ಅಪರಾಧ

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು

ತಪ್ಪಿಸಿಕೊಳ್ಳಲು ನದಿಗೆ ಹಾರಿ ಈಜಲಾಗದೆ ಮುಳುಗಿದ ಯುವಕ ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ಸ್ಥಳೀಯ ಯುವಕನೊಬ್ಬ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಮೃತಪಟ್ಟಿದ್ದಾನೆ. ಆದರೆ ಈ ಯುವಕನ ತಾಯಿ ಇದು ಪೊಲೀಸರು ಮತ್ತು ಭದ್ರತಾ ಪಡೆಯವರು ಉದ್ದೇಶಪೂರ್ವಕವಾಗಿ ನಡೆಸಿದ ಕೊಲೆ ಎಂದು ಅರೋಪಿಸಿ ಮಾಧ್ಯಮಗಳ ಮುಂದೆ ಗೋಳಾಡಿದ್ದಾರೆ. ಇಮ್ತಿಯಾಜ್‌ ಅಹ್ಮದ್ ಮಾಗ್ರೆ ಎಂಬ 23 ವರ್ಷದ ಯುವಕ ಪಹಲ್ಗಾಮ್‌ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ […]

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು Read More »

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ Read More »

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ

ಕಳಸದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿರುವ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗವಾಗಿದೆ. ಕಳಸದ ರೆಸಾರ್ಟ್ ಒಂದರಲ್ಲಿ ಏ.2ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಈ ಪಾರ್ಟಿಯಲ್ಲೇ ಹತ್ಯೆಯ ಸ್ಕೆಚ್‌ ಫೈನಲ್‌ ಮಾಡಿರುವ ಅನುಮಾನ ಇದೆ. ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಕ್ಯಾಂಪ್ ಫೈರ್ ಹಾಕಿ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ Read More »

ಉಗ್ರರ ದಾಳಿ ಹಾಗೂ ಹಿಂದೂ ಮುಖಂಡ ಸುಹಾಸ್‍ ಹತ್ಯೆ ಪ್ರಕರಣ | ಇಂದು ಕಾಫಿನಾಡು ಬಂದ್‍

ಉಗ್ರರ ದಾಳಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿ.ಎಚ್.ಪಿ. ಹಾಗೂ ಬಜರಂಗದಳ ನೇತೃತ್ವದಲ್ಲಿ ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಕಾಫಿನಾಡಿನಲ್ಲಿ ಬಂದ್‍ಗೆ ಕರೆ ನೀಡಿದ್ದು,  ಇಂದು ಕಾಫಿನಾಡು ಬಂದ್ ಆಗಿದೆ. ಬಂದ್‍ ಕರೆಗೆ ಉತ್ತಮವಾದ ಸ್ಪಂದನೆ ವ್ಯಕ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಂಪೂರ್ಣ ಸ್ಥಬ್ದಗೊಂಡಿದೆ. ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮ ಕೊಟ್ಟಿಗೆಹಾರವು ಸ್ವಯಂಪ್ರೇರಿತ ಬಂದ್ ಆಗಿದೆ. ಇಲ್ಲಿ ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದಾರೆ. ಕಾಫಿನಾಡು ಸಂಪೂರ್ಣವಾಗಿ ಬಂದ್‍ ಆದ ಹಿನ್ನಲೆ ಜನ ಸಂಚಾರ, ವಾಹನ ಸಂಚಾರ ಬಂದ್‍

ಉಗ್ರರ ದಾಳಿ ಹಾಗೂ ಹಿಂದೂ ಮುಖಂಡ ಸುಹಾಸ್‍ ಹತ್ಯೆ ಪ್ರಕರಣ | ಇಂದು ಕಾಫಿನಾಡು ಬಂದ್‍ Read More »

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಬಳಿಯ ತಣ್ಣೀರುಪಂಥದ ಯುವಕನೊಬ್ಬನ ಮೇಲೆ ಕೇಸ್‌ ದಾಖಲಾಗಿದೆ. ಬೆಳ್ತಂಗಡಿಯ ಧನುಷ್ ಎಂದು ಗುರುತಿಸಲಾದ ಯುವಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ವಿಷಯವನ್ನು ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಿ ಭಾನುವಾರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಪ್ರಚೋದನಕಾರಿ

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ

ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್‌ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್‌ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್‌ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು,

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌

ತೆಕ್ಕಾರು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪ ಉಪ್ಪಿನಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕುರಿತು ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಇದರ ಧಾರ್ಮಿಕ ಸಭೆಯಲ್ಲಿ ಹರೀಶ್‌ ಪೂಂಜ ಮುಸ್ಲಿಮರನ್ನು ತೆಗಳಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಹರೀಶ್‌ ಪೂಂಜ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ Read More »

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ ಸುಮಾರು 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವರ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೆ ಮತ್ತೊಬ್ಬ ಹಿಂದೂ ಮುಖಂಡನಿಗೆ ಬೆದರಿಕೆ ಹಾಕಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಮೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲಿ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಹನ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೊನ್ನು

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ Read More »

error: Content is protected !!
Scroll to Top