ಅಪರಾಧ

ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ

ತಿರುವನಂತಪುರ: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದ ಮಹಿಳೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾರ್ಜಾದಲ್ಲಿ ನಡೆದಿದೆ. ಮೃತರನ್ನು ಕೇರಳದ ತಿರುವನಂತಪುರ ಮೂಲದ ವಿಪಂಜಿಕಾ(32) ಮತ್ತು ವೈಭವಿ ಎಂದು ಗುರುತಿಸಲಾಗಿದೆ. ಈ ಸಂಬಂಧ ವಿಪಂಜಿಕಾ ಅವರ ತಾಯಿ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪುತ್ರಿಯನ್ನು ನಿಧೀಶ್‌ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು ಅವರು ಶಾರ್ಜಾ‌ದಲ್ಲಿ ನೆಲೆಸಿದ್ದರು. ಪತಿ ಮತ್ತು ಆತನ ಮನೆಯವರು ನೀಡುತ್ತಿದ್ದ ಮಾನಸಿಕ, ದೈಹಿಕ ಕಿರುಕುಳ, ವರದಕ್ಷಿಣೆ […]

ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ Read More »

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ

ಸಂತ್ರಸ್ತೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಬೆಂಗಳೂರು: ವಿದ್ಯಾರ್ಥಿನ್ಯೊಬ್ಬಳ ಮೇಲೆ ಮೂಡುಬಿದ್ರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಮತ್ತು ಅವರ ಸ್ನೇಹಿತ ಅನೂಪ್ ಎಂದು ಗುರುತಿಸಲಾಗಿದೆ. ಆರೋಪಿ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿದ್ದಾನೆ. ಆಕೆ ಬೆಂಗಳೂರಿಗೆ ತೆರಳಿದ ನಂತರವೂ ಆಕೆಯ ಜೊತೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ Read More »

ಯೆಮನ್ ಪ್ರಜೆ ಹತ್ಯೆ ಪ್ರಕರಣ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ?

ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಆರೋಪದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷ ಪ್ರಿಯ ಅವರ ಶಿಕ್ಷೆ ಮುಂದೂಡಪಟ್ಟಿದೆ. ಜುಲೈ 16 ರಂದು ನಿಮಿಷಾಗೆ ಯೆಮನ್‌ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿತ್ತು. ಆದರೆ ಭಾರತದ ನಿರಂತರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದ್ದು ನಿಮಿಷಾ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿದೆ. ಈ ಪ್ರಕರಣದ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಕ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಈ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು ಮತ್ತು ಮೃತನ ಕುಟುಂಬಸ್ಥರು

ಯೆಮನ್ ಪ್ರಜೆ ಹತ್ಯೆ ಪ್ರಕರಣ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ? Read More »

ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ | ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಬನ್ನೂರು ಮೂಲದ ವ್ಯಕ್ತಿಯೊಬ್ಬರು ಹರಿತವಾದ ಆಯುಧವನ್ನು ದುರಸ್ಥಿಗಾಗಿ ಪುತ್ತೂರು ಪೇಟೆಗೆ ತಂದವರು ಬೊಳುವಾರು ಮಸೀದಿಯ ಬಳಿ ಶರ್ಟ್ ಹಿಂಬದಿ ಸಿಕ್ಕಿಸಿ ಪ್ರದರ್ಶನ ಮಾಡಿದ್ದಾರೆಂದು ಆರೋಪಿಸಲಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ | ಆರೋಪಿ ಪೊಲೀಸ್ ವಶಕ್ಕೆ Read More »

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ದ್ವೇಷ ಭಾಷಣ ನಿಯಂತ್ರಣ ಮಾಡುವಂತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಿಯಂತ್ರಿಸುವ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ನ್ಯಾಯಮೂರ್ತಿ ಕೆ.ವಿ.‌ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠವು ಸರ್ಕಾರಗಳು ಜನರಿಗೆ ವಾಕ್ ಸ್ವಾತಂತ್ರ್ಯದ ಮೌಲ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದಿದೆ. ಇನ್ಸ್ಟಾಗ್ರಾಮ್ ಇನ್ಫುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ದೂರುದಾರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ಈ ಸೂಚನೆ ನೀಡಿರುವುದಾಗಿದೆ. ದ್ವೇಷ ಭಾಷಣಗಳನ್ನು ನಿಯಂತ್ರಣ ಮಾಡಬೇಕು.

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ Read More »

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್

ನವದೆಹಲಿ: ಸಂಗಾತಿಯ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಅದನ್ನು ವೈವಾಹಿಕ ಸಮಸ್ಯೆಗಳ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳುವುದು ಸ್ವೀಕಾರಾರ್ಹ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಗಂಡ ಹೆಂಡತಿ ಒಬ್ಬರ ಮೇಲೊಬ್ಬರು ಬೇಹುಗಾರಿಕೆ ಮಾಡುತ್ತಿದ್ದಾರೆ, ರಹಸ್ಯವಾಗಿ ಸಂಭಾಷಣೆಗಳ ರೆಕಾರ್ಡ್ ಮಾಡುತ್ತಿದ್ದಾರೆ ಎಂದರೆ ಅವರಿಬ್ಬರ ದಾಂಪತ್ಯದಲ್ಲಿ ಏನೋ ಸಮಸ್ಯೆ ಇದೆ ಎಂದರ್ಥ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾ. ಸಂತೋಷ್‌ಚಂದ್ರ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಆ ಮೂಲಕ ದಂಪತಿಗಳ ನಡುವಿನ ರಹಸ್ಯ ಸಂಭಾಷಣೆಯು ಸಾಕ್ಷ್ಯ ಕಾಯ್ದೆಯಡಿ ರಕ್ಷಿಸಲ್ಪಟ್ಟಿದ್ದು, ಅದನ್ನು

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್ Read More »

ಭಾವಿ ಪತಿ ಕೊಲೆ ಕೇಸ್‌ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್‌

ರಾಜ್ಯಪಾಲರು ಕ್ಷಮಿಸಿದರೆ ಜೀವಾವಧಿ ಜೈಲು ಶಿಕ್ಷೆಯಿಂದ ಬಚಾವಾಗಬಹುದು ಎಂದು ತೀರ್ಪು ಬೆಂಗಳೂರು : 2003ರಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಭಾವಿ ಪತಿ, ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ. ಆದರೂ, ಇದು ಆರೋಪಿಗಳು ಯೌವ್ವನದ ದುಡುಕಿನಲ್ಲಿ ವಿವೇಚನೆಯಿಲ್ಲದೆ ನಡೆಸಿದ ಕೃತ್ಯ ಎಂದಿದ್ದು, ರಾಜ್ಯಪಾಲರಲ್ಲಿ ಕ್ಷಮಾದಾನ ಕೋರಲು ಅವಕಾಶ ಕಲ್ಪಿಸಲು ಆದೇಶಿಸಿದೆ. ಅದುವರೆಗೂ ಅಪರಾಧಿಗಳನ್ನು

ಭಾವಿ ಪತಿ ಕೊಲೆ ಕೇಸ್‌ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್‌ Read More »

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕರ ಕಿರುಕುಳ ತಾಳಲಾರದೆ ಆತ್ಮಾಹುತಿಗೆ ಯತ್ನಿಸಿದ್ದ ಬಿ.ಎಡ್‌ ವಿದ್ಯಾರ್ಥಿನಿ ಭುವನೇಶ್ವರ : ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಲೇಜಿನಲ್ಲಿ ಪ್ರಾಧ್ಯಾಪಕರು ದೀರ್ಘಕಾಲದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸರಗೊಂಡಿದ್ದ ಆಕೆ ಕಾಲೇಜಿನಲ್ಲೇ ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿ ಬೆಂಕಿ ಹಚ್ಚಿಕೊಂಡಿದ್ದರು. ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ವಿಭಾಗದ ಮುಖ್ಯಸ್ಥರು

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು Read More »

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ

ಸಂಸ್ಥೆ ಸರಿಯಾಗಿ ಸ್ಪಂದಿಸಿಲ್ಲ, ಪರಿಹಾರದ ಬಗ್ಗೆ ಮಾತನಾಡಿಲ್ಲ ಎಂದು ಆರೋಪಿಸಿದ ಕುಟುಂಬಸ್ಥರು ಮಂಗಳೂರು : ಮಂಗಳೂರಿನ ಸಮೀಪ ಸುರತ್ಕಲ್​ನಲ್ಲಿರುವ ಎಂಆರ್​ಪಿಎಲ್​​ ಘಟಕದಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಮೃತಪಟ್ಟ ಸಿಬ್ಬಂದಿಯ ಶವವನ್ನು ಅವರ ಹುಟ್ಟೂರಿಗೆ ಒಯ್ದ ಐದು ಮಂದಿಯನ್ನು ಅಲ್ಲಿನ ಗ್ರಾಮಸ್ಥರು ದಿಗ್ಬಂಧನದಲ್ಲಿ ಇರಿಸಿಕೊಂಡಿದ್ದಾರೆ. ಎಂಆರ್​ಪಿಎಲ್​​ನ ಒಎಂಎಸ್ ವಿಭಾಗದ ಟ್ಯಾಂಕ್ ಎಫ್.ಬಿ.7029ರಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿ ಮೃತಪಟ್ಟು ಓರ್ವ ಅಸ್ವಸ್ಥರಾಗಿದ್ದರು. ಪ್ರಯಾಗ್ ರಾಜ್ ಮೂಲದ ವರ್ಷದ ದೀಪ್ ಚಂದ್ರ ಭಾರ್ತಿಯಾ (33), ಕೇರಳದ ವರ್ಷದ ಬಿಜಿಲ್

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ Read More »

ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸೆರೆ

ಭಾರಿ ಪ್ರಮಾಣದ ನಿಷೇಧಿತ ಡ್ರಗ್ಸ್‌ ವಶ ಬೆಂಗಳೂರು: ಮಾದಕವಸ್ತು ಸಾಗಾಟ ಮಾಡಿದ ಆರೋಪದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್‌ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ್‌ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆತನ ಬಳಿ ನಿಷೇಧಿತ 120 ಬಾಟಲಿ ಕೊಡೆನೈನ್ ಸಿರಪ್ ಇತ್ತು ಎಂಬ ಆರೋಪ ಕೇಳಿ ಬಂದಿದೆ.

ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸೆರೆ Read More »

error: Content is protected !!
Scroll to Top