ಅಪರಾಧ

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಡಾಕ್ಟರ್‌ ಮಂಗಳೂರು: ಕೆಲದಿನಗಳ ಹಿಂದೆಯಷ್ಟೇ ಉಗ್ರನಿಗೆ ನೆರವು ನೀಡಿದ ಆರೋಪದಲ್ಲಿ ಮನೋವ್ಯದ್ಯ ಸೆರೆಯಾಗಿದ್ದ. ಇದೀಗ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸಿದ ಆರೋಪದಲ್ಲಿ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ವೈದ್ಯನನ್ನು ಬಂಧಿಸಿದ್ದಾರೆ. ವೈದ್ಯ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ […]

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು Read More »

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಶೂಟ್‌ ಮಾಡಿದ ಕಾಮುಕ ಅರೆಸ್ಟ್‌

ಬೆಂಗಳೂರು: ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹಾಜ ಮೊಯಿನುದ್ದಿನ್ ಸೆರೆಯಾಗಿರುವ ಆರೋಪಿ. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್ ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ. ಕಳೆದ ಮಂಗಳವಾರ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ-ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿದ್ದರು. ಇದನ್ನು ಗಮನಿಸಿದ ಕಾಮುಕ ಮೊಯಿನುದ್ದಿನ್ ಕಿಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಈತ ವಿಡಿಯೋ

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಶೂಟ್‌ ಮಾಡಿದ ಕಾಮುಕ ಅರೆಸ್ಟ್‌ Read More »

ಬೆಳಾಲು ಯುವತಿಯ ಶವ ಕೆರೆಯಲ್ಲಿ ಪತ್ತೆ

ಬೆಳಾಲು: ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿಯ ಶವ ಅನುಮಾನಾಸ್ಪದವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ. ಕುಕ್ಕೊಟ್ಟು ನಾಗೇಶ್ ಎಂಬವರ ಮಗಳು ವೀಣಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ವೀಣಾರವರ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ವೀಣಾ ಮೇ 10 ರಂದು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ಆ ನಂತರ ಆಕೆ ಪತ್ತೆಯಾಗಿದ್ದರು. ಜೂ.11ರಂದು ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಳಾಲು ಯುವತಿಯ ಶವ ಕೆರೆಯಲ್ಲಿ ಪತ್ತೆ Read More »

ಸಿಹಿತಿಂಡಿಯಲ್ಲಿ ಕೈದಿಗೆ ಡ್ರಗ್ಸ್‌ ಕೊಡಲು ಯತ್ನಿಸಿದ ಮಹಿಳೆ ವಶ

ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಮುಹಮ್ಮದ್ ಅಸ್ಕರ್ ಎಂಬಾತನಿಗೆ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬಳ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.10ರಂದು ಮಧ್ಯಾಹ್ನ ಸಂದರ್ಶಕಿಯಾಗಿ ರಮ್ಸೂನಾ ಎಂಬಾಕೆ ಬಂದಿದ್ದು, ಆಕೆ ಮುಹಮ್ಮದ್ ಅಸ್ಕರ್‌ಗೆ ನೀಡಲು ಬೇಕರಿ ತಿಂಡಿಗಳನ್ನು ಕೊಂಡೊಯ್ದಿದ್ದಳು. ಇದನ್ನು ಸಿಬ್ಬಂದಿ ಪರಿಶೀಲಿಸಿದಾಗ 5 ಸಣ್ಣ ಪೊಟ್ಟಣಗಳು ಕಂಡು ಬಂದಿವೆ. ಈ ಬಗ್ಗೆ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ ಹೊಸಂಗಡಿಯ ಹುಸೇನ್ ಎಂಬಾತ ಕೆಲವು ಪೊಟ್ಟಣಗಳನ್ನು ಕೊಟ್ಟಿದ್ದಾನೆ. ಅದನ್ನು ತಂದು

ಸಿಹಿತಿಂಡಿಯಲ್ಲಿ ಕೈದಿಗೆ ಡ್ರಗ್ಸ್‌ ಕೊಡಲು ಯತ್ನಿಸಿದ ಮಹಿಳೆ ವಶ Read More »

ಸುಳ್ಯ: 13 ವರ್ಷದ ಬಾಲಕಿ ಗರ್ಭಿಣಿ ಎಂದು ವರದಿ ಕೊಟ್ಟು ಎಡವಟ್ಟು ಮಾಡಿಕೊಂಡ ವೈದ್ಯ

ಗಂಭೀರ ಲೋಪ ಮಾಡಿದ ಡಾಕ್ಟರ್‌ ಕೂಡಲೇ ವರ್ಗಾವಣೆ, ತನಿಖೆಗೆ ಆದೇಶ ಸುಳ್ಯ: ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಆಘಾತಕಾರಿ ಘಟನೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ದೂರಿನ ಬೆನ್ನಲ್ಲೇ ಈ ವೈದ್ಯಾಧಿಕಾರಿಯನ್ನು ಇಲ್ಲಿಂದ ವರ್ಗಾಯಿಸಲಾಗಿದ್ದು, ಇಡೀ ಘಟನೆಯ ತನಿಖೆಗೆ ಆದೇಶಿಸಲಾಗಿದೆ. ವೈದ್ಯಾಧಿಕಾರಿ ಎಡವಟ್ಟು ಮಾಡಿದ ವಿಚಾರವನ್ನು ಆಶಾ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರಿಗೆ ಹೇಳಿದ್ದು, ಈ ಸುಳ್ಳು ಮಾಹಿತಿ

ಸುಳ್ಯ: 13 ವರ್ಷದ ಬಾಲಕಿ ಗರ್ಭಿಣಿ ಎಂದು ವರದಿ ಕೊಟ್ಟು ಎಡವಟ್ಟು ಮಾಡಿಕೊಂಡ ವೈದ್ಯ Read More »

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು

ಜನರು ಆಶ್ರಯಪಡೆದಿದ್ದ ಮಠದ ಮೇಲೆ ಬಾಂಬ್‌ ದಾಳಿ ನೇಪಿಡಾವ್: ಮ್ಯಾನ್ಮಾರ್‌ನ ಮಧ್ಯ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವೈಮಾನಿಕ ಬಾಂಬ್‌ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪ್ರತಿರೋಧ ಗುಂಪಿನ ಸದಸ್ಯರೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದ ಹತ್ತಿರದ ಹಳ್ಳಿಗಳ 150ಕ್ಕೂ ಹೆಚ್ಚು ಜನರು ಆಶ್ರಯ ಪಡೆಯುತ್ತಿದ್ದ ಗ್ರಾಮದ ಮಠದ ಕಟ್ಟಡದ ಮೇಲೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜೆಟ್

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು Read More »

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ

ಪತಿಯಿಂದಲೇ ಹಲ್ಲೆಗೊಳಗಾದ ನಟಿ; ಆಸ್ಪತ್ರಗೆ ದಾಖಲು ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮೇಲೆ ಪತಿಯೇ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಯಾನೆ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಶ್ರುತಿ ನಟಿಸಿರುವ ನಟಿಯ ಮೇಲೆ ಜುಲೈ 4ರಂದು ಹಲ್ಲೆಯಾಗಿದ್ದ ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ Read More »

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ

ರೇಣುಕಾಸ್ವಾಮಿ ಕೊಲೆ ಆರೋಪದ ಕಾರಣಕ್ಕೆ ವಿಸಾ ತಿರಸ್ಕರಿಸಿದ ಅಧಿಕಾರಿಗಳು ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ಗೆ ಒಂದರ ಮೇಲೆ ಮತ್ತೊಂದು ಸಮಸ್ಯೆಗಳು ಬಂದೊದಗುತ್ತಿದೆ. ಡೆವಿಲ್ ಚಿತ್ರೀಕರಣದ ಕಾರಣಕ್ಕಾಗಿ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ಅಧಿಕಾರಿಗಳು ತಿರಸ್ಕರಿಸಿದ್ದು, ಇದು ಚಿತ್ರತಂಡಕ್ಕೆ ಹಿನ್ನಡೆಯಾಗುವಂತೆ ಮಾಡಿದೆ. ದರ್ಶನ್ ಮೇಲಿನ ಕೊಲೆ ಆರೋಪದ ಕಾರಣಕ್ಕೆ ಸ್ವಿಟ್ಜರ್ಲ್ಯಾಂಡ್ ಅಧಿಕಾರಿಗಳು ವಿಸಾ ನಿರಾಕರಿಸಿದ್ದು, ಇದರಿಂದಾಗಿ ಚಿತ್ರತಂಡಕ್ಕೆ ಸಮಸ್ಯೆಯಾಗಿದೆ. ದರ್ಶನ್‌ಗೆ ಜುಲೈ 11 ರಿಂದ 30 ರ

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ Read More »

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರನಿಗೆ ನೆರವಾಗಿದ್ದ ವೈದ್ಯ ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಟಿ.ನಾಸಿರ್‌ಗೆ ನೆರವು ನೀಡಿದ್ದ ಮನೋವೈದ್ಯ ಡಾ.ನಾಗರಾಜ್‌ ನಾಸಿರ್‌ ಸೇರಿದಂತೆ ಹಲವು ಕೈದಿಗಳಿಗೆ 300ಕ್ಕೂ ಹೆಚ್ಚು ಮೊಬೈಲ್‌ ಪೂರೈಸಿದ್ದ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಎಲ್​ಇಟಿ ಉಗ್ರ ಟಿ.ನಾಸೀರ್​​ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ನೀಡಿದ್ದ ಪ್ರಕರಣ ಸಂಬಂಧ ಬಂಧಿತರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಈ ಸಂದರಭದಲ್ಲಿ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಬಂಧಿತ ಮನೋವೈದ್ಯ ಡಾ.

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌ Read More »

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ

ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂಬ ಕುಹಕಕ್ಕೆ ಬೇಸತ್ತು ಕೃತ್ಯ ನವದೆಹಲಿ: ರಾಷ್ಟ್ರೀಯ ಟೆನ್ನಿಸ್‌ ಆಟಗಾರ್ತಿಯನ್ನು ಅವರ ತಂದೆಯ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಗುರುಗಾಂವ್‌ನಲ್ಲಿ ಸಂಭವಿಸಿದೆ. ರಾಧಿಕಾ ಯಾದವ್‌ (25) ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಊರಿನ ಜನ ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂದು ಜನರು ಕುಹಕವಾಡುತ್ತಿರುವುದರಿಂದ ಬೇಸತ್ತು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಧಿಕಾ ಯಾದವ್‌ ಟೆನ್ನಿಸ್‌ ಅಕಾಡೆಮಿಯೊಂದನ್ನು ನಡೆಸುತ್ತಿದ್ದು, ಊರವರ ಚುಚ್ಚುನುಡಿಗಳಿಂದ ಬೇಸತ್ತ ದೀಪಕ್‌ ಯಾದವ್‌

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ Read More »

error: Content is protected !!
Scroll to Top