ್, ಅಭಿಷೇಕ್, ಮನ್ವಿತ್ ಪ್ರತಿನಿಧಿಸಿದ್ದರು. ಶಾಲಾ ಎಂಟನೇ ತರಗತಿ ವಿದ್ಯಾರ್ಥಿನಿ ಯೋಗ್ಯ ಪ್ರಾಥಮಿಕ ಶಾಲಾ ಬಾಲಕಿಯರ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ

ಪುತ್ತೂರು: ಹಿಂದಿ ಭಾಷೆ ಕೇವಲ ರಾಷ್ಟ್ರೀಯ ಭಾಷೆಯಷ್ಟೇ ಅಲ್ಲದೆ ಏಕತೆಯ ಸಂಕೇತವೂ ಹೌದು. ಯಾವುದೇ ಭಾಷೆಯ ಬಗೆಗಿನ ದ್ವೇಷ ಒಳಿತಲ್ಲ. ಅದರಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಂದು ಭಾಷೆಯನ್ನೂ ಗೌರವಿಸಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿಂದಿ ಉಪನ್ಯಾಸಕಿ ಪುಷ್ಪಲತಾ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅಧ್ಯಕ್ಷತೆ

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ Read More »

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಿಳಿನೆಲೆ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ತಂಡ, ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ  ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದಾರೆ.

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಳಚ್ಚಿಲ್‌ನ ಶ್ರೀನಿವಾಸ ಇನ್‌ಸ್ಟಿಟ್ಯೂಶನ್ ಆಫ್ ಫಾರ್ಮಸಿ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಭಿತ್ತಿಚಿತ್ರ ರಚನೆ ಹಾಗೂ ವಿಜ್ಞಾನ ಮಾದರಿ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ವಿದ್ಯಾಲಯದ ವಿದ್ಯಾರ್ಥಿಗಳಾದ ಸಮೀಕ್ಷಾ ಶೆಟ್ಟಿ ಮತ್ತು ಹರ್ಷಿತಾ ಟಿ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದರೆ, ವಿಜ್ಞಾನ ಮಾದರಿ ತಯಾರಿಯಲ್ಲಿ ಪೃಥ್ವಿರಾಜ್ ಪಿ. ಪ್ರಭು, ಕೆ ಶುಭನ್ ಶಣೈ ಹಾಗೂ ಅನಿರುದ್ಧ ಬಿ. ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ Read More »

ಪ್ರಾಣಾಯಾಮ, ಧ್ಯಾನಗಳ ಪರಿಣಾಮಕಾರಿ ಅಭ್ಯಾಸದಿಂದ ದೇಹ, ಮನಸ್ಸು ಸ್ವಸ್ಥ | ಯೋಗ, ಪ್ರಕೃತಿ ಚಿಕಿತ್ಸಾ ಮಾಹಿತಿ ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಹೆಚ್.

ಪುತ್ತೂರು: ಯೋಗ ವಿಶ್ವವ್ಯಾಪಿಯಾಗಿರುವುದು ನಮ್ಮ ಹೆಮ್ಮೆ ಮತ್ತು ಸುಯೋಗ ಎಂದು ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವೈದ್ಯಕೀಯ ಪದವಿ ವಿದ್ಯಾರ್ಥಿನಿ ಪ್ರತೀಕ್ಷಾ ಹೆಚ್. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಆಯುಷ್ ಶಾಖೆಯಾದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಧಾನದ ಮೂಲಕ ವಿವಿಧ ರೋಗಗಳಿಗೆ ಔಷಧ ಹಾಗೂ ಶಸ್ತ್ರಚಿಕಿತ್ಸೆ ರಹಿತ ಪರಿಹಾರವನ್ನು ಕಂಡುಕೊಳ್ಳಬಹುದಾದ ಅನೇಕ ವೈಶಿಷ್ಟ್ಯಗಳ ಬಗ್ಗೆ ಅವರು ಬೆಳಕು

ಪ್ರಾಣಾಯಾಮ, ಧ್ಯಾನಗಳ ಪರಿಣಾಮಕಾರಿ ಅಭ್ಯಾಸದಿಂದ ದೇಹ, ಮನಸ್ಸು ಸ್ವಸ್ಥ | ಯೋಗ, ಪ್ರಕೃತಿ ಚಿಕಿತ್ಸಾ ಮಾಹಿತಿ ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಹೆಚ್. Read More »

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆ ಸೆ. 18ರಂದು ಎರಡನೇ ವರ್ಷಕ್ಕೆ ಕಾಲಿಟ್ಟಿದೆ. 2ನೇ ವರ್ಷದ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಕುಂಟ್ಯಾನ, ನಿರ್ದೇಶಕರಾದ ಮುರಳೀಧರ ಕೆ.ಎಲ್., ನಾಗೇಶ್ ಕೆಡೆಂಜಿ, ವಸಂತ ವೀರಮಂಗಲ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ನಿರ್ದೇಶಕರಾದ ಕೇಶವ ಅಮೈ ಕಲಾಯಿಗುತ್ತು, ಸತೀಶ್ ಪಾಂಬಾರು, ಪ್ರೇರಣಾ ಸಂಸ್ಥೆಯ ಪ್ರಬಂಧಕರಾದ ದಯಾಮಣಿ ನಾಗೇಶ್, ಪಿ.ಆರ್‍.ಒ. ಮೋಕ್ಷಿತ ಕೂಟೇಲು, ಆಶಾಲತಾ ಸತೀಶ್ ಪಾಂಬಾರು, ಮಮತಾ

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ Read More »

ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ

ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಫುಲೆ ‘ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ. 24ರಂದು ಭಾನುವಾರ ಬೆಳಗಾವಿಯ ಗೋಕಾಕ ನಾಡಿನ ಸಮಾಚಾರ ಕನ್ನಡ ದೈನಿಕ ನೀಡಲಿರುವ ಈ ಪ್ರಶಸ್ತಿಗೆ, ಪರಿಮಳ ಎನ್.ಎಂ. ಅವರ ‘ಸಾಹಿತ್ಯ ಮತ್ತು ಶಿಕ್ಷಣ’ ವಿಭಾಗದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ Read More »

ಹ್ಯಾಮರ್, ಶಾಟ್‍ಪುಟ್ : ಸಿಂಚನಾ ಬಿ. ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಮಂಡ್ಯದ ಕೆರೆಗೋಡುನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಹ್ಯಾಮರ್ ತ್ರೋ ಮತ್ತು ಶಾಟ್‌ಪುಟ್ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ಪ್ರಥಮ ಸ್ಥಾನ ಪಡೆದು ಅಕ್ಟೋಬರ್‌ನಲ್ಲಿ ಹೈದರಾಬಾದ್ ನಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ಬೆಟ್ಟಂಪಾಡಿ ಬೈಲಾಡಿ ನಿವಾಸಿ ನಿತ್ಯಾನಂದ ಮತ್ತು ನಮಿತಾ ಕೆ.ಕೆ. ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಹ್ಯಾಮರ್, ಶಾಟ್‍ಪುಟ್ : ಸಿಂಚನಾ ಬಿ. ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ Read More »

ಸೇವೆಯೇ ಎನ್‍.ಎಸ್‍.ಎಸ್‍ ಘಟಕದ ಧ್ಯೇಯ | ಮಾಹಿತಿ ಕಾರ್ಯಕ್ರಮದಲ್ಲಿ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ 2023-24 ರ  ಶೈಕ್ಷಣಿಕ ವರ್ಷದ ಮಾಹಿತಿ ಕಾರ್ಯಕ್ರಮ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ|ಡಾ| ಅಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್. ಘಟಕ ಬಹಳ ಪ್ರಮುಖ ಘಟಕವಾಗಿದ್ದು, ಸೇವೆ ನೀಡುವ ಘಟಕವಾಗಿದೆ. ಸೇವೆಯೇ ಅದರ ಧ್ಯೇಯವಾಗಿರುತ್ತದೆ.  “ನನಗಾಗಿ ಅಲ್ಲ ನಿನಗಾಗಿ” ಎಂಬ ಧ್ಯೇಯ ವಾಕ್ಯದಡಿ ಕಾರ್ಯನಿರ್ವಹಿಸುವ ಎನ್.ಎಸ್.ಎಸ್.ನಂತಹ ಘಟಕಗಳಲ್ಲಿ ಸ್ವಯಂಸೇವಕರಾಗಿರುವ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ವಾಸುದೇವ

ಸೇವೆಯೇ ಎನ್‍.ಎಸ್‍.ಎಸ್‍ ಘಟಕದ ಧ್ಯೇಯ | ಮಾಹಿತಿ ಕಾರ್ಯಕ್ರಮದಲ್ಲಿ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ Read More »

error: Content is protected !!
Scroll to Top