ಕ್ಯಾಂಪಸ್‌

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಬೆಳ್ಳಾರೆಯ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ವಿ ಸೂರ್ಯನಾರಾಯಣ  ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. […]

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಶುಕ್ರವಾರ ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು:  ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕಿಯಾಗಿ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಕಾರ್ಯನಿರ್ವಾಹಕ ಗುರುಪ್ರಸಾದ್ ಕೆ ಎಸ್ ಮಾತನಾಡಿ, ಅಂಚೆ ಕಚೇರಿಯಲ್ಲಿ ಸಿಗುವ ಬ್ಯಾಂಕ್ ಸೇವೆಗಳು, ಅಂಚೆ ವಿಮೆ, ಆಕ್ಸಿಡೆಂಟ್ ಪರಿಹಾರ ವಿಮೆ, ವಿವಿಧ ಪೆನ್ಷನ್ ಫಂಡ್  ಹಾಗೂ ಅಂಚೆ ವಿಭಾಗದಲ್ಲಿ ಇರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಸ್ಟಲ್ ಆರ್ಡರ್, ವಿವಿಧ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ Read More »

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ

ಪುತ್ತೂರು: ವರ್ಷದ ಹನ್ನೆರಡು ತಿಂಗಳುಗಳ ವೈಶಿಷ್ಟ್ಯ ಹಾಗೂ ಕಲ್ಪನೆಯನ್ನು ಹಿಂದಿನ ಕಾಲದ ಹಿರಿಯರು ಅಕ್ಷರಾಭ್ಯಾಸವಿಲ್ಲದಿದ್ದರೂ ತುಳು ಬದುಕನ್ನು ಉಳಿಸಿಕೊಂಡು ಬಂದಿರುತ್ತಾರೆ. ತುಳುನಾಡಿನಲ್ಲಿ ಸಾಕಷ್ಟು ಆಚಾರ ವಿಚಾರಗಳಿವೆ ಅಲ್ಲದೆ ಧಾರ್ಮಿಕತೆ ಮತ್ತು ಸಾಂಸ್ಕೃತಿಕತೆ ನಮ್ಮ ಹಿರಿಯರ ಉಸಿರಾಗಿತ್ತು ಎಂದು ತುಳು ವಿದ್ವಾಂಸಕರಾದ ಕೆ.ಕೆ ಪೇಜಾವರರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಟ್ರಸ್ಟ್‌ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜ್ ವತಿಯಿಂದ ಹಮ್ಮಿಕೊಂಡ ‘ಆಟಿ ಕೂಟ’ವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ಕಾಲದಲ್ಲಿ ಊರಿನ ಮಾರಿ ಓಡಿಸಲು ಆಟಿ ಕಳೆಂಜ ಬರುವುದಾಗಿತ್ತು. ಹಿಂದಿನ ಬಡತನದ

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್‍ಯಕ್ರಮಗಳಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಯೋಚನೆಗಳಿಗೆ ತಮ್ಮನ್ನು ತೆರೆದುಕೊಳ್ಳುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ಚಂದ್ರಶೇಖರ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮದ  ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭರತನಾಟ್ಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ : ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 14ವರ್ಷ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ತಂಡವನ್ನು ರಿತೇಶ್.ಕೆ, ಪ್ರಣಾಮ್.ಎಂ, ಚಿನ್ಮಯಿ.ಸಿ.ಎಸ್, ಪ್ರೀತಮ್, ಮೋಶಿತ್.ಕೆ.ಜೆ, ಯಶ್ಮಿತ್.ಎಂ.ಡಿ, ತೃತೇಶ್.ಬಿ., ಅಶ್ವಿನ್, ಸ್ನೇಹಿತ್ ಕುಮಾರ್, ಜಿತಿನ್.ಕೆ, ನಿವೇದ್  ಮತ್ತು ಮನ್ವಂತ್ ಗೋಪಾಲ್ ಪ್ರತಿನಿಧಿಸಿದ್ದರು. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದು ವರ್ಗ ಅಭಿನಂದಿಸಿದೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ : ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ Read More »

ಅಂಬಿಕಾ ವಿದ್ಯಾಲಯದಲ್ಲಿ “ದೇಶ ವಿಭಜನೆಯ ಭಯಾನಕ ಸ್ಮರಣ ದಿನ”

ಪುತ್ತೂರು: ಸ್ವಾತಂತ್ರ್ಯ ನಮಗೆ ಸುಮ್ಮನೆ ದೊರೆತದ್ದಲ್ಲ. ಬದಲಿಗೆ ಅದು ಹಲವರ ರಕ್ತ ತರ್ಪಣ, ಬಲಿದಾನಗಳ ಪ್ರತಿಫಲ. ಹೀಗಾಗಿ ಅವರ ಸ್ಮರಣೆ ಶಿಕ್ಷಣದ ಜೊತೆ ಜೊತೆಯಲ್ಲಿ ಸಾಗಬೇಕು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಯ ಉಪನ್ಯಾಸಕ, ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಸಂಸ್ಥೆಯಲ್ಲಿ ನಡೆದ “ದೇಶ ವಿಭಜನೆಯ ಭಯಾನಕ ಸ್ಮರಣ ದಿನ” ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ದೇಶವನ್ನು ವಿಭಜಿಸುವ ಎಷ್ಟೇ ಪ್ರಯತ್ನಗಳು ನಡೆದರೂ ಅದು ಸಾಧ್ಯವಾದದ್ದು ಮಾತ್ರ ಸ್ವಾತಂತ್ರ್ಯ ದೊರೆತ ನಂತರವೇ ಎನ್ನುವುದು

ಅಂಬಿಕಾ ವಿದ್ಯಾಲಯದಲ್ಲಿ “ದೇಶ ವಿಭಜನೆಯ ಭಯಾನಕ ಸ್ಮರಣ ದಿನ” Read More »

ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ| ವೀರಮಂಗಲ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಚಾಂಪಿಯನ್, ಬಾಲಕರ ವಿಭಾಗದಲ್ಲಿ ಎರಡು ಪ್ರಥಮ ಬಹುಮಾನಗಳು

ಪುತ್ತೂರು: ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವೀರಮಂಗಲ ಶಾಲೆ ವಿಶೇಷ ಸಾಧನೆ ಗೈದು ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದಿದೆ. ಅಥ್ಲೆಟಿಕ್ ವಿಭಾಗದಲ್ಲಿ  ಪ್ರಜ್ವಲ್ ಪ್ರಥಮ ಸ್ಥಾನ ಹಾಗೂ ರಿದಮಿಕ್ ಯೋಗದಲ್ಲಿ ಪ್ರವೀಣ್ ರಾಜ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ಪ್ರಮೀಳಾ ಮತ್ತು ಹಿತಶ್ರೀ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ರಿದಮಿಕ್ ಯೋಗದಲ್ಲಿ ಹಂಸಿನಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಸ್ನೇಹ, ಭವಿಷ್ಯ

ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ| ವೀರಮಂಗಲ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಚಾಂಪಿಯನ್, ಬಾಲಕರ ವಿಭಾಗದಲ್ಲಿ ಎರಡು ಪ್ರಥಮ ಬಹುಮಾನಗಳು Read More »

ಅಕ್ಷಯ ಕಾಲೇಜಿನಲ್ಲಿ 77 ನೇ ಸ್ವಾತಂತ್ರೊತ್ಸವ  ಆಚರಣೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ, ನಾರಾಯಣ ರೈ ಕುಕ್ಕುವಳ್ಳಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿ77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ನಾವೆಲ್ಲ ಶತಮಾನೋತ್ಸವವನ್ನು ಆಚರಿಸುವಂತಾಗಲಿ. ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸಾಧನೆಯನ್ನು ವಿವಿಧ ಮಾಧ್ಯಮಗಳಲ್ಲಿ ಗಮನಿಸಿದ್ದು, ಇನ್ನೂ ಅನೇಕ ಸಾಧನೆಗಳು ವಿದ್ಯಾರ್ಥಿಗಳಿಂದ ಮೂಡಿ ಬರಲಿ ಎಂದು ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು

ಅಕ್ಷಯ ಕಾಲೇಜಿನಲ್ಲಿ 77 ನೇ ಸ್ವಾತಂತ್ರೊತ್ಸವ  ಆಚರಣೆ Read More »

ಮಾಣಿಲ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ವಿದ್ಯಾರ್ಥಿಗಳಿಗೆ ಅಭಿನಂದನೆ

ಮಾಣಿಲ : ಪ್ರತಿಭೆಯನ್ನು ಬಳಸಿಕೊಳ್ಳುವುದರಲ್ಲಿ ಯಶಸ್ಸು ಅಡಗಿದೆ ಎಂದು ಖ್ಯಾತ ನಿರೂಪಕ , ಹಿನ್ನೆಲೆ ಧ್ವನಿ ಕಲಾವಿದ, ನಟ ಬಡೆಕ್ಕಿಲ ಪ್ರದೀಪ್ ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿ, ಸ್ವಾತಂತ್ರ್ಯೋತ್ತರ  ಭಾರತದ ಸಾಧನೆಗಳು , ವ್ಯಕ್ತಿತ್ವ ನಿರ್ಮಾಣ ಹೀಗೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು. ಎಸ್‍ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ  ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ

ಮಾಣಿಲ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ವಿದ್ಯಾರ್ಥಿಗಳಿಗೆ ಅಭಿನಂದನೆ Read More »

error: Content is protected !!
Scroll to Top