ತುಳು 2ನೇ ರಾಜ್ಯಭಾಷೆ ಮಾಡುವಲ್ಲಿ ಪ್ರಯತ್ನ: ಶಾಸಕಿ ಭಾಗೀರಥಿ ಮುರುಳ್ಯ |ಎಸ್ಎಸ್ಎಲ್ಸಿ ತುಳು ಪರೀಕ್ಷೆಯಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ
ರಾಮಕುಂಜ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2022-23ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷೆ ತುಳು ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನೇತ್ರಾವತಿ ತುಳುಕೂಟ ರಾಮಕುಂಜ ಮತ್ತು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ, ರಾಮಕುಂಜ ಇದರ ಸಹಯೋಗದಲ್ಲಿ ಆ.6 ಭಾನುವಾರ ಬೆಳಿಗ್ಗೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂಗ್ಲಿಷ್ ವ್ಯಾಮೋಹದ ಇಂದಿನ ಸಂದರ್ಭದಲ್ಲೂ ವಿದ್ಯಾರ್ಥಿಗಳು ತುಳು ಕಲಿಕೆಗೆ ಆಸಕ್ತಿ ತೋರ್ಪಡಿಸುತ್ತಿರುವುದು […]










