ಕ್ಯಾಂಪಸ್‌

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮೂಲಭೂತ ಸೌಕರ್ಯ ವೃದ್ದಿ: ಅಶೋಕ್ ರೈ | ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿ ಉದ್ಘಾಟನೆ

ಪುತ್ತೂರು: ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ನೀಗಿಸಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸರಕಾರ ಒತ್ತು ನೀಡಲಿದೆ. ಈ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ವೃದ್ಧಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಕೊಠಡಿಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ. ಶಾಲಾ ಪ್ರಾರಂಭದ ವೇಳೆಯೇ ಶಿಕ್ಷಕರ ಕೊರತೆ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 13,500 ಶಿಕ್ಷಕರ […]

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮೂಲಭೂತ ಸೌಕರ್ಯ ವೃದ್ದಿ: ಅಶೋಕ್ ರೈ | ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿ ಉದ್ಘಾಟನೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲೆ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಬಾಲವರ್ಗದ ಬಾಲಕಿಯರ ಮತ್ತು ಬಾಲವರ್ಗದ ಬಾಲಕರ ಎರಡೂ ವಿಭಾಗಗಳಲ್ಲಿ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲವರ್ಗದ ಬಾಲಕಿಯರ ವಿಭಾಗವನ್ನು ಕೃತಿ, ಶ್ರಾವ್ಯ, ಸಂಧ್ಯಾ , ಶೀಲ, ದೃಷ, ನಳಿನ ಎಚ್.ಬಿ., ಸಿಂಚನ, ನೇಹಾ ಎಂ., ಪಿ ರಕ್ಷಾ, ಪೃಥ್ವಿ, ಭುವಿ ಆರ್., ಧನ್ಯ ಕೆ., ವರ್ಷಾ ಬಿ.ಕೆ., ಹರ್ಷಿತಾ ಜಿ., ಅರ್ಚನಾ, ಯೋಗ್ಯ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿ ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 5 ವರ್ಷ 5 ತಿಂಗಳು ಬದಲು 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು  ಪ್ರಥಮ ಸ್ಥಾನ ಪಡೆದು ಆಗಸ್ಟ್ 12 ಹಾಗೂ 13 ರಂದು ಬೆಂಗಳೂರಿನ ಬೊಮ್ಮಸಂದ್ರ  ಶ್ರೀ ಸರಸ್ವತಿ  ವಿದ್ಯಾನಿಕೇತನದಲ್ಲಿ ನಡೆಯುವ ರಾಜ್ಯ ಮಟ್ಟ ಮಟ್ಟದ ಖೋ ಖೋ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು ವಿದ್ಯಾರ್ಥಿಗಳಾದ ಅಶ್ವಿತ್ ಭಂಡಾರಿ, ಪಿ. ಎಸ್. ವರುಣ್ ಕುಮಾರ್, ಧನುಷ್ ,ಜೀವನ್ ಎಸ್, ಮನ್ವಿತ್ ಬಿ ಗೌಡ, ದೇಶಿಕ್ ಕೆ, ಶ್ರೇಯಸ್ ಪಿ,

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ Read More »

ನರೇಂದ್ರ ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಪ್ರಾರಂಭ

ಪುತ್ತೂರು: ಕರಾಟೆ ಪ್ರಪಂಚದಾದ್ಯಂತ ಅಭ್ಯಾಸ ಮಾಡುವ ಅಗ್ರ ಸಮರ ಕಲೆಗಳಲ್ಲಿ ಒಂದಾಗಿದೆ. ಕರಾಟೆ ಕಲೆ ಆತ್ಮರಕ್ಷಣೆಗಿದ್ದು ಇದರ ತರಬೇತಿ ಪಡೆಯುವುದರಿಂದ ಆತ್ಮಬಲ ಮತ್ತು ಮಾನಸಿಕವಾಗಿ ಸದೃಢದ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರ ಶಿವಪ್ರಸಾದ್ ಡಿ. ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾಟೆ ಸಮನ್ವಯವನ್ನು ಅಭಿವೃದ್ಧಿಪಡಿಸುತ್ತದೆ. ಮತ್ತು ಶಕ್ತಿ ನಮ್ಯತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಿಗೆ

ನರೇಂದ್ರ ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಪ್ರಾರಂಭ Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಟಿದ ಕೂಟ ಆಚರಣೆ

ಪುತ್ತೂರು : ಪ್ರಕೃತಿಯಲ್ಲಿರುವ ಪ್ರತಿಯೊಂದು ಗಿಡಗಳೂ ಔಷಧೀಯ ಸಸ್ಯಗಳೇ ಆಗಿವೆ. ಹಾಗಾಗಿ ಪ್ರತಿಯೊಂದು ಗಿಡದಲ್ಲೂ ಸಕಾರಾತ್ಮಕ ಶಕ್ತಿ ಅಡಗಿದೆ. ಗಿಡಮರಗಳಷ್ಟೇ ಅಲ್ಲದೆ ಇಡಿಯ ಪ್ರಕೃತಿಯೇ ತನ್ನೊಳಗೆ ಔಷಧೀಯ ಅಂಶಗಳನ್ನು ಒಳಗೊಂಡಿದೆ ಎಂದು ನಾಟಿ ವೈದ್ಯ ದೇವಿಪ್ರಸಾದ್ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ’ಆಟಿದ ಕೂಟ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಕೂಡುಕುಟುಂಬಗಳಿದ್ದಾಗ ಈ ಪ್ರಕೃತಿ ಆಧಾರಿತ ನಾಟಿ ವೈದ್ಯ ಹೆಚ್ಚು ಪ್ರಚಲಿತದಲ್ಲಿತ್ತು. ಆದರೆ ವಿಭಕ್ತ ಕುಟುಂಬಗಳು ಹೆಚ್ಚಾದಂತೆ ನಾಟಿ ಪರಂಪರೆಯೂ ನಶಿಸಿ

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಟಿದ ಕೂಟ ಆಚರಣೆ Read More »

ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪುತ್ತೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಜೂನ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುದೇಶ್ ಭಟ್-245 ಅಂಕ, ಆದಿತ್ಯ ನಾರಾಯಣ ಪಿ ಎಸ್-239 ಅಂಕ, ಪ್ರದೀಪ್ ಕೃಷ್ಣ ಐ-202 ಅಂಕ  ಮತ್ತು ಎಸ್ ತ್ವಿಷ-200 ಅಂಕಗಳನ್ನು ಪಡೆದು ತೇರ್ಗಡೆಯಾಗುವುದರ ಮೂಲಕ ಮುಂದಿನ ಹಂತದ ಸಿ ಎ ಇಂಟರ್‌ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ

ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ Read More »

ಪ್ರತಿಷ್ಠಿತ ಪ್ರೇರಣಾ ತರಬೇತಿ ಸಂಸ್ಥೆಯ ಸ್ಮಿತಾ ಎಸ್ ರೈ ಮತ್ತು ಸಿಮ್ರಾನ್ ತಾಜ್ ಅವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ

ಪುತ್ತೂರು: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ಮೂಲಕ ಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಜೂ.2023 ಪ್ರೇರಣಾ ಸಂಸ್ಥೆಯಿಂದ ಸಿ.ಎ.ಫೌಂಡೇಶನ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರಾದ ಸಿಮ್ರನ್ ತಾಜ್ ಹಾಗೂ ಸ್ಮಿತಾ ಎಸ್.ರೈ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಸಿಮ್ರನ್ ತಾಜ್ ಅವರು ಆರ್ಯಾಪು ಗ್ರಾಮದ ಸಂಪ್ಯ ನಿವಾಸಿಯಾದ ಮುಬಾರಕ್ ಪಾಶಾ ಹಾಗೂ ಸಬಿಹಾ ಖನಮ್ ದಂಪತಿ ಪುತ್ರಿ. ಸ್ಮಿತಾ ಎಸ್. ರೈ ಅವರು ಕೊಳ್ತಿಗೆ

ಪ್ರತಿಷ್ಠಿತ ಪ್ರೇರಣಾ ತರಬೇತಿ ಸಂಸ್ಥೆಯ ಸ್ಮಿತಾ ಎಸ್ ರೈ ಮತ್ತು ಸಿಮ್ರಾನ್ ತಾಜ್ ಅವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪುಷ್ಪಲತಾ ಮಾತನಾಡಿ, ಔಷಧೀಯ ಗಿಡಗಳನ್ನು ಬೆಳೆಸುವ ಹವ್ಯಾಸ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ಮಾತು ವೃಕ್ಷಗಳಿಗೂ ಅನ್ವಯಿಸುತ್ತದೆ. ಮರ ಗಿಡಗಳನ್ನು ನಾವು ರಕ್ಷಿಸಿದರೆ ಅವುಗಳು ನಮ್ಮ ಬದುಕನ್ನು ಹಸನಾಗಿಸುತ್ತವೆ. ವಿವೇಕ ಸಂಜೀವಿನಿ ಎಂಬ ಈ ಸುಂದರ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ

ಪುತ್ತೂರು: ಪಕೃತಿ ವಿಕೋಪ ಸೇರಿದಂತೆ ಇತರೆ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಎನ್.ಡಿ.ಆರ್. ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ.ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತುಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ 10 ನೇ ಬೆಟಾಲಿಯನ್ ನ ಟೀಮ್ ಕಮಾಂಡರ್ ಅಜಯ್ ಕುಮಾರ್ ಹೇಳಿದರು. ಪ್ರಕೃತಿ ವಿಕೋಪ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ Read More »

error: Content is protected !!
Scroll to Top