ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ
ಪುತ್ತೂರು: ವರ್ಷದ ಹನ್ನೆರಡು ತಿಂಗಳುಗಳ ವೈಶಿಷ್ಟ್ಯ ಹಾಗೂ ಕಲ್ಪನೆಯನ್ನು ಹಿಂದಿನ ಕಾಲದ ಹಿರಿಯರು ಅಕ್ಷರಾಭ್ಯಾಸವಿಲ್ಲದಿದ್ದರೂ ತುಳು ಬದುಕನ್ನು ಉಳಿಸಿಕೊಂಡು ಬಂದಿರುತ್ತಾರೆ. ತುಳುನಾಡಿನಲ್ಲಿ ಸಾಕಷ್ಟು ಆಚಾರ ವಿಚಾರಗಳಿವೆ ಅಲ್ಲದೆ ಧಾರ್ಮಿಕತೆ ಮತ್ತು ಸಾಂಸ್ಕೃತಿಕತೆ ನಮ್ಮ ಹಿರಿಯರ ಉಸಿರಾಗಿತ್ತು ಎಂದು ತುಳು ವಿದ್ವಾಂಸಕರಾದ ಕೆ.ಕೆ ಪೇಜಾವರರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜ್ ವತಿಯಿಂದ ಹಮ್ಮಿಕೊಂಡ ‘ಆಟಿ ಕೂಟ’ವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ಕಾಲದಲ್ಲಿ ಊರಿನ ಮಾರಿ ಓಡಿಸಲು ಆಟಿ ಕಳೆಂಜ ಬರುವುದಾಗಿತ್ತು. ಹಿಂದಿನ ಬಡತನದ […]










