ಅಪರಾಧ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ

ಗೋಹತ್ಯೆ ನಡೆಸಿದ ಸ್ಥಳಗಳೆಂದು ಗುರುತಿಸಿ ಮುಟ್ಟುಗೋಲು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿರುವ ಜಾನುವಾರು ಹತ್ಯೆ ಪ್ರಕರಣಗಳ ತನಿಖೆಯ ಭಾಗವಾಗಿ ಕಸಾಯಿಖಾನೆಗಳಿದ್ದ ಸ್ಥಳಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ಆರೋಪಿಗಳಾದ ನಾಸೀರ್ ಮತ್ತು ಇತರರು ದನವನ್ನು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ Read More »

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು Read More »

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ

ಭ್ರಷ್ಟ ಅಧಿಕಾರಿಯ ಸಂಪತ್ತು ನೋಡಿ ಸಿಬಿಐ ಅಧಿಕಾರಿಗಳಿಗೆ ಶಾಕ್‌ ಹೊಸದಿಲ್ಲಿ : ಡಿಐಜಿಯೊಬ್ಬರ ಮನೆಯಲ್ಲಿ ಸಂಪತ್ತಿನ ಕೊಪ್ಪರಿಗೆಯೇ ಪತ್ತೆಯಾಗಿದ್ದು, ಇದನ್ನು ನೋಡಿ ಅಧಿಕಾರಿಗಳೇ ದಂಗುಬಡಿದು ಹೋಗಿದ್ದಾರೆ. ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಬೆಲೆಬಾಳುವ ವಾಚ್​​ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ಸಿಬಿಐ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ ಭ್ರಷ್ಟ ಐಪಿಎಸ್ ಅಧಿಕಾರಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಭುಲ್ಲಾರ್ ಅವರ

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ Read More »

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಪ್ರಾಣಿಗಳ ಆಹಾರ ಪೂರೈಕೆ ಸಹಿತ ವಿವಿಧ ವ್ಯವಹಾರಗಳಲ್ಲಿ ಲೋಪದೋಷದ ಆರೋಪ ಮಂಗಳೂರು : ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್ ನೇತೃತ್ವದ ತಂಡ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅನುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ,

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ Read More »

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ

ಬೆದರಿಕೆ ಹಿನ್ನೆಲೆ ಸಚಿವರಿಗೆ ಭದ್ರತೆ ಹೆಚ್ಚಳ ಬೆಂಗಳೂರು: ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಬೇಕೆಂದು ಪತ್ರ ಬರೆದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಪ್ರಿಯಾಂಕ್ ಖರ್ಗೆ ದೂರು ನೀಡಲು

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ Read More »

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ

ಅನಾರೋಗ್ಯವಿದ್ದ ಪತ್ನಿಯನ್ನು ಅನೆಸ್ತೇಶಿಯ ಇಂಜೆಕ್ಷನ್‌ ನೀಡಿ ಕೊಂದಿದ್ದ ಟಾಕ್ಟರ್‌ ಪತಿ ಬೆಂಗಳೂರು: ನಗರದಲ್ಲಿ ವೈದ್ಯೆಯೊಬ್ಬರನ್ನು ಆಕೆಯ ಡಾಕ್ಟರ್‌ ಪತಿಯೇ ಅನೆಸ್ತೇಶಿಯ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿದ ಪ್ರಕರಣ ದೇಶವೇ ಬೆಚ್ಚಿಬೀಳುವಂತೆ ಮಾಡಿದೆ. ಮಗಳ ಸಾವಿನಿಂದ ತೀವ್ರ ನೊಂದಿರುವ ತಂದೆ ಮಗಳಿಗಾಗಿ ಕಟ್ಟಿಸಿದ್ದ 4 ಕೋ.ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳ ಸಾವಿನ ನೋವಿನಲ್ಲಿ ತಂದೆ ಮುನಿರೆಡ್ಡಿ ಮಗಳು ವಾಸವಿದ್ದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳಿಗಾಗಿ ನಾಲ್ಕು ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ದರು.

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ Read More »

ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ‘ಗೋ ಮಾತೆ’ ರಕ್ಷಣೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿವೆ. ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಮ್‌ಎಲ್‌ಸಿ ‌ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಮೊದಲಾದವರು ಪ್ರತಿಭಟನೆಗೆ ಚಾಲನೆ ನೀಡಿದರು. ನಗರದ ಕತ್ರಿಮಾರಮ್ಮ ದೇವಾಲಯದಿಂದ ಮೆರವಣಿಗೆ ಆರಂಭ ಮಾಡಲಾಗಿದ್ದು, ಎಂ.ಜಿ. ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೂ ಮೆರವಣಿಗೆ ಸಾಗಿದೆ. ಗೋಕಳ್ಳರನ್ನು, ಗೋವಿನ

ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ Read More »

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೇಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಹಿ. ವರದರಾಜ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನೂನಿನನ್ವಯ ದರ್ಶನ್‌ಗೆ ನೀಡಲಾಗಿರುವ ಸೌಲಭ್ಯಗಳಿಗೆ ಸಂಬಂಧಿಸಿದ ಹಾಗೆ ಜೈಲಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಪಿ ದರ್ಶನ್ ಇದ್ದ ಸೆಲ್‌ಗೂ ಭೇಟಿ ನೀಡಿದ್ದು, ಅವರ ಬಳಿಯೂ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ವರದಿಯನ್ನು ನ್ಯಾಯಾಲಯಕ್ಕೆ

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ Read More »

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡೀಪಾರು ಮಾಡಿದ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮೂಲಕ ಜನರಿಗೆ ತಪ್ಪು ಮಾಹಿತಿ ರವಾನೆ ಮಾಡಿದ ಆರೋಪದಲ್ಲಿ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸರ ಮನವಿಯ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ಸೆ. 18 ರಿಂದ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದ ಎಲ್ಲಾ ಅಂಶಗಳು

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು Read More »

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ

ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದ ಆಫೀಸ್‌ ಮೇಲೆ ದಾಳಿ ಬೆಂಗಳೂರು : ದೇಶ ವಿದೇಶಗಳ ಅಮಾಯಕ ಜನರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ ಸೈಬರ್‌ ಖದೀಮರ ಕಚೇರಿ ಬೆಂಗಳೂರಿನಲ್ಲೇ ಇತ್ತು ಎಂಬುದು ಈಗ ಬಯಲಾಗಿದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಜನರಲ್ಲಿ ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಈ ಕಚೇರಿಗೆ ಜೊತೆಗೆ ನಂಟು ಹೊಂದಿರುವ

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ Read More »

error: Content is protected !!
Scroll to Top