ಅಪರಾಧ

ಬುರ್ಖಾ ಹಾಕಿ ಹೋಳಿ ಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ

ಕಲಬುರ್ಗಿ: ಹೋಳಿ ಹಬ್ಬವನ್ನು ತಮ್ಮ ಗೆಳೆಯನಿಗೆ ಬುರ್ಖಾ ಧರಿಸಿ ಆಚರಿಸಿದ ಯುವಕರ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹೋಳಿ ಆಡುವ ವೇಳೆ ಗೆಳೆಯನೊಬ್ಬನಿಗೆ ಹಿಜಾಬ್, ಬುರ್ಖಾ ಹಾಕಿಸಿ ವಿವಿಧ ಭಂಗಿಯಲ್ಲಿ ನೃತ್ಯ ಮಾಡಿಸಿ, ಫೋಟೋ ತೆಗೆಸಿ, ವಿಡಿಯೋ ಮಾಡಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಹಾಗೆಯೇ ಬುರ್ಖಾ ಧರಿಸಿದ ಯುವಕನನ್ನು ಗರ್ಭಿಣಿಯಂತೆ ನಟನೆ ಮಾಡಿಸಿ ಫೋಟೋ ತೆಗೆದು ಹಾಕಿದ್ದರು. ಇವೆಲ್ಲವೂ ಮುಸ್ಲಿಂ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ. […]

ಬುರ್ಖಾ ಹಾಕಿ ಹೋಳಿ ಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ Read More »

ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಧರ್ಮಸ್ಥಳ: ಕಳ್ಳತನ ಪ್ರಕರಣವೊಂದರ ಆರೋಪಿ ಕಳೆದ ಆರು ವರ್ಷಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದು, ಆತನನ್ನು ತುಮಕೂರಿನ ತಿಪಟೂರಿನಲ್ಲಿ ಧರ್ಮಸ್ಥಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರಿನ ಕುಂಬಳಗೋಡು ನಿವಾಸಿ ವೆಂಕಟೇಶ್ ಯಾನೆ ಡಾಬರ್ ವೆಂಕಟೇಶ್ ಎಂದು ಗುರುತಿಸಲಾಗಿದೆ. 2017 ರ ಸಮಯದಲ್ಲಿ ಡಾಬರ್ ವೆಂಕಟೇಶ್ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕಳ್ಳತನಕ್ಕೆ ‌ಸಂಬಂಧಿಸಿದ ಪ್ರಕರಣವೊಂದು ದಾಖಲಾಗಿತ್ತು. ಸತತ ಆರು ವರ್ಷಗಳಿಂದ ಆತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ. ಸದ್ಯ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ Read More »

ಆರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನ್ಯಾಯಾಲಯಕ್ಕೆ ರಾಜನಾದ ಬಳಿಕ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕಡಬದ ವಿನೋದ್ ಯಾನೆ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ. ಆರೋಪಿ ವಿನೋದ್‌ನ ಮೇಲೆ 2019 ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಜೀವ ಬೆದರಿಕೆ ಮೊದಲಾದ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಆತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಸದ್ಯ ಉಪ್ಪಿನ ಗಡಿ ಪೊಲೀಸರು ಮಾರ್ಚ್ 5 ರಂದು ಆರೋಪಿಯನ್ನು

ಆರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ

ಊಟ ತಂದು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗಂಡನಿಂದ ಕೃತ್ಯ ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ. ಕುಪ್ಲೊಟ್ಟು ನಿವಾಸಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ ಸರೋಜ(44) ಎಂಬವರು ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಸರೋಜಾ ಗಂಡ ಊಟ ಕೇಳಿದ ಸಂದರ್ಭದಲ್ಲಿ ಊಟವನ್ನು ನೀಡಿರಲಿಲ್ಲ. ಬಳಿಕ ಪಕ್ಕದ ಸಂಬಂಧಿಕರ ಮನೆಯಲ್ಲಿ ಊಟ ಮಾಡಿ ಬಂದು ಮಲಗಿದ ಸಂದರ್ಭದಲ್ಲಿ

ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ Read More »

ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಆರು ಆರೋಪಿಗಳ ಬಂದನ

ದುಬೈಯಿಂದ ಮಾದಕವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿರುವ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಾದ ಉಡುಪಿ ಜಿಲ್ಲೆ ಕೋಟೇಶ್ವರ ನಿವಾಸಿ ಪ್ರಸ್ತುತ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಮೊಹಮ್ಮದ್ ಸಯ್ಯದ್ ಆಫ್ರೀದಿ (26), ಅಹಮ್ಮದ್ ಅಲಿ ಅರ್ಷಾನ್ (22), ಮಂಗಳೂರು ಬಲ್ಮಠ ನಿವಾಸಿ ಮಕ್ಸೂದ್

ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಆರು ಆರೋಪಿಗಳ ಬಂದನ Read More »

ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಹತ್ತೂವರೆ ಲಕ್ಷ ರೂ ಹಣ, 181 ಗ್ರಾಂ ಚಿನ್ನ, ಬೆಳ್ಳಿಯನ್ನು ‌ಮತ್ತು ಒಂದು ಬೈಕ್ ಅನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದ ‌ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಇಂದು ತಮ್ಮ ಬಾಡಿಗೆ ಮನೆಗೆ ವಾಪಾಸ್ಸಾದ

ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »

ಮೌಲ್ವಿಗಳ ಮೇಲೆ ಹಲ್ಲೆ, ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ: ಆರೋಪಿಗಳಲ್ಲಿ ಕೆಲವರು ಅಂದರ್

ಬೀದರ್: ಅನ್ಯ ಕೋಮಿನ ವ್ಯಕ್ತಿಗಳು ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 49 ಜನರ ಮೇಲೆ ಪ್ರಕರಣ ದಾಖಲಾಗಿದ್ದು ಅವರಲ್ಲಿ 10 ಮಂದಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಾಗ ಬಸವ ಕಲ್ಯಾಣ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆ ಎಷ್ಟು ಭೀಕರತೆಯಿಂದ ಕೂಡಿದೆ ಎಂಬುದಕ್ಕೆ ಸಾಕ್ಷ್ಯ ಹೇಳುವಂತಿತ್ತು. ಕಲ್ಲು ತೂರಾಟದ ಕಾರಣಕ್ಕೆ ಪೊಲೀಸ್ ವಾಹನ ಸಹ ಹಾನಿಗೊಳಗಾಗಿದೆ. ಅಕ್ರಮ ಆಸ್ತಿ ಪಾಸ್ತಿ ಹಾಗೂ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ

ಮೌಲ್ವಿಗಳ ಮೇಲೆ ಹಲ್ಲೆ, ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ: ಆರೋಪಿಗಳಲ್ಲಿ ಕೆಲವರು ಅಂದರ್ Read More »

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ : ಮೂವರ ಬಂಧನ, ಐದು ಕೋಳಿ ವಶ

ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಪುತ್ತೂರು : ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ಅನುಮತಿಯಿಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಉಪ್ಪಿನಂಗಡಿ ಪೊಲೀಸರು ಮಂಗಳವಾರ ದಾಳಿ ನಡೆಸಿ ಮೂವರನ್ನು ಬಂಧಿಸಿ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೊಯಿಲ ಗ್ರಾಮದ ಸಬಲೂರು ನಿವಾಸಿ ಸತೀಶ್ (38), ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನ ಮುರಳಿ (30) ಮತ್ತು ವಳಲು ಕುಡತ್ತಡ್ಕ ನಿವಾಸಿ ಮೋನಪ್ಪ ಕೆ.(36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಉಪ್ಪಿನಂಗಡಿ ಎಸ್‌ಐ ಸುತೇಶ್ ಕೆ.ಪಿ ಮತ್ತು

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ : ಮೂವರ ಬಂಧನ, ಐದು ಕೋಳಿ ವಶ Read More »

ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿದ ಯುವಕ ಸೆರೆ

ಕಾರು ಚಾಲಕನನ್ನು ಅಡ್ಡಗಟ್ಟಿ ಪಿಸ್ತೂಲು ತೋರಿಸಿ ಬೆದರಿಸಿದ್ದ ಯುವಕ ಪುತ್ತೂರು: ಪುತ್ತೂರಿನ ರಿಲಯನ್ಸ್ ಮಾಲ್ ಬಳಿ ಕಾರು ಚಾಲಕರೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ, ಗುಂಡು ಹಾರಿಸಲು ಯತ್ನಿಸಿದ 19 ವರ್ಷದ ಯುವಕನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್‌ ಎಂದು ಗುರುತಿಸಲಾಗಿದೆ. ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು ನೀಡಿದ ದೂರಿನ ಪ್ರಕಾರ, ಮಾರ್ಚ್ 2ರ ಮಧ್ಯಾಹ್ನ ಹಕೀಂ ಪುತ್ತೂರಿನಿಂದ ಕೂರ್ನಡ್ಕಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಹೆಲ್ಮೆಟ್ ಧರಿಸದ

ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿದ ಯುವಕ ಸೆರೆ Read More »

ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಿಲು ತೆರೆಯದೆ ಎರಡು ತಾಸು ಲೋಕಾಯುಕ್ತ ಅಧಿಕಾರಿಗಳನ್ನು ಸತಾಯಿಸಿದ ಎಇಇ ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ಬೆಂಗಳೂರಿನ 4 ಕಡೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೆಆರ್‌ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ. ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಒ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಒ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ,

ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ Read More »

error: Content is protected !!
Scroll to Top