ಕ್ಯಾಂಪಸ್‌

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ

ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ […]

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಈ ಬಾರಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದನ್ನು ಸರಿದೂಗಿಸಲು ನವೆಂಬರ್ 4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ ನಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಾರಿ ಮಳೆಯಿಂದ ಶಾಲೆಗಳಿಗೆ 6 ದಿನ ರಜೆ ನೀಡಲಾಗಿತ್ತು. ರಜೆಯನ್ನು ಸರಿದೂಗಿಸುವ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನದ ಬಳಿಕವೂ ಪಾಠಗಳನ್ನು ಮಾಡುವ ಮೂಲಕ ದಿನಪೂರ್ತಿ ತರಗತಿ ನಡೆಯಲಿದೆ. ಈ ಕುರಿತು ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದ್ದು, ನ.4 ರ ವರೆಗೆ ಅಂದರೆ 12 ಶನಿವಾರದಂದು ತರಗತಿ

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಾವೆಲ್ಲರೂ ಜಗತ್ತಿನಲ್ಲಾಗುತ್ತಿರುವ ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಗೆ ಒಗ್ಗಿಕೊಳ್ಳುತ್ತಾ, ಸ್ವೀಕರಿಸುತ್ತಾ ಅದನ್ನು ಬಳಸಿಕೊಳ್ಳುತ್ತಾ ಮುನ್ನಡೆಯಬೇಕು ಎಂದು ಮುಳಿಯ ಜುವೆಲ್ಸ್ ಪ್ರೈವೆಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗಗಳ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತಾಡಿದರು. ನಮ್ಮ ಜೀವನದಲ್ಲಿ ತಂತ್ರಜ್ಞಾನದ ಬಳಕೆ ಅದರಲ್ಲೂ ಮುಖ್ಯವಾಗಿ ಕೃತಕ ಬುದ್ದಿಮತ್ತೆಯ ಪ್ರಭಾವದ ಬಗ್ಗೆ ಬೆಳಕು ಚೆಲ್ಲಿದ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ವಿಸ್ಮಯ್ ಎನ್ ನಾಯಕ್ ಮತ್ತು ಮೋಕ್ಷಿತ್ ಪಿ ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ರಿಷಿ ಭಾರಧ್ವಜ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರಿನ ಶ್ವೇತಾ ಕುಮಾರಿ ಅವರು ‘ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗ’ದಲ್ಲಿ ಮಂಡಿಸಿದ ಪ್ರಬಂಧಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯವು ಚಿನ್ನದ ಪದಕದೊಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೨ನೇ  ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್‌ಚಂದ ಗೆಹ್ಲೋಟ್ ಚಿನ್ನದ ಪದಕದೊಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು. ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರು ನಿವಾಸಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ 

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಕೃತಜ್ಞತಾ ಮಾತಗಳನ್ನಾಡಿ, ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ ಹಾಗೂ ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟ ಪೋಷಕ ವೃಂದದವರಿಗೂ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ Read More »

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ

ನವದೆಹಲಿ: ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಮಾತೃಭಾಷೆಯ ಅಧ್ಯಯನದೊಂದಿಗೆ, ಈಗ

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ Read More »

error: Content is protected !!
Scroll to Top