ಅಪರಾಧ

ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕಾಸರಗೋಡು : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎದುರಿನ ಅಂಗಡಿಯವ ಸಾರ್ವಜನಿಕರೆದುರೇ ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾದ ಸುಟ್ಟ ಗಾಯಗಳಾಗಿದ್ದ ಅಂಗಡಿ ಮಾಲಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಬೇಡಡ್ಕ ನಿವಾಸಿ ರಮಿತಾ (32) ಕೊಲೆಯಾಗಿರುವ ಮಹಿಳೆ. ತಮಿಳುನಾಡು ಮೂಲದ ರಾಮಾಮೃತಂ (57) ಎಂಬಾತ ಬೆಂಕಿ ಹಚ್ಚಿದ ಆರೋಪಿ. ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಸಣ್ಣ ಕಿರಾಣಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಆರೋಪಿ ರಾಮಾಮೃತಂ ಮಹಿಳೆಯ ಅಂಗಡಿಯ ಎದುರೇ […]

ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು Read More »

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ

ಆರು ತಿಂಗಳ ಹಿಂದೆ ಆದ ಜಗಳದ ಸೇಡು ತೀರಿಸಿಕೊಳ್ಳಲು ಕೊಲೆ ಮಂಗಳೂರು: ಮೂಲ್ಕಿಯ ಆಟೋರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೆ ಪೂರ್ವ ದ್ವೇಷವೇ ಕಾರಣ ಎಂಬ ವಿಚಾರ ಆರೋಪಿಯ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿದ್ದ ಮೂಲ್ಕಿಯ ಮುಹಮ್ಮದ್‌ ಶರೀಫ್‌ ಅವರನ್ನು ಕೇರಳ ಗಡಿಯ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿಗೆ ಕೊಂಡೊಯ್ದು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಆರೋಪಿ ಅಭಿಷೇಕ್‌ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿ ಅಭಿಷೇಕ್ ಶೆಟ್ಟಿ

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ Read More »

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ

ಮುಂದಿನ ತಿಂಗಳೇ ಹಸೆಮಣೆಯೇರಲಿದ್ದಾರೆ ಹುಬ್ಬಳ್ಳಿಯ ಈ ದಿಟ್ಟ ಮಹಿಳಾ ಪೊಲೀಸ್‌ ಅಧಿಕಾರಿ ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತುಹಿಚುಕಿ ಕೊಲೆ ಮಾಡಿದ್ದ ಆರೋಪಿಯನ್ನು ಗುಂಡಿಕ್ಕಿ ಸಾಯಿಸಿದ ಮಹಿಳಾ ಇನ್‌ಸ್ಪೆಕ್ಟರ್‌ ಅನ್ನಪೂರ್ಣ ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಮನೆ ಮಾತಾಗಿ ಲೇಡಿ ಸಿಂಗಂ ಎಂದು ಕರೆಸಿಕೊಂಡಿದ್ದಾರೆ. ವಾಟ್ಸಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ಸೋಷಿಯಲ್‌‌ ಮೀಡಿಯಾಗಳಲ್ಲಿ ಅನ್ನಪೂರ್ಣ ಕುರಿತು ಪುಂಖಾನುಪುಂಖವಾಗಿ ಪೋಸ್ಟ್‌ಗಳು ಹರಿದಾಡುತ್ತಿವೆ. ಮಹಿಳೆಯಾಗಿ ಅನ್ನಪೂರ್ಣ ತೋರಿಸಿದ ದಿಟ್ಟತನಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಾಕಷ್ಟು ಮಂದಿ ಅನ್ನಪೂರ್ಣ

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ Read More »

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಮನೆಗೆ ನುಗ್ಗಿ ಸಾಯಿಸುತ್ತೇವೆ, ಇಲ್ಲವೇ ಕಾರು ಸ್ಫೋಟಿಸುತ್ತೇವೆ ಎಂದು ಧಮಕಿ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಮ್ಮೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬಯಿಯ ವರ್ಲಿ ವಿಭಾಗದ ಸಂಚಾರಿ ಪೊಲೀಸರ ವಾಟ್ಸಪ್‌ ನಂಬರ್‌ಗೆ ಕಳುಹಿಸಿರುವ ಸಂದೇಶದಲ್ಲಿ ನಟನನ್ನು ಮನೆಗೆ ನುಗ್ಗಿ ಅಥವಾ ಕಾರು ಸ್ಫೋಟಿಸಿ ಸಾಯಿಸಿಲಿದ್ದೇವೆ ಎಂದು ಬೆದರಿಕೆಯೊಡ್ಡಲಾಗಿದೆ. ಒಂದು ವರ್ಷದ ಹಿಂದೆ ನಟನ ಮನೆಯೆದುರು ಇಬ್ಬರು ವ್ಯಕ್ತಿಗಳು ಬೈಕಿನಲ್ಲಿ ಬಂದು ಗುಂಡು ಹಾರಿಸಿದ್ದರು. ಅನಂತರ ಸಲ್ಮಾನ್‌ ಖಾನ್‌ಗೆ ಪದೇ ಪದೆ ಜೀವ ಬೆದರಿಕೆ ಸಂದೇಶಗಳು

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ Read More »

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ

ರಾಜ್ಯಾದ್ಯಂತ ಅಕ್ರೋಶಕ್ಕೆ ಕಾರಣವಾಗಿದ್ದ ಕೃತ್ಯದ ಆರೋಪಿ ಬೆಂಗಳೂರು : ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಬಂದು ಕಿರುಕುಳ ನೀಡಿ ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸುಮಾರು 10 ದಿನಗಳ ಬಳಿಕ ಆರೋಪಿ ಸಂತೋಷ್ ಡೆನಿಯಲ್​​​ನನ್ನು ಕೇರಳ ಕೋಝಿಕ್ಕೋಡ್‌ ಸಮೀಪದ ಹಳ್ಳಿಯೊಂದರಿಂದ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ Read More »

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

2019ರಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ Read More »

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್‌ಕೌಂಟರ್‌ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಶಶಿಕುಮಾರ್​ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ Read More »

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ

ವಕ್ಫ್‌ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ತಂದೆ ಮತ್ತು ಮಗ ಸೇರಿ ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ,

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ Read More »

ನಿಯಂತ್ರಣ ತಪ್ಪಿದ ಕಾರು | ಕಾರಿನಲ್ಲಿ ಗಾಂಜಾ ಪ್ಯಾಕೇಟ್‍ ಪತ್ತೆ : ಮೂವರು ಪೊಲೀಸರ ವಶಕ್ಕೆ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದ್ದು, ಈ ಸಂದರ್ಭ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಪ್ರಕರಣ ಬಯಲಿಗೆ ಬಂದಿದೆ. ಶನಿವಾರ ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದೆ. ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದ್ದು ಕೂಡಲೇ ಮಡಿಕೇರಿ ಗ್ರಾಮಾಂತರ

ನಿಯಂತ್ರಣ ತಪ್ಪಿದ ಕಾರು | ಕಾರಿನಲ್ಲಿ ಗಾಂಜಾ ಪ್ಯಾಕೇಟ್‍ ಪತ್ತೆ : ಮೂವರು ಪೊಲೀಸರ ವಶಕ್ಕೆ Read More »

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಆರೋಪಿಗಳಾಗಿರುವ ಪ್ರಕರಣ ನವದೆಹಲಿ : ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 600 ಕೋಟಿ ರೂ.ಗೂ ಮಿಕ್ಕಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಾರಂಭಿಸಿದೆ.ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾಗಿರುವ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬಯಿಯ

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು Read More »

error: Content is protected !!
Scroll to Top