ಕ್ಯಾಂಪಸ್‌

ತುಳು 2ನೇ ರಾಜ್ಯಭಾಷೆ ಮಾಡುವಲ್ಲಿ ಪ್ರಯತ್ನ: ಶಾಸಕಿ ಭಾಗೀರಥಿ ಮುರುಳ್ಯ |ಎಸ್‌ಎಸ್‌ಎಲ್‌ಸಿ ತುಳು ಪರೀಕ್ಷೆಯಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ರಾಮಕುಂಜ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷೆ ತುಳು ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನೇತ್ರಾವತಿ ತುಳುಕೂಟ ರಾಮಕುಂಜ ಮತ್ತು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ, ರಾಮಕುಂಜ ಇದರ ಸಹಯೋಗದಲ್ಲಿ ಆ.6 ಭಾನುವಾರ ಬೆಳಿಗ್ಗೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂಗ್ಲಿಷ್ ವ್ಯಾಮೋಹದ ಇಂದಿನ ಸಂದರ್ಭದಲ್ಲೂ ವಿದ್ಯಾರ್ಥಿಗಳು ತುಳು ಕಲಿಕೆಗೆ ಆಸಕ್ತಿ ತೋರ್ಪಡಿಸುತ್ತಿರುವುದು […]

ತುಳು 2ನೇ ರಾಜ್ಯಭಾಷೆ ಮಾಡುವಲ್ಲಿ ಪ್ರಯತ್ನ: ಶಾಸಕಿ ಭಾಗೀರಥಿ ಮುರುಳ್ಯ |ಎಸ್‌ಎಸ್‌ಎಲ್‌ಸಿ ತುಳು ಪರೀಕ್ಷೆಯಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ

ಪುತ್ತೂರು: ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು. ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಬೆಂಗಳೂರಿನ ಹೈಕೋರ್ಟ್ ನ್ಯಾಯವಾದಿ ಸುಯೋಗ್ ಹೇರಳೆ. ಇ. ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ Read More »

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ

ಮಾಣಿಲ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ವಿಟ್ಲ ರೋಟರಿ ಕ್ಲಬ್ ನ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗ್ಗಡೆ  ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ  ವಿಟ್ಲ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು  ಹಾಗೂ  ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು. ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಅಧ್ಯಕ್ಷತೆ

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ.ಜಿಲ್ಲಾ ಪಂಚಾಯಿತಿ,  ಸುಳ್ಯ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಗುರುವಾರ  ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತಾ ಟಿ.ರಾವ್ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ. ಈಕೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವರ್ಗ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಸಕ್ತ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಆಶಾ ಕೆ, ಕಾರ್ಯದರ್ಶಿಯಾಗಿ ಯುವರಾಜ ಕೆ, ಆಯ್ಕೆಗೊಂಡರು. ಮಾತೃಭಾರತಿಯ ಅಧ್ಯಕ್ಷೆಯಾಗಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಮಂಜುಳಾ ಆಯ್ಕೆಗೊಂಡರು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ Read More »

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 12 ಹಾಗೂ 13ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಎಂ ವಿ, ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ವರ್ಷಿತಾ ಎಚ್ ವಿ, ತ್ರಿಷಾ, ಕಾರ್ತಿಕಾ, ಪ್ರಣತಿ,ಹರ್ಷಿತಾ ವಿ ವಿ, ಕಲಾ ವಿಭಾಗದ ಧನುಶ್ರೀ,

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ

ಪುತ್ತೂರು: ಮಕ್ಕಳ ಮೂಲಕ ಪೋಷಕರಲ್ಲೂ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಂದ ಪ್ರಾತ್ಯಕ್ಷಿತಗೊಂಡ ವಿಜ್ಞಾನದ ದೈನಂದಿನ ಬದುಕಿಗೆ ಸಂಬಂಧಿಸಿದ ಪ್ರಯೋಗಗಳನ್ನು ನಮಗೂ ತಿಳಿಸುವುದು ಮಕ್ಕಳ ಪ್ರಯತ್ನ ಶ್ಲಾಘನೀಯ ಎಂದು ಪೋಷಕಿ ಆಶಾ ಹೇಳಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ನಡೆದ ವಿಭಾಗವಾರು ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಂದ ಶ್ಲೋಕ, ಅಮೃತ ವಚನ, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆ, ಕನ್ನಡ ಮತ್ತು ಆಂಗ್ಲ ಭಾಷೆಯ ಭಾಷಣ ಹಾಗೂ ವಿಜ್ಞಾನ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ Read More »

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಸಹಯೋಗದೊಂದಿಗೆ ನಡೆದ 14 ರ ವಯೋಮಾನದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ತಂಡಕ್ಕೆ ಶಾಲಾ ಶಿಕ್ಷಕರಾದ ಸಂತೋಷ್

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ನಡೆಯಿತು. ದ.ಕ.ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಾಥ್ ರೈ

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಪುತ್ತೂರು: ಮಾನವನ ಆರ್ಥಿಕಾಭಿವೃದ್ಧಿ ಹಾಗೂ ಕೊಳ್ಳುಬಾಕತನವು ಪರಿಸರದ ಮೇಲೆ ಅಗಾಧ ದುಷ್ಪರಿಣಾಮ ಬೀರುತ್ತಿದ್ದು, ಮಾಲಿನ್ಯ ಮುಕ್ತ ಪ್ರಕೃತಿಯನ್ನು ಬೆಳೆಸಿ, ಉಳಿಸಿ ಅದರ ಜತೆ ನಾವೂ ಬೆಳೆಯುವ ಸಂಕಲ್ಪವನ್ನು ಮಾಡಬೇಕು ಎಂದು ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಮತ್ತು ಯೂತ್ ರೆಡ್‌ಕ್ರಾಸ್ ವಿಭಾಗಗಳ ಆಶ್ರಯದಲ್ಲಿ ನಡೆದ ವಿಶ್ವ ಪ್ರಕೃತಿ ಸಂರಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ Read More »

error: Content is protected !!
Scroll to Top