ಕ್ಯಾಂಪಸ್‌

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು : ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರ ಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ. ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ರೈತ ಸಮುದಾಯ ಸೇರಿದಂತೆ ಕೇರಳದ ಎಲ್ಲರಿಗೂ ಇದು ಬಹಳ ದೊಡ್ಡ ಹಬ್ಬ. ಹೊಸತನ,ವೈವಿಧ್ಯತೆಯನ್ನು ಹೊಂದಿರುವ ಈ ಆಚರಣೆಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ […]

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ Read More »

ಯೋಗಾಸನ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬೆಳಗಾವಿ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ದುರ್ಗಾಪ್ರಸಾದ್, ರಿತೇಶ್, ಸ್ಕಂದ ಬಳ್ಳಕ್ಕುರಾಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.  ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಜ್ಞಾ ನಿಡ್ವಣ್ಣಾಯ, ಸಾಧನಾ ಗುಂಪು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೀರ್ತಿ ಕುಲಾಲ್ ಪ್ರೌಢ  ಶಾಲಾ ಬಾಲಕರ ವಿಭಾಗದ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ

ಯೋಗಾಸನ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ Read More »

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಮೀಕ್ಷ ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್ 28 ರಿಂದ 30 ರವರೆಗೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೋಕ್ಷಿತಾ, ಶಿವಕುಮಾರ್, ದ್ವಿತೀಯ ವಿಜ್ಞಾನ ವಿಭಾಗದ ನಿಶಾಂತ್  ದ್ವಿತೀಯ ಸ್ಥಾನ ಪಡೆದಿದ್ದಾರೆ.ಜಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ

ಪುತ್ತೂರು: ತಂತ್ರಜ್ಞಾನ ಎಷ್ಟು ಮುಂದುವರಿದರೂ ಕಂಪೆನಿಗಳು ಬಯಸುವ ರೀತಿಯಲ್ಲಿ ನುರಿತ ತಂತ್ರಜ್ಞರು ಸಿಗುತ್ತಿಲ್ಲ ಇದಕ್ಕೆ ಶಿಕ್ಷಣ ವ್ಯವಸ್ಥೆಯ ಪಠ್ಯಕ್ರಮ ಹಾಗೂ ಕಂಪೆನಿಯ ಆವಶ್ಯಕತೆಗಳ ಮಧ್ಯೆ ಇರುವ ಅಂತರವೇ ಕಾರಣ ಎಂದು ಕಾಕುಂಜೆ ಸಾಫ್ಟ್‌ವೇರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತರಬೇತಿ ಮತ್ತು ನೇಮಕಾತಿ ವಿಭಾಗದ ಆಶ್ರಯದಲ್ಲಿ ನಡೆದ ಕಂಪೆನಿ ಕನೆಕ್ಟ್-2023ಕ್ಕೆ ಚಾಲನೆ ನೀಡಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ Read More »

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ ನಡೆಯಿತು.  ಮುಖ್ಯ ಅತಿಥಿಯಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿ, ಭಾರತೀಯ ಸಂವಿಧಾನದಲ್ಲಿನ್ಯಾಯಾಂಗಕ್ಕೆ ಅತ್ಯಮೂಲ್ಯ ಸ್ಥಾನವಿದೆ. ದೇಶದ ಅಭಿವೃದ್ಧಿಯಲ್ಲಿನ್ಯಾಯಾಂಗ ವ್ಯವಸ್ಥೆ ಪರಿಣಾಮಕಾರಿಯಾಗಿದ್ದು, ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆ ಸರ್ವ ಶ್ರೇಷ್ಠ ಹಾಗೂ ಸದೃಢವಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಇದನ್ನು ಅರ್ಥ ಮಾಡಿಕೊಂಡು ಆ ವ್ಯವಸ್ಥೆಯೊಳಗೆ ಜ್ಞಾನವಂತರಾಗಿ ಬರಬೇಕು ಎಂದರು. ವಿವಿಧ ಹಂತಗಳ ನ್ಯಾಯಾಲಯದ ಕಾರ್ಯಕಲಾಪಗಳನ್ನು

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಪ್ರಾಂಶುಪಾಲೆ  ಶೋಭಿತಾ ಸತೀಶ್ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು: ನೆಹರೂನಗರದ ವಿವೇಕಾನಂದ ಸಿ ಬಿ ಎಸ್ ಸಿ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ ಎಸ್, ವಿನೋಭ ಭಾವೆ,  ಅನುಷ್ ಕೆ. ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಶಶಿಕಾಂತ್, ರಂಜಿತ್ ಬಿ ಎಂ, ಜೀತೆಶ್  ಜೆ ಎಸ್ , ಪ್ರಥಮ ಪಿಯುಸಿ ವಿಜ್ಞಾನ  ವಿಭಾಗದ ಸತೀರ್ಥ್,ಅತೀಥ್, ವಿಶ್ರುತ್ ಎನ್, ಪ್ರವೀಣ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ Read More »

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ನಡುಬೈಲು ದೀಪ ಪ್ರಜ್ವಲಿಸಿ, ನಮ್ಮ ಕಾಲೇಜನ್ನು ಆಯ್ಕೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ Read More »

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯವರು ಪುತ್ತೂರಿನ ಆಫೀಸರ್ ಕ್ಲಬ್‌ನಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‌ನಲ್ಲಿ ನಡೆಯುವ ಕ್ಷೇತ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ ಹಾಗೂ  ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗವನ್ನು ವಿದ್ಯಾರ್ಥಿಗಳಾದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಯಶಸ್ ಪ್ರತಿನಿಧಿಸಿದ್ದರು. ಬಾಲಕಿಯರ ವಿಭಾಗವನ್ನು ಪುಣ್ಯ, ಹರ್ಷಿತಾ, ಶ್ರೇಯಾ ರಾವ್, ಅಂಶಿ ಎ

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ Read More »

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ “ಸಮಾವರ್ತನ” ಸಮಾರಂಭ ಆ.26 ಶನಿವಾರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2022-23ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 4ನೇ ರ್‍ಯಾಂಕ್ ಗಳಿಸಿರುವ ಜಾಗೃತಿ.ಜೆ.ನಾಯಕ್ ಹಾಗೂ ಏಳನೇ ರ್‍ಯಾಂಕ್ ಗಳಿಸಿರುವ ದಿವ್ಯಶ್ರೀ.ಎಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ” Read More »

error: Content is protected !!
Scroll to Top