ಅಪರಾಧ

ಪತ್ನಿಯನ್ನು ಹತ್ಯೆ ಮಾಡಿದ ಪಾಪಿ ಪತಿ | ಆರೋಪಿ ಬಂಧನ

ಉಪ್ಪಿನಂಗಡಿ : ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಗುರುವಾರ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿದಾತ ಬಾಜಾರು ನಿವಾಸಿ ರಫೀಕ್(45) ಎಂದು ಗುರುತಿಸಲಾಗಿದ್ದು, ಕೊಲೆಯಾದ ಮಹಿಳೆ ಝೀನತ್ ಎಂದು ಗುರುತಿಸಲಸಲಾಗಿದೆ. ಮನೆಯಲ್ಲೇ ಮಾತಿಗೆ ಮಾತು ಬೆಳದು ಗಂಡ ರಫೀಕ್ ತನ್ನ ಪತ್ನಿ ಝೀನತ್ ರವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿಪರಿಶೀಲನೆ ನಡೆಸಿದ್ದಾರೆ ಆರೋಪಿಯನ್ನು […]

ಪತ್ನಿಯನ್ನು ಹತ್ಯೆ ಮಾಡಿದ ಪಾಪಿ ಪತಿ | ಆರೋಪಿ ಬಂಧನ Read More »

ಸಹೋದರಿಬ್ಬರಿಂದ ಹಲ್ಲೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಸಹೋದರರ ನಡುವೆ ಜಗಳ ನಡೆದು ಕತ್ತಿಯಿಂದ ಮಾಡಿರುವ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಎಂಬಲ್ಲಿ ನಡೆದಿದೆ. ರಾಜಶೇಖರ್ ಹಲ್ಲೆಗೊಳಗಾದ ವ್ಯಕ್ತಿ. ಅವರು ನೀಡಿದ ದೂರಿನ ಮೇಲೆ ಸಹೋದರರಾದ ಮನೋಜ್ ಮತ್ತು ಜಯರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.ರಾಜಶೇಖರ್ ರವರು ಮನೆಯಲ್ಲಿದ್ದ ಸಂದರ್ಭ ಸಹೋದರ ಮನೋಜ್ ಕುಮಾರ್ ಅಲ್ಲಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ಯುತೊಡಗಿದ ಇನ್ನೊಬ್ಬ ಸಹೋದರ ಜಯರಾಜ್ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಸಹೋದರಿಬ್ಬರಿಂದ ಹಲ್ಲೆ | ಪ್ರಕರಣ ದಾಖಲು Read More »

ರೌಡಿಶೀಟರ್ ಬಿಕ್ಲು ಶಿವು ಹತ್ಯೆ ಪ್ರಕರಣ: ಭೈರತಿ ಬಸವರಾಜ್ ವಿರುದ್ದ ಕೇಸ್ ದಾಖಲು

ಆರೋಪಕ್ಕೆ ಭೈರತಿ ಬಸವರಾಜ್ ಪ್ರತಿಕ್ರಿಯೆ ಏನು? ಬೆಂಗಳೂರು: ಶಾಸಕ ಭೈರತಿ ಬಸವರಾಜ್ ಸೇರಿದಂತೆ ಐದು ಜನರ ವಿರುದ್ಧ ಭಾರತೀ ನಗರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ರೌಡಿಶೀಟರ್ ‌ಶಿಪಪ್ರಕಾಶ್ ಯಾನೆ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಕೇಸು ದಾಖಲಾಗಿರುವುದಾಗಿದೆ. ಅನುಮಾನದ ಮೇಲೆ ಮೂವರು ಆರೋಪಿಗಳನ್ನು ಈ ಮೊದಲೇ ಬಂಧಿಸಿ ವಿಚಾರಣೆ‌ಯನ್ನೂ ‌ನಡೆಸಲಾಗುತ್ತಿದೆ. ಶಿವಪ್ರಕಾಶ್ ಅವರ ತಾಯಿ ‌ವಿಜಯಲಕ್ಷ್ಮೀ ಅವರು ಭೈರತಿ ಬಸವರಾಜ್, ಜಗದೀಶ್, ಕಿರಣ್, ವಿಮಲ್, ಅನಿಲ್

ರೌಡಿಶೀಟರ್ ಬಿಕ್ಲು ಶಿವು ಹತ್ಯೆ ಪ್ರಕರಣ: ಭೈರತಿ ಬಸವರಾಜ್ ವಿರುದ್ದ ಕೇಸ್ ದಾಖಲು Read More »

ನಿಮಿಷಾ‌ ಪ್ರಿಯಾ ಗಲ್ಲು ಶಿಕ್ಷೆ ಬಹುತೇಕ ಖಚಿತ

ಬ್ಲಡ್ ಮನಿ, ಕ್ಷಮಾದಾನ ‌ನಿರಾಕರಿಸಿದ ತಲಾಲ್ ಮೆಹದಿ ಕುಟುಂಬ ಸನಾ: ಯೆಮನ್ ನಾಗರಿಕ ತಲಾಲ್ ಮೆಹದಿ ಹತ್ಯೆಗೆ ಸಂಬಂಧಿಸಿದ ಹಾಗೆ ಆರೋಪಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಬಹುತೇಕ ಖಚಿತವಾಗಿದೆ. ಮೃತ ತಲಾಲ್ ಕುಟುಂಬಸ್ಥರು ಬ್ಲಡ್ ಮನಿ ನಿರಾಕರಿಸಿದ್ದು, ಆರೋಪಿ ನಿಮಿಷಾಗೆ ಶರಿಯಾ ಕಾನೂನಿನ ಅನ್ವಯ ಕಿಸಾಸ್ ಬೇಡಿಕೆಯನ್ನು ಪುನರುಚ್ಛರಿಸಿದ್ದಾರೆ. ತಲಾಲ್ ಮೆಹದಿಯನ್ನು ಹತ್ಯೆ ಮಾಡಿದ ನಿಮಿಷಾಳಿಂದ ಕ್ಷಮೆ ಅಥವಾ ಪರಿಹಾರವನ್ನು ಸ್ವೀಕರಿಸುವ ಮಾತೇ ಇಲ್ಲ ಎಂದು ಮೃತನ ಕುಟುಂಬಸ್ಥರು ತೀರ್ಮಾನ ತಿಳಿಸಿದ್ದಾರೆ.

ನಿಮಿಷಾ‌ ಪ್ರಿಯಾ ಗಲ್ಲು ಶಿಕ್ಷೆ ಬಹುತೇಕ ಖಚಿತ Read More »

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ

ಕಾಂಬೋಡಿಯಾದ ಸೈಬರ್‌ ವಂಚಕರ ಹೊಸ ತಂತ್ರ ಬೆಂಗಳೂರು: ಮುಂಬಯಿಯ ಎನ್‌ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್‌ ಅಧಿಕಾರಿ ಕನ್ನಡಿಗ ದಯಾ ನಾಯಕ್ಹೆಸರು ಹೇಳಿ ಚಿಕ್ಕಬಳ್ಳಾಪುರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಭೂ ವಿಜ್ಞಾನಿಗೆ ಸೈಬರ್​ ವಂಚಕರು ಲಕ್ಷಾಂತರ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ದಯಾ ನಾಯಕ್ ಹೆಸರಿನಲ್ಲಿ ಸೈಬರ್ ವಂಚಕರು ಕರೆ ಮಾಡಿದ್ದಾರೆ. ಮುಂಬೈಯ ಕೆನರಾ ಬ್ಯಾಂಕ್​ನಲ್ಲಿ

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ Read More »

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ

ನಗರದಲ್ಲಿ ಮಾದಕ ವಸ್ತು ಮಾರುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳು ಮಂಗಳೂರು, ಜು.16: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಎಂಟು ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂದರ್ ದಕ್ಕೆಯಲ್ಲಿ ಎಂಡಿಎಂಎ ಮಾರಾಟದಲ್ಲಿ ನಿರತರಾಗಿದ್ದಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ Read More »

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ

ನಿಮ್ಮ ಐಡಿ ಕಾರ್ಡ್‌ ಬಳಸಿ ಡ್ರಗ್ಸ್‌ ದಂಧೆ ನಡೆಸಿದ್ದಾರೆ ಎಂದು ಬೆದರಿಕೆಯೊಡ್ಡಿ ಮೋಸ ಮಂಗಳೂರು: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಂತ ಹಂತವಾಗಿ 61.15 ಲ.ರೂ. ವರ್ಗಾಯಿಸಿಕೊಂಡು ವಂಚಿಸಿರುವ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೂ.19ರಂದು ಬೆಳಗ್ಗೆ ತನಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ಮುಂಬೈಯ ಕೊಲಾಬ ಪೊಲೀಸ್ ಠಾಣೆಯ ಅಧಿಕಾರಿ ಸಂದೀಪ್ ಎನ್ನುತ್ತಾ ಇಂಗ್ಲಿಷ್‌ನಲ್ಲಿ ಮಾತನಾಡಿದ. ನಿಮ್ಮ ಗುರುತಿನ ಚೀಟಿ ಬಳಸಿ ಯಾರೋ ಮಾನವ

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ Read More »

ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ‌ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿಗಳ ಜಾಮೀನು ಅರ್ಜಿ ರದ್ದು

ಬೆಂಗಳೂರು: ಪುತ್ತೂರಿನ ಜೊತೆಗೆ ಹತ್ತೂರನ್ನು ಬೆಚ್ಚಿ ಬೀಳಿಸಿದ್ದ ಕಲ್ಲೇಗ ಟೈಗರ್ಸ್ ಹುಲಿ ಕುಣಿತ ತಂಡದ ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಎರಡನೇ ಬಾರಿಯೂ ತಿರಸ್ಕರಿಸಿದೆ. ಹಾಗೆಯೇ ಈ ಪ್ರಕರಣದ ವಿಚಾರಣೆಯನ್ನು ನಾಲ್ಕು ತಿಂಗಳುಗಳೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಕಟ್ಟುನಿಟ್ಟಾಗಿ ಗಡುವು ವಿಧಿಸಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಆರೋಪಿಗಳಾದ ಚೇತನ್, ‌ಮನಿಶ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ರದ್ದು ಮಾಡಿರುವುದಾಗಿದೆ. ಮೃತ ಕುಟುಂಬದ

ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ‌ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿಗಳ ಜಾಮೀನು ಅರ್ಜಿ ರದ್ದು Read More »

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬೆಂಗಳೂರು: ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಾದನಾಯಕನಹಳ್ಳಿಯ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಅಟೋ ಚಾಲಕ ದೀಪು (26) ಎಂದು ಗುರುತಿಸಲಾಗಿದೆ. ಈತ ಬಾಲಕಿಯ ನೆರೆಮನೆಯ ನಿವಾಸಿಯಾಗಿದ್ದು ರಾತ್ರಿ ವೇಳೆ ಆಟೋ ಓಡಿಸಿ, ಹಗಲು ಮನೆಯಲ್ಲೇ ಇರುತ್ತಿದ್ದ. ನೆರೆಮನೆಯ ಬಾಲಕಿಯ ಜೊತೆಗೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿ ಆಕೆಯ ವಿರೋಧದ ನಡುವೆಯೂ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಆಕೆ ಗರ್ಭಿಣಿ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ Read More »

ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ

ಮಂಗಳೂರು: ತನ್ನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ‌ಅತ್ಯಾಚಾರ ಎಸಗಿದ್ದಾಗಿ ಮಹಿಳೆಯೊಬ್ಬರು ಪೊಲೀಸ್ ಕಮಿಷನರ್‌ ಅವರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಕಾವೂರು ಪೊಲೀಸು ಠಾಣೆಯಲ್ಲಿ ಕಾನ್ಸ್‌ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರ ನಾಯಕ್ ಅವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದರು. ಆ ದೂರಿನನ್ವಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ Read More »

error: Content is protected !!
Scroll to Top