ಅಪರಾಧ

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌

ಯುವತಿಗೆ ಮಾಸಿಕ ಹತ್ತು ಸಾವಿರ ರೂ. ಜೀವನಾಂಶ ನೀಡಲು ಸಿದ್ಧರಿದ್ದಿರಾ ಎಂದು ಕೇಳಿದ ಕೋರ್ಟ್‌ ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ. ಯುವತಿಗೆ ಮಾಸಿಕ […]

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌ Read More »

ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಟೆಕ್ಕಿ

ಹೈದರಾಬಾದ್: ಡ್ರಗ್ಸ್‌ ‌ಕಾರಣದಿಂದ ಕೆಲಸ ಕಳೆದುಕೊಂಡಿದ್ದ ಟೆಕ್ಕಿಯೊಬ್ಬ ಮನೆಯಲ್ಲೇ ಗಾಂಜಾ ಬೆಳೆದು ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ನಾಚರಾಂ ನಿವಾಸಿ ಸಿ. ಎಚ್. ಶಶಿಧರ್ ಎಂದು ಗುರುತಿಸಲಾಗಿದೆ. ಆತನನ್ನು ಮಾದಕ ವಸ್ತು ನಿಷೇಧ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂದಿತು ಮನೆಯಿಂದ ಪೊಲೀಸರು 17 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಗಿಡಗಳಿಂದ ಸುಮಾರು 10 ಕೆ.ಜಿ. ಡ್ರಗ್ಸ್ ದೊರೆಯಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕೆಲವು ಗಿಡಗಳು ಮೂರು ಮೀ. ಗಳಷ್ಟು ಉದ್ದ ಬೆಳೆದಿದ್ದರೆ ಇನ್ನು ಕೆಲವು

ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಟೆಕ್ಕಿ Read More »

ನೈಟಿ ಹಾಕಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಗಂಡ ಈಗ ಪೊಲೀಸರ ಅತಿಥಿ

ಬೆಳಗಾವಿ: ಸೀರೆ ಉಡಬೇಕು, ನೈಟಿ ಹಾಕಬಾರದು ಎಂದು ಗಂಡ ಹೇಳಿದ ಮೇಲೆಯೂ ವಿಪರೀತ ಸೆಖೆ ಎಂದು ನೈಟಿ ಹಾಕಿದ ಪತ್ನಿಯ ಮೇಲೆ ಕೋಪಗೊಂಡು, ಆಕೆ ಹಾಕಿದ್ದ ನೈಟಿಗೆ ಪತಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಆಕೆಯ ದೇಹ 80% ಸುಟ್ಟು ಹೋದ ಘಟನೆ ಖಾನಾಪೂರದ ನಂದಗಡದಲ್ಲಿ ನಡೆದಿದೆ. ಆರೋಪಿ ಪತಿಯನ್ನು ಕೃಷ್ಣಾಜಿ ಎಂದು ಗುರುತಿಸಲಾಗಿದೆ. ಆತನ ಕ್ರೌರ್ಯಕ್ಕೆ ಬಲಿಯಾದ ಮಹಿಳೆ ಮಂಜುಳಾ. ಇವರಿಬ್ಬರೂ ಕಳೆದ ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಮಂಜುಳಾ ನೈಟಿ ಹಾಕುವುದು ಕೃಷ್ಣಾಜಿಗೆ ಸಮ್ಮತವಿರಲಿಲ್ಲ. ಸೀರೆಯನ್ನೇ

ನೈಟಿ ಹಾಕಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಗಂಡ ಈಗ ಪೊಲೀಸರ ಅತಿಥಿ Read More »

ರಸ್ತೆ ಬದಿ ನಿಲ್ಲಿಸಿದ್ದ ‌ಟ್ಯಾಂಕರ್‌ನ ಬ್ಯಾಟರಿ ಕಳವು

ಕಡಬ: ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು ನಡೆದಿರುವ ಘಟನೆ ಗೋಳಿತೊಟ್ಟು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ಕಳೆಂಜ ಗ್ರಾಮದ ನಿವಾಸಿ ರಕ್ಷಿತ್ ಕೆ. ಎನ್ನುವವರು ದೂರು ನೀಡಿದ್ದಾರೆ. ದೂರಿನಲ್ಲಿ, ಕೆಎ 21, ಬಿ 3160 ನೋಂದಣಿ ಸಂಖ್ಯೆಯ ಅಶೋಕ್ ಲೈಲ್ಯಾಂಡ್ ‌ಕಂಪನಿಯ ಟ್ಯಾಂಕರ್ ಅನ್ನು ಎ. 18 ರ ರಾತ್ರಿ 11 ಗಂಟೆಯ ಸುಮಾರಿಗೆ ಗೋಳಿತೊಟ್ಟು ಗ್ರಾಮದಲ್ಲಿ ರಸ್ತೆಯ ಬದಿ ನಿಲ್ಲಿಸಿ ಮನೆಗೆ ತೆರಳಲಾಗಿತ್ತು. ಎ. 21 ರಂದು ಟ್ಯಾಂಕರ್ ಅನ್ನು ಚಲಾಯಿಸಲು ಪ್ರಯತ್ನಿಸಿದಾಗ

ರಸ್ತೆ ಬದಿ ನಿಲ್ಲಿಸಿದ್ದ ‌ಟ್ಯಾಂಕರ್‌ನ ಬ್ಯಾಟರಿ ಕಳವು Read More »

ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ : ಮಾಲೀಕನ ಸಹಿತ ಇಬ್ಬರ ಸೆರೆ

ಕೊಡಗು: ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ತಂಗಿದ್ದ ವಿದೇಶಿ ಮಹಿಐಎಯ ಮೇಲೆ ಹೋಂ ಸ್ಟೇ ಮಾಲೀಕನೇ ಅತ್ಯಾಚಾರ ಎಸಗರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ

ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ : ಮಾಲೀಕನ ಸಹಿತ ಇಬ್ಬರ ಸೆರೆ Read More »

ವಾಹನ ಅಡ್ಡಗಟ್ಟಿ ಹಲ್ಲೆ, ಕೊಲೆ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

ಮಂಗಳೂರು: ಕಾರಿಗೆ ಸೈಡ್ ಕೊಡುವ ವಿಷಯದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ತಂಡವೊಂದಕ್ಕೆ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC – 2 ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. ಆರೋಪಿಗಳಾದ ಬಂಟ್ವಾಳದ ಕಾವಳಪಡೂರು ನಿವಾಸಿ ದಿನೇಶ್ ಶೆಟ್ಟಿ, ಅರ್ಕುಳದ ಧನರಾಜ್ ಪೂಜಾರಿ ಯಾನೆ ‌ವಳಚ್ಚಿಲ್ ಧನು, ನವೀನ್ ಎಡಪದವು, ಪ್ರಜ್ವಲ್ ಪೂಜಾರಿ ಕಾರ್‌ಸ್ಟ್ರೀಟ್, ವಸಂತ್ ಬಾಳ‌ ತಡಂಬೈಲ್ ಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ಮತ್ತು 1.34 ಲಕ್ಷ ರೂ. ದಂಡ

ವಾಹನ ಅಡ್ಡಗಟ್ಟಿ ಹಲ್ಲೆ, ಕೊಲೆ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್ Read More »

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು : ಪೇಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದೇವಸ್ಥಾನದ ಕಚೇರಿಯ ಬಳಿ ಜನರು ಗುಂಪು

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ Read More »

ಪಹಲ್ಗಾಮ್‌ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ

ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ ಎಂದು ಸಂದೇಶ ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಯಾಗಿ ಇಂದಿಗೆ (ಏ.22) ಒಂದು ವರ್ಷ ಪೂರ್ಣಗೊಂಡಿದೆ. ಹಿಂದೂ ಪ್ರವಾಸಿಗರನ್ನೇ ಹುಡುಕಿ ಹತ್ಯೆ ಮಾಡಿದ ಈ ಭಯೋತ್ಪಾದಕ ಕೃತ್ಯ ದೇಶದ ಜನಮಾನಸದಲ್ಲಿ ಎಂದಿಗೂ ಆರದ ಗಾಯವನ್ನು ಉಳಿಸಿದೆ. ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಕಣ್ಣೀರು ಇನ್ನೂ ಹಸಿಯಾಗಿಯೇ ಉಳಿದಿದೆ. ನಮ್ಮ ನೆಲಕ್ಕೆ ನುಗ್ಗಿ ನಮ್ಮವರನ್ನೇ ಗುಂಡಿಕ್ಕಿ ಕೊಂದ ಉಗ್ರರ ಅಟ್ಟಹಾಸ. ಭಯೋತ್ಪಾದಕರನ್ನು ಸದೆಬಡಿಯಲು ಭಾರತ ಕೈಗೊಂಡ ದಿಟ್ಟ ಕ್ರಮ.

ಪಹಲ್ಗಾಮ್‌ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ Read More »

ಮದುವೆ ಪ್ರಪೋಸ್‌ ನೆಪದಲ್ಲಿ ಪ್ರಿಯತಮನನ್ನು ಜೀವಂತ ದಹಿಸಿದ ಯುವತಿ

ವೆಸ್ಟರ್ನ್ ಸ್ಟೈಲ್‌ನಲ್ಲಿ ನಿನಗೆ ಪ್ರಪೋಸ್ ಮಾಡುವುದಾಗಿ ನಂಬಿಸಿ ಭೀಕರ ಕೃತ್ಯ ಬೆಂಗಳೂರು : ‘ವೆಸ್ಟರ್ನ್ ಸ್ಟೈಲ್’ನಲ್ಲಿ ಪ್ರಪೋಸ್ ಮಾಡುತ್ತೇನೆ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಪ್ರೇಯಸಿಯೇ ಜೀವಂತ ದಹಿಸಿರುವ ಪ್ರಕರಣ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತ ಕಿರಣ್ ಮತ್ತು ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮಂಗಳವಾರ ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಆಕೆಯ ಮನೆಗೆ ಬಂದಿದ್ದನು. ಈ

ಮದುವೆ ಪ್ರಪೋಸ್‌ ನೆಪದಲ್ಲಿ ಪ್ರಿಯತಮನನ್ನು ಜೀವಂತ ದಹಿಸಿದ ಯುವತಿ Read More »

ಗೃಹ ಸಚಿವ ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌!

ಬೆಟ್ಟಿಂಗ್‌ ಪ್ರಕರಣದಲ್ಲಿ ಕೇಸ್‌ ದಾಖಲಿಸಿ ತನಿಖೆ ಮಾಡಲು ಆದೇಶಿಸಿದ ನ್ಯಾಯಾಲಯ ಬೆಂಗಳೂರು: ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗೃಹಸಚಿವ ಜಿ. ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು ಕೋರ್ಟ್‌ಗೆ ಮನವಿ

ಗೃಹ ಸಚಿವ ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌! Read More »

error: Content is protected !!
Scroll to Top