ಕ್ಯಾಂಪಸ್‌

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಯಾಗಿ ಧಾರ್ಮಿಕ ಉಪನ್ಯಾಸಕ ದಾಮೋದರ ಶರ್ಮ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ ಆಚಾರ್ಯ ಹಿಂದಾರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಾಕೇಶ್‍ ರೈ ಕೆಡೆಂಜಿ, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಸದಸ್ಯ ಹರೀಶ್‍  ಮುಖ್ಯ ಶಿಕ್ಷಕ ಪ್ರಸನ್ನ, ಕೆ., […]

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿ ಮಂಡಲ ರಚನೆ | ಮುಖ್ಯಮಂತ್ರಿಯಾಗಿ ಶಿವಶನ್ಮಯಿ, ಉಪ ಮುಖ್ಯಮಂತ್ರಿಯಾಗಿ ಖದೀಜತ್ ರಿಝಾ

ಪುತ್ತೂರು: ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಸಾಲಿನ ಮಂತ್ರಿಮಂಡಲ ಮಕ್ಕಳ ಚುನಾವಣೆ ಮೂಲಕ ನಡೆದು ಮುಖ್ಯಮಂತ್ರಿಯಾಗಿ ಶಿವಶನ್ಮಯಿ ಮತ್ತು ಉಪ ಮುಖ್ಯಮಂತ್ರಿಯಾಗಿ ಖದಿಜತ್ ರಿಝಾ ಆಯ್ಕೆಯಾದರು. ಕ್ರೀಡಾಮಂತ್ರಿಯಾಗಿ ಯಶ್ವಿತ್, ಉಪಮಂತ್ರಿಯಾಗಿ ನಿಖಿಲ್, ಸಾಂಸ್ಕೃತಿಕ ಮಂತ್ರಿಯಾಗಿ ಶ್ರೀದೇವಿ, ಉಪಮಂತ್ರಿಯಾಗಿ ವರ್ಷಾ, ಸ್ವಚ್ಛತಾ ಮಂತ್ರಿಯಾಗಿ ಅಶ್ವಿನಿ, ಉಪಮಂತ್ರಿಯಾಗಿ ರುಸೈನಾ, ಆರೋಗ್ಯ ಮಂತ್ರಿಯಾಗಿ ತನುಶ್ರೀ ಉಪಮಂತ್ರಿಯಾಗಿ ಲಕ್ಷಿತಾ, ಶಿಕ್ಷಣ ಮಂತ್ರಿಯಾಗಿ ಅಬ್ಝಲ್, ಉಪಮಂತ್ರಿಯಾಗಿ ಚಿಂತನ, ನೀರಾವರಿ ಮಂತ್ರಿಯಾಗಿ ನಮೃತ್, ಉಪಮಂತ್ರಿಯಾಗಿ ನಿಖಿಲ್,ಆಹಾರ ಮಂತ್ರಿಯಾಗಿ ಶಾಶ್ವತ್, ಉಪಮಂತ್ರಿಯಾಗಿ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿ ಮಂಡಲ ರಚನೆ | ಮುಖ್ಯಮಂತ್ರಿಯಾಗಿ ಶಿವಶನ್ಮಯಿ, ಉಪ ಮುಖ್ಯಮಂತ್ರಿಯಾಗಿ ಖದೀಜತ್ ರಿಝಾ Read More »

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ​​ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು  ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ​​ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯವನ್ನು ಉತ್ತಮ  ರೂಪಿಸಲು ಏವಿಯೇಷನ್ ​​ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ​​ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ  ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪಿಎಂಶ್ರೀ ಆಚರಿಸಿ ಜಾಗೃತಿ ಮೂಡಿಸಲಾಯಿತು. ಇಲಾಖೆ ಒದಗಿಸಿದ ಪ್ರಮಾಣ ವಚನ ಬೋಧಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ತಾರಾನಾಥ ಸವಣೂರು, ಶಿಕ್ಷಕರಾದ ಹರಿಣಾಕ್ಷಿ, ಶೋಬಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಯೋಗ ಶಿಕ್ಷಕ ಹಿಮತ್ ಉಪಸ್ಥಿತರಿದ್ದರು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ Read More »

ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಶ್ರದ್ಧಾಂಜಲಿ

ಪುತ್ತೂರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಸಂತಾಪ ಸೂಚಿಸಲಾಯಿತು. ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಮೃತ ಪಟ್ಟಿದ್ದು, ಅವರಿಗೆ ಇಂದು ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್, ಮುಖ್ಯ ಶಿಕ್ಷಕ ಪ್ರಸನ್ನ ಕೆ, ಶಿಕ್ಷಕರು -ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಶ್ರದ್ಧಾಂಜಲಿ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ವಿಜ್ಞಾನ’ವೃತಿಕಾ’ಸಂಘದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. 2025-26 ನೇ ಸಾಲಿನ ವಿಶ್ವ ಪರಿಸರ ದಿನದಧ್ಯೇಯ ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರಕ್ಕೆ ಸಂಬಂಧಿಸಿ ಮಕ್ಕಳ ಮೂಲಕ ಪೋಷಕರಿಗೆ ಪ್ಲಾಸ್ಟಿಕ್ ಬದಲಿ-ಏನು? ಯಾಕೆ?- ಹೇಗೆ? ಎಂಬ ಆಶಯದ ಪತ್ರಕವನ್ನು ನೀಡಲಾಯಿತು. ಮಕ್ಕಳು ತಮ್ಮ ಮನೆಯಲ್ಲಿರುವ ಹಳೆಯ ಬಟ್ಟೆಗಳನ್ನು ಬಳಸಿ ಪರಿಸರ ಸ್ನೇಹಿ ಕೈಚೀಲ ತಯಾರಿಸಿದರು. ಪರಿಸರ ಸಂರಕ್ಷಣಾ ಘೋಷ ವಾಕ್ಯಗಳೊಂದಿಗೆ ಮಕ್ಕಳು ಹಾಗೂ ಶಿಕ್ಷಕರು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು. ಪ್ರೌಢ ವಿಭಾಗದ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ Read More »

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ

ಪುತ್ತೂರು: ತಾಲೂಕಿನ ಪುಷ್ಠಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ  ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿದ ದ.ಕ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಶಾಲೆಯಲ್ಲಿ ನಡೆಯುವ ಶೈಕ್ಷಣಿಕ  ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತರಗತಿ ಕೋಣೆಗೆ ಪ್ರವೇಶಿಸಿ ಮಕ್ಕಳನ್ನು ಮಾತನಾಡಿಸಿದರು. ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ ಮಕ್ಕಳೊಂದಿಗೆ ಬಿಸಿ ಊಟದ ರುಚಿ ಸವಿದರು. ಪಿಎಂಶ್ರೀ ಚಟುವಟಿಕೆಗಳು, ಶಾಲೆಯ ಸ್ವಚ್ಛತೆ. ಮಿಯಾವಾಕಿ

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ Read More »

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ

ಪುತ್ತೂರು: ಶಿಕ್ಷಣ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ವೇದಿಕೆಯನ್ನು ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ತಮ್ಮ ಬೆಳವಣಿಗೆಯ ನಿರೀಕ್ಷೆಗಳನ್ನು ಸುಧಾರಿಸಲು ಸಹಾಯವಾಗುತ್ತದೆ. ಇದಕ್ಕೆ ಪೂರಕವಾಗಿ ಗ್ರಾಮವಿಕಾಸ ಸಮಿತಿಯ ಯೋಜನೆಗಳು ಕಾರ್‍ಯನಿರ್ವಹಿಸುತ್ತದೆ. ಗ್ರಾಮೀಣ ಪ್ರಗತಿಯಿಂದ ಮಾತ್ರ ರಾಷ್ಟ್ರವು ಅಭಿವದ್ಧಿಯ ಪಥದಲ್ಲಿ ಮುಂದುವರಿಯಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್‍ಯನಿರ್ವಾಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರಪ.ಪೂ.ಕಾಲೇಜಿನ ಕುರಿಯ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈಯವರು

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ Read More »

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ,  1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್ ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ Read More »

error: Content is protected !!
Scroll to Top