ಅಪರಾಧ

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌

ಪತಿಯನ್ನು ಕೊಂದು ಮನೆಯೊಳಗೇ ಹೂತು ಹಾಕಿ ಪತ್ನಿ ಪ್ರಿಯಕರನೊಂದಿಗೆ ಪರಾರಿ ಮುಂಬೈ : ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಮನೆಯೊಳಗೆ ಹೂತು ಹಾಕಿ ಪಲಾಯನ ಮಾಡಿದ ದೃಶ್ಯಂ ಸಿನಿಮಾ ರೀತಿಯ ಆಘಾತಕಾರಿ ಘಟನೆ ಮುಂಬೈ ಸಮೀಪದ ನಲ್ಲಸೋಪಾರದಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಮನೆಯ ನೆಲದ ಟೈಲ್ಸ್ ಅಗೆದು ಪತಿಯ ಶವವನ್ನು ಅದರಡಿಯಲ್ಲಿ ಹೂತು ಹಾಕಿದ್ದಳು. ನಂತರ ಅದರ ಮೇಲೆ ಬೇರೆ ಟೈಲ್ಸ್ ಹಾಕಿದ್ದಳು. ಕೊಲೆಯಾದ ವ್ಯಕ್ತಿಯನ್ನು […]

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌ Read More »

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ

ಮೋಸ ಹೋದ ಹಲವು ಉದ್ಯಮಿಗಳಿಂದ ದೂರು ದಾಖಲು ಮಂಗಳೂರು : ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ಬಹುಕೋಟಿ ರೂಪಾಯಿ ವಂಚಕ ರೋಶನ್ ಸಲ್ಡಾನನಿಂದ ವಂಚನೆಗೊಳಗಾದ ಒಬ್ಬೊಬ್ಬರೇ ಈಗ ದೂರು ನೀಡಲು ಮುಂದಾಗುತ್ತಿದ್ದಾರೆ. ಬಿಹಾರ ಮೂಲದ ಉದ್ಯಮಿಯೊಬ್ಬರಿಗೆ ಸಲ್ಡಾನ ಭೂ ಖರೀದಿಸಿಕೊಡುವುದಾಗಿ ನಂಬಿಸಿ 10 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೆನ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವಂಚನೆಯ ಮೊತ್ತ 10 ಕೋ.ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ ಸಿಐಡಿ

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪಿಕಪ್‌ ಚಾಲಕ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತ ಆರೋಪಿ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನನ್ನು ಹೆಚ್ಚಿನ ತನಿಖೆಗಾಗಿ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌

ಜು.30ರಂದು ಪ್ರಕಾಶ್‌ ರಾಜ್‌ ವಿಚಾರಣೆ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌ ಸೇರಿ ಹಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್‌ ನೀಡಿದೆ. ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಕೊಟ್ಟಿದೆ. ಜು.23 ರಂದು ರಾಣಾ ದಗ್ಗುಬಾಟಿ, ಜು.30 ರಂದು ಪ್ರಕಾಶ್ ರಾಜ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆ.6ರಂದು ವಿಜಯ್ ದೇವರಕೊಂಡ ಅವರನ್ನು ವಿಚಾರಣೆಗೆ

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌ Read More »

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ಲೋಕಲ್‌ ರೈಲಿನಲ್ಲಿ ಬಾಂಬಿಟ್ಟು 189 ಮಂದಿಯನ್ನು ಕೊಂದ ಪ್ರಕರಣ ಮುಂಬೈ: ಮುಂಬೈಯ ಲೋಕಲ್‌ ರೈಲುಗಳಲ್ಲಿ 2006ರಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹತ್ತೊಂಬತ್ತು ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲ 12 ಜನರನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯ ಈ 12

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌ Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ಮೇಲ್ಮನವಿ ಸಲ್ಲಿಸಿದ್ದ ಇ.ಡಿ.ಗೆ ಮುಖ್ಯ ನ್ಯಾಯಮೂರ್ತಿಯಿಂದ ತರಾಟೆ ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇ.ಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ Read More »

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್ ಇನ್‍ ಸ್ಪೆಕ್ಟರ್ ರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಆತ್ಮಹತ್ಯೆ ಮಾಡಿಕೊಂಡವರು. ಅವರು ಶಿರಸಿ ಠಾಣೆಯಿಂದ ಸುಮಾರು 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬ ಉತ್ತರ ಕನ್ನಡದಲ್ಲಿಯೇ ವಾಸವಿದ್ದು, ಕೀರಪ್ಪ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶನಿವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಹಾಜರಾಗದೇ, ಫೋನ್ ಕರೆಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಕಾರಣದಂತೆ ಸಹೋದ್ಯೋಗಿ

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ Read More »

ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗಿ ಯುವಕ ಸಾವು

ಬೆಂಗಳೂರಿನಿಂದ ಪ್ರವಾಸ ಬಂದು ಅಪಾಯ ಲೆಕ್ಕಿಸದೆ ಜಲಪಾತಕ್ಕಿಳಿದಿದ್ದ ಯುವಕ ಶಿವಮೊಗ್ಗ: ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಅಬ್ಬಿ ಫಾಲ್ಸ್‌ನಲ್ಲಿ ಫೋಟೊ ತೆಗೆಯಲು ಫೋಸ್‌ ಕೊಡಲು ಫಾಲ್ಸ್‌ಗೆ ಇಳಿದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಫಾಲ್ಸ್‌ನಲ್ಲಿ ರಮೇಶ್‌ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ

ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗಿ ಯುವಕ ಸಾವು Read More »

ತನಿಖೆಗೆ ಎಸ್‌ಐಟಿ ರಚನೆ : ಧರ್ಮಸ್ಥಳದ ವಕ್ತಾರ ಸ್ವಾಗತ

ತನಿಖೆಯಿಂದ ಹಿಂದೆ ಸರಿಯಲಿದ್ದಾರಾ ಇಬ್ಬರು ಐಪಿಎಸ್‌ ಅಧಿಕಾರಿಗಳು? ಧರ್ಮಸ್ಥಳ: ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪದ ತನಿಖೆಗೆ ಎಸ್‌ಐಟಿ ರಚಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ

ತನಿಖೆಗೆ ಎಸ್‌ಐಟಿ ರಚನೆ : ಧರ್ಮಸ್ಥಳದ ವಕ್ತಾರ ಸ್ವಾಗತ Read More »

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ. ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT (ವಿಶೇಷ ತನಿಖಾ ತಂಡ) ವನ್ನು ರಚಿಸಿದೆ. ಡಾ. ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಒಟ್ಟು ನಾಲ್ಕು ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಎಂ. ಎನ್. ಅನುಚೇತ್ ಮತ್ತು ಸೌಮ್ಯಲತಾ ಇದ್ದಾರೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ಸುತ್ತ ಹಲವಾರು ಹೆಣಗಳನ್ನು ಹೂಳಲಾಗಿದೆ ಎಂದು ಕೆಲ ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ Read More »

error: Content is protected !!
Scroll to Top