ಕ್ಯಾಂಪಸ್‌

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ

ಪುತ್ತೂರು: ಮೂರು ದಿನಗಳ ಕಾಲ ನಡೆದ ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್ ಅಹಮದಾಬಾದ್ ಇದರ ಮುಖ್ಯಸ್ಥ ಡಾ. ಎ.ವಿ. ರವಿಕುಮಾರ್ ಹೇಳಿದರು. ಪ್ಲಾಸ್ಮಾ ಸಂಶೋಧನಾ ಕೇಂದ್ರ, ಅಹಮದಾಬಾದ್ ಮತ್ತು  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಪುತ್ತೂರು, ಐಕ್ಯುಎಸಿ  ಮತ್ತು ವಿಜ್ಞಾನ ಸಂಘದ ಸಹಯೋಗದಲ್ಲಿ ನಡೆದ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದ […]

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ Read More »

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಮರೀಲ್ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್  ಚಿತ್ರಕಲೆ-ಪ್ರಥಮ, ಸಾನ್ವಿ ಕ್ಲೇ ಮಾಡೆಲಿಂಗ್- ಪ್ರಥಮ, ಮಾತಂಗಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ Read More »

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಸ್ನಾತಕೋತ್ತರ ಪದವಿಯ ದ್ವಿತೀಯ ಸೆಮಿಸ್ಟರ್ ಫಲಿತಾಂಶವು ಆ.31 ರಂದು ಪ್ರಕಟವಾಗಿದೆ. ಕಾಲೇಜಿನ ವೆಬ್‌ಸೈಟ್‌  vcputtur.ac.in ನಲ್ಲಿ  ಪ್ರಕಟವಾಗಿದೆ. ಒಟ್ಟು ಶೇ.96 ಉತ್ತೀರ್ಣತೆ ದಾಖಲಾಗಿದ್ದು, ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಕಾಂ. ಶೇ.100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.40 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಶ್ರೀಧರ ಎಚ್.ಜಿ. ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ Read More »

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು : ನಮ್ಮ ಹಿರಿಯರಲ್ಲಿ ವೈಜ್ಞಾನಿಕ ಮನೋಭಾವ ಆಗಲೇ ಇತ್ತು. ಅದು ಇಂದು ಸಂಶೋಧನಾ ರೂಪದಲ್ಲಿ ಜಗತ್ತಿನ ವೈಜ್ಞಾನಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಭಾರತೀಯ ವಿಜ್ಞಾನಿಗಳ ವೈಜ್ಞಾನಿಕ ಸಂಶೋಧನೆ ಅದು ಜಗತ್ತಿನ ಹಿತಕ್ಕಾಗಿ ಆಗಿರುತ್ತದೆ. ಅದರಿಂದ ವಿಜ್ಞಾನಿಗಳ ಮನಸ್ಸಿಗೆ ಸಂತೃಪ್ತತೆ ಸಿಗುತ್ತದೆ. ಚಂದ್ರಯಾನ-3 ರ ಯಶಸ್ಸು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಇಂದಿನ ಪ್ಲಾಸ್ಮಾ ತಂತ್ರಜ್ಞಾನ ಕುರಿತಾದ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ Read More »

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಮತ್ತು ಮಂಗಳೂರು ಜಿಲ್ಲೆಯ ಜಿಲ್ಲಾ ಸಂಘಟನಾ ಕಾರ್‍ಯದರ್ಶಿಯಾದ ಶ್ರೀರಾಮ್ ಅಂಗಿರಸ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ Read More »

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ  ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್‍. 14 ವಯೋಮಿತಿಯ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈಕೆ ಪುತ್ತೂರು ತಾಲೂಕಿನ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಹಾಗೂ ಸುಜಿತಾ ದಂಪತಿ ಪುತ್ರಿ. ಪ್ರಗತಿ ಶಾಲಾ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ Read More »

ಪಾಪೆಮಜಲು ಹಿ ಪ್ರಾ ಶಾಲೆ ವಿವೇಕ ತರಗತಿ ಉದ್ಘಾಟನೆ, ಅಭಿನಂದನೆ | ಸರಕಾರಿ ಶಾಲೆಗಳಲ್ಲಿ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಮಾಡಲಿದೆ: ಅಶೋಕ್ ರೈ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಕೆಲವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುವ ಕೆಲಸವನ್ನು ಮಾಡುತ್ತಿದ್ದಾರೆ, ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ಮಾತ್ರ ದೊರೆಯಲು ಸಾಧ್ಯ, ಸರಕಾರಿ ಶಾಲೆಗಳಲ್ಲಿನ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಹಂತ ಹಂತವಾಗಿ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲಿ ನಡೆದ ವಿವೇಕ ಕೊಠಡಿ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ

ಪಾಪೆಮಜಲು ಹಿ ಪ್ರಾ ಶಾಲೆ ವಿವೇಕ ತರಗತಿ ಉದ್ಘಾಟನೆ, ಅಭಿನಂದನೆ | ಸರಕಾರಿ ಶಾಲೆಗಳಲ್ಲಿ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಮಾಡಲಿದೆ: ಅಶೋಕ್ ರೈ Read More »

ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಕಾರಿಯಾಗಿದೆ- ಶೇಷಪ್ಪ ಗೌಡ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು. ವಿಟ್ಲ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಕ್ರೀಡೆಗಳು

ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಕಾರಿಯಾಗಿದೆ- ಶೇಷಪ್ಪ ಗೌಡ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್‌ರಾಮ್ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಪುತ್ತೂರು : ಪದವಿ ಪೂರ್ವ ಶಿಕ್ಷಣ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿದೆ. ಬಾಲಕಿಯರ ವಿಭಾಗವನ್ನು ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಪ್ರತಿನಿಧಿಸಿದ್ದರು. ಬಾಲಕರ

ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್‌ರಾಮ್ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ Read More »

error: Content is protected !!
Scroll to Top