ಅಪರಾಧ

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ

ಇನ್‌ಸ್ಟಾಗ್ರಾಂ ಲಿಂಕ್‌ ಕಳುಹಿಸಿ ಮೋಸ ಮಂಗಳೂರು: ವರ್ಕ್‌ ಫ್ರಂ ಹೋಮ್‌ ಪಾರ್ಟ್ ಟೈಂ ಕೆಲಸ ಮಾಡಿ ಹೆಚ್ಚು ಹಣ ಸಂಪಾದಿಸಬಹುದು ಎಂದು ನಂಬಿಸಿ 20 ಲಕ್ಷಕ್ಕೂ ಹೆಚ್ಚು ಹಣ ಮೋಸ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಸಂಭವಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿ 20,62,713 ರೂ. ಕಳೆದುಕೊಂಡ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 6ರಂದು ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಬಂದ ಸಂದೇಶವನ್ನು ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ತೆರೆದುಕೊಂಡಿದೆ. ಬಳಿಕ ಸಂಪರ್ಕಕ್ಕೆ ಬಂದ ಅಪರಿಚಿತ ವ್ಯಕ್ತಿ […]

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ Read More »

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ

ಕಾರಿನಲ್ಲಿ ಶಾಲೆಗೆ ಕರೆದೊಯ್ದು ವಿಶ್ವಾಸ ಗಳಿಸಿ ಕಿರುಕುಳ ಮಂಗಳೂರು : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪ ಈ ಘಟನೆ ನಡೆದಿದೆ. ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೊ ಕೇಸ್ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಫಾರ್ಚುನರ್‌ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ Read More »

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು

ಕೃತಕ ಬುದ್ಧಿಮತ್ತೆ ಮೂಲಕ ಕಾಲ್ಪನಿಕ ವಿಡಿಯೋ ಮಾಡಿದ ಯೂಟ್ಯೂಬರ್‌ ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಇನ್ನೊಂದು ಸುತ್ತಿನ ಅಪಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಹಲವಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಜಟಾಪಟಿ ಶುರುವಾಗಿದೆ. ಈ ವ್ಯಕ್ತಿ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ ಬಳಿಕ ಈ ದೂರಿನ ಬಗ್ಗೆ ಕಾಲ್ಪನಿಕವಾಗಿ ಕೃತಕ ಬುದ್ಧಿಮತ್ತೆ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವಿಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಯುಟ್ಯೂಬರ್ ಸಮೀರ್

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು Read More »

ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ ಬೆಳ್ತಂಗಡಿ ತಾಲೂಕಿನ ಕೊಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ಕೊಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯ ಸಮಸ್ಯೆಗಳಿತ್ತು ಎಂದು ತಿಳಿದುಬಂದಿದೆ. ರಮ್ಯ

ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ Read More »

ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ

ಪುತ್ತೂರು, ವಿಟ್ಲ, ಉಪ್ಪಿನಂಗಡಿ ಮತ್ತಿತರೆಡೆ ಕಳ್ಳತನ ಮಾಡಿದ್ದ ಆರೋಪಿಗಳು ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತರ್‌ ರಾಜ್ಯ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೊಯ್ದ ಗ್ರಾಮದ ಕಲಾಯಿ ಹೌಸ್ ನಿವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಉರ್ಮಿಚಾಲ್ ಬೇಕೂರು ನಿವಾಸಿ ಮಹಮ್ಮದ್ ರಿಯಾಜ್ ಅಲಿಯಾಸ್ ಕಡಪ್ಪ ರಿಯಾಜ್

ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ Read More »

ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ

ಹಲಾಲ ರೂಪದಲ್ಲಿ ನೇಪಾಳದ ಮೂಲಕ ಹಣ ಮತಾಂತರಕ್ಕೆ ಬಳಕೆ ಲಕ್ನೋ: ಜನರನ್ನು ಅಕ್ರಮವಾಗಿ ಮತಾಂತರ ಮಾಡುವುದು, ದೇಶದ್ರೋಹದ ಆರೋಪದಲ್ಲಿ ಉತ್ತರಪ್ರದೇಶದಲ್ಲಿ ಎಟಿಎಸ್ ಅಧಿಕಾರಿಗಳ ಬಲೆಗೆ ಬಿದ್ದಿರುವ ಸ್ವಯಂಘೋಷಿತ ಬಾಬ ಛಂಗುರ್‌ಗೆ ಸಂಬಂಧಿಸಿದ ಹಾಗೆ ಮತ್ತಷ್ಟು ಆಘಾತಕಾರಿ ಸುದ್ದಿಗಳು ಬೆಳಕಿಗೆ ಬಂದಿದೆ. ಆರೋಪಿ ಛಂಗುರ್ ಕಳೆದ ಮೂರು ವರ್ಷಗಳಲ್ಲಿ 500 ಕೋಟಿ ರೂ. ವಿದೇಶಿ ದೇಣಿಗೆ ಪಡೆದಿರುವುದಾಗಿ ಎಟಿಎಸ್ ಅಧಿಕಾರಿಗಳು ತಿಳಿಸಿದ್ದು, ಇದರಲ್ಲಿ 200 ಕೋಟಿ ರೂ. ಅಧಿಕೃತ ಮೂಲದ್ದು ಎಂದು ದೃಢೀಕರಿಸಲಾಗಿದೆ. ಉಳಿದ ಮೊತ್ತವನ್ನು ನೇಪಾಳದ‌ ಮೂಲಕ

ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ Read More »

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹು ಪಟ್ಟಣದಲ್ಲಿ 65 ವರ್ಷದ ತನ್ನ ಅಜ್ಜಿಯ ಮೇಲೆ 25 ವರ್ಷದ ಯುವಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಪತಿಯ ನಿಧನಾನಂತರ ಒಂಟಿಯಾಗಿ ವಾಸಿಸುತ್ತಿದ್ದ  65ವರ್ಷದ ವೃದ್ದೆಯ ಮನೆಗೆ ಜುಲೈ3ರ ಮಧ್ಯಾಹ್ನ ಆಕೆಯ ಮೊಮ್ಮಗ  ಬಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಆತ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ Read More »

ರಾತ್ರಿ ಬೆಳಗಾಗುವುದರೊಳಗೆ ದ್ವಿಚಕ್ರ ವಾಹನ ಕಳವು

ಪುತ್ತೂರು: ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿಯೆದುರು ನಿಲ್ಲಿಸಿದ್ದ ಆಕ್ಟಿವಾ ಹೋಂಡಾ(ಕೆ.ಎ:21-ಇಡಿ 9849) ಕಳವಾದ ಬಗ್ಗೆ, ಪುತ್ತೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ಳಿಗೆ ಗ್ರಾಮದ ಕೆಮ್ಮಾರ ಉಮೇಶ್‌ ಎಂಬವರು ಪುರುಷರಕಟ್ಟೆ ಮಾಯಂಗಲದಲ್ಲಿನ ಅಂಗನವಾಡಿಯ ಮುಂದುಗಡೆ ಕಡ್ಡಟದ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಆಕ್ಟಿವಾ ಸ್ಟಾರ್ಟ್‌ ಆಗದ್ದರಿಂದ ಅಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ ಬಂದಾಗ ಆಕ್ಟಿವಾ ಇಲ್ಲದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕಲಂ303(2) : 2023 5 ಪ್ರಕರಣ ದಾಖಲಿಸಿದ್ದಾರೆ.

ರಾತ್ರಿ ಬೆಳಗಾಗುವುದರೊಳಗೆ ದ್ವಿಚಕ್ರ ವಾಹನ ಕಳವು Read More »

ಪರಿಚಯಸ್ಥನಿಂದಲೇ ನಕಲಿ ಸಹಿಯಿಂದ ಕಾರು ಖರೀದಿ ; ಪ್ರಕರಣ ದಾಖಲು

ಪುತ್ತೂರು: ಕಾರು ಖರೀದಿಸಲೆಂದು ಪರಿಚಯಸ್ಥನೊಂದಿಗೆ ಬಂದು ಮುಂಗಡ ಹಣ ನೀಡಿ ತಿಂಗಳ ಬಳಿಕ, ಕಾರು ಬುಕ್ಕಿಂಗ್ ಮಾಡಿದ್ದ ಮಹಿಳೆಯ ನಕಲು ಸಹಿ ಮಾಡಿ ಒಪ್ಪಿಗೆ ಪತ್ರವನ್ನು ಶೋ ರೂಮ್ ಗೆ ನೀಡಿ ಕಾರು ಖರೀದಿಸಿ ವಂಚನೆ ಮಾಡಿದ ಪ್ರರಣ ಬೆಳಕಿಗೆ ಬಂದಿದೆ. ವಂಚನೆ ಮಾಡಿದ ಆರೋಪಿ ಮತ್ತು ಶೋರೂಮ್‌ ಮ್ಯಾನೇಜ‌ರ್, ಸಂಸ್ಥೆಯ ಅಕೌಂಟೆಂಟ್, ಸೇಲ್ಸ್ ಎಕ್ಸಿಕ್ಯೂಟಿವ್ ಮತ್ತು ಆರೋಪಿಯಿಂದ ಕಾರು ಪಡೆದುಕೊಂಡ ಮಹಿಳೆಯ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.     ಅಮರಮುಡೂರು ಗ್ರಾಮದ

ಪರಿಚಯಸ್ಥನಿಂದಲೇ ನಕಲಿ ಸಹಿಯಿಂದ ಕಾರು ಖರೀದಿ ; ಪ್ರಕರಣ ದಾಖಲು Read More »

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು

ತ್ಯಾಜ್ಯ ತೈಲ ಘಟಕದಲ್ಲಿ ಸೋರಿಕೆಯಾದ ವಿಷಾನಿಲ ಮಂಗಳೂರು: ಸುರತ್ಕಲ್‌ ಸಮೀಪವಿರುವ ಕೇಂದ್ರ ಸ್ವಾಮ್ಯದ ಎಂಆರ್‌ಪಿಎಲ್‌ನ ಒಂದು ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಇನ್ನೊಬ್ಬ ಅಸ್ವಸ್ಥರಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಎಂಆರ್‌ಪಿಎಲ್‌ನ OM‌‌‌‌&S ತ್ಯಾಜ್ಯ ತೈಲ ಸಂಗ್ರಹ ಘಟಕದಲ್ಲಿ ಇಂದು ಬೆಳಗ್ಗೆ ಅನಿಲ ಸೋರಿಕೆಯಾಗಿದೆ. ಘಟಕದಲ್ಲಿ ಲೆವೆಲ್‌ ಪರಿಶೀಲನೆ ಮಾಡಲು ತೆರಳಿದ ಕಾರ್ಮಿಕ ವಾಪಸಾಗದೆ ಇರುವುದನ್ನು ನೋಡಿ ಇನ್ನಿಬ್ಬರು ಅಲ್ಲಿಗೆ ತೆರಳಿದ್ದಾರೆ. ಮೂವರೂ ಅಲ್ಲಿ ಅನಿಲ ಸೋರಿಕೆಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು Read More »

error: Content is protected !!
Scroll to Top