ಅಪರಾಧ

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌

ಷಡ್ಯಂತ್ರದ ಇನ್ನಷ್ಟು ರಹಸ್ಯಗಳು ಬಯಲು ಮಂಗಳೂರು: ಧರ್ಮಸ್ಥಳದ ಬುರುಡೆ ಈಗ ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದುನಿಂತಿದೆ. ಹೋರಾಟಗಾರ ಜಯಂತ್‌ ಟಿ. ವಿಚಾರಣೆ ವೇಳೆ ಎಸ್ಐಟಿ ಮುಂದೆ ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣನವರ್ ಎಂದಿದ್ದಾರೆ. ಬುರುಡೆ ಮೂಲ ಕೆದಕಲು ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್‌ರನ್ನು ಶುಕ್ರವಾರ ವಿಚಾರಣೆಗೆ ಕರೆಯಲಾಗಿತ್ತು. ಬೆಳ್ತಂಗಡಿಯ ಎಸ್ಐಟಿ ಠಾಣೆಯಲ್ಲಿ ತಡರಾತ್ರಿವರೆಗೂ ಇಬ್ಬರನ್ನು ಪ್ರತ್ಯೇಕವಾಗಿ ಕೂರಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ನನಗೆ ಬುರುಡೆ ಕೊಟ್ಟಿದ್ದು ಗಿರೀಶ್ ಮಟ್ಟಣ್ಣನವರ್‌ ಎಂದು ಜಯಂತ್ ಹೇಳಿದ್ದಾರೆ. ಆದರೆ ಗಿರೀಶ್ ಮಟ್ಟಣ್ಣನವರ್ […]

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌ Read More »

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು

ಕೇರಳದ ಯೂಟ್ಯೂಬರ್‌ ಮೊಬೈಲ್‌ನಲ್ಲಿದೆಯಂತೆ ಬುರುಡೆಯ ಅಸಲಿ ವಿಡಿಯೋ ಮಂಗಳೂರು: ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದ ಷಡ್ಯಂತ್ರಕ್ಕೆ ಕೇರಳದಲ್ಲೂ ಒಂದು ಲಿಂಕ್‌ ಇರುವುದು ಈಗ ಬಹಿರಂಗವಾಗಿದೆ. ಕೇರಳದ ಮನಾಫ್‌ ಎಂಬ ಯೂಟ್ಯೂಬರ್‌ ಕೇರಳದಲ್ಲಿ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದ. ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ, ದೇವಸ್ಥಾನದವರೇ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆತ ಮಲಯಾಳಂ ಯೂಟ್ಯೂಬ್‌ ಚಾನಲ್‌ಗಳು, ಟಿವಿ ವಾಹಿನಿಗಳಲ್ಲಿ ಈತ ಪ್ರಚಾರ ಮಾಡಿದ್ದ. ಈಗ ಈತನೂ ಬುರುಡೆ ಷಡ್ಯಂತ್ರದಲ್ಲಿ ಶಾಮೀಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು Read More »

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ

ಬುರುಡೆ, ಸುಜಾತ ಭಟ್‌ ಎಪಿಸೋಡ್‌ ಹಿನ್ನೆಲೆಯಲ್ಲಿ ಎಸ್‌ಐಟಿ ಗ್ರಿಲ್‌ ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಾಕ್ಷಿ-ದೂರುದಾರನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ಪೊಲೀಸರು ವಶಕ್ಕೆ ಪಡೆದ ತಲೆಬುರುಡೆಯ ತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳು ಕಾರ್ಯಕರ್ತ ಜಯಂತ್ ಟಿ ಹಾಗೂ ಯೂಟ್ಯೂಬರ್‌ ಅಭೀಷೇಕ್‌ನನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ. ಜಯಂತ್‌ ಟಿ.ಯನ್ನು ತಡರಾತ್ರಿಯವರೆಗೆ ವಿಚಾರಣೆ ನಡೆದಿದ್ದು, ಬಳಿಕ ಬಿಟ್ಟುಕೊಟ್ಟು ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ದಾಖಲಾಗಿರುವ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಸುಮಾರು 20 ಸಾಕ್ಷಿಗಳಿಗೆ

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ Read More »

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ

ಮಂಗಳೂರು: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆ ಎಎಸ್ಸೈ ಅಶೋಕ್ ಕೆ. ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್‌ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಎಂಬಾತನನ್ನು ಬಂಧಿಸಲಾಗಿದೆ. ಸೆ.2ರಂದು ರಾತ್ರಿ 12.45ಕ್ಕೆ ಅಶೋಕ್ ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ನಾಗುರಿಯಲ್ಲಿ ಚಿಕ್‌ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಸಮೇತ ಏಳೆಂಟು ಮಂದಿ ನಿಂತಿದ್ದರು. ತಕ್ಷಣ ಎಎಸ್ಸೈ ಯಾಕೆ ಇಲ್ಲಿ

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ Read More »

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ

ಎರಡು ತಿಂಗಳಿಂದ ಮಂಗಳೂರು ಜೈಲಿನಲ್ಲಿದ್ದ ಶ್ರೀಕೃಷ್ಣ ಜೆ.ರಾವ್‌ ಪುತ್ತೂರು: ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸಹಪಾಠಿ ಯುವತಿಗೆ ಮಗು ಕರುಣಿಸಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್‌ಗೆ ನ್ಯಾಯಾಲಯ ಜಾಮೀನು ನೀಡಿದೆ. ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯನ್ನಾಗಿ ಮಾಡಿದ್ದ. ಯುವತಿಗೆ ಮಗು ಜನಿಸಿದ್ದು, ಈಗಲೂ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನವುಂಟು ಮಾಡುತ್ತಿದೆ. ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ

ಟೆಲಿಗ್ರಾಮ್‌, ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ಮೋಸ ಮಾಡುತ್ತಿದ್ದ ಆರೋಪಿಗಳು ಉಡುಪಿ : ಆನ್‌ಲೈನ್‌ ಟ್ರೆಡಿಂಗ್‌ ನಡೆಸಿ ಮೋಸ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೂಡಿಕೆದಾರರನ್ನು ವಂಚಿಸಲು ಬಳಸಲಾಗುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಕೋಡಿಕೆರೆ ಗ್ರಾಮದ ಪ್ರೇಮ್ ನಗರದ ಮೊಹಮ್ಮದ್ ಕೈಸ್ (20), ಪಡುಬಿದ್ರಿ ಹೆಜಮಾಡಿಯ ಮಂಜತೋಟದ ಅಹ್ಮದ್ ಅನ್ವೀಜ್ (20), ಬಂಟ್ವಾಳ ತಾಲೂಕಿನ ಸಫ್ವಾನ್ (30) ಮತ್ತು ತಸೀರ್ (31), ಮೈಸೂರು ಜಿಲ್ಲೆಯ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ Read More »

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೂಟ್ಯೂಬರ್ ಸಮೀರ್ ಮನೆಯಲ್ಲಿ ಇಂದು ಬೆಳ್ತಂಗಡಿ ಪೋಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಬಾಡಿಗೆ ಮನೆಗೆ ನ್ಯಾಯಾಲಯದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೋ ಸಿಬ್ಬಂದಿ ಜೊತೆ ತೆರಳಿ, ಸಮೀಕ್ಷೆ ವಿಡಿಯೋ ತಯಾರಿಸುತ್ತಿದ್ದ ಸ್ಥಳದಲ್ಲಿ ಶೋಧ ನಡೆಸಿರುವುದಾಗಿದೆ. ಈ ವೇಳೆ ಮನೆಯಲ್ಲೇ ಇದ್ದ ಸಮೀರ್ ಪೊಲೀಸರ ಕಾರ್ಯಾಚರಣೆಗೆ ಸಹಕರಿಸಿದ್ದಾಗಿ ತಿಳಿದು ಬಂದಿದೆ. ಸಮೀರ್ ‌ವಿಡಿಯೋ ತಯಾರಿಗೆ ಬಳಸಿದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಸೇರಿದಂತೆ ಹಲವಾರು

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು Read More »

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ ಪರ ಇದ್ದ ವಕೀಲರುಗಳ ‌ಮೇಲೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ಎಂಬವರು ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ್ ಮತ್ತು ತಂಡದ ವಿರುದ್ಧ ದೂರು ನೀಡಲಾಗಿದೆ. ಆರೋಪಿ ಚೆನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಧನಂಜಯ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದು, ಆ ದಾಖಲೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಆರಂಭದಲ್ಲಿ

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು Read More »

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌

ಬೆಂಗಳೂರು : ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಶಾಮನೂರು ಮನೆತನದ ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಪಿ. ಹರೀಶ್‌ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸ್ವತಃ ಎಸ್ಪಿ ಉಮಾ ಪ್ರಶಾಂತ್‌ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌ Read More »

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ

ಆರೋಪಿಗಳ 18 ಲ.ರೂ. ಮೌಲ್ಯದ ಎರಡು ಕಾರುಗಳು ವಶ ಉಡುಪಿ: ಕುಂದಾಪುರ ಸಮೀಪ ಕಾರ್ಯಾಚರಿಸುತ್ತಿದ್ದ ಹನಿಟ್ರ್ಯಾಪ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26) ಮತ್ತು ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು.

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ Read More »

error: Content is protected !!
Scroll to Top