ಅಪರಾಧ

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು

ಅಪಘಾತವಾದ ಕಾರನ್ನು ಬಿಡುಗಡೆ ಮಾಡಲು 50 ಸಾವಿರ ಲಂಚ ಕೇಳಿದ್ದ ಪೊಲೀಸರು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲೀಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ […]

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು Read More »

ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ

ಗುರುವಾಯನಕೆರೆ: ದಿನಸಿ ಅಂಗಡಿಯೊಂದರ ಎದುರಿನಲ್ಲಿರಿಸಿದ ಜಾಹೀರಾತು ಬ್ಯಾನರ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಸಾಲವನ್ನು ಹಿಂತಿರುಗಿಸಲು ತಿಳಿಸಿದ ಎಂಬ ಕಾರಣಕ್ಕಾಗಿ ಅಂಗಡಿಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿರುವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ದಿನಸಿ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಫಲಕದ ಬ್ಯಾನರ್ ಗೆ ಜು. 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ವ್ಯಕ್ತಿಯೊರ್ವ ಬೆಂಕಿ ಹಚ್ಚಿ ಓಡಿಹೋಗಿದ್ದ. ಅಂಗಡಿಯವರು ಬೆಳಗ್ಗೆ

ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ Read More »

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ

ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಶಾಮೀಲಾಗಿರುವ ಆರೋಪಿ ಉಡುಪಿ: ಉಡುಪಿ ಭಾಗದಲ್ಲಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಕುಖ್ಯಾತ ಗರುಡ ಗ್ಯಾಂಗಿನ ಓರ್ವ ಸದಸ್ಯನನ್ನು ಪೊಲೀಸರು ಬಂಧಿಸಿ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದರು. ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿರುವ ಕಬೀರ್ 2005ರಿಂದ ಕೊಲೆ, ಕೊಲೆಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು,

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ Read More »

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ

ಕರ್ನಾಟಕದ ವಿಜಯಪುರದಲ್ಲಿ ತರಕಾರಿ ವ್ಯಾಪಾರಿ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಬೆಂಗಳೂರು: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಿಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕರ್ನಾಟಕದ ವಿಜಯಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿಯ ಮಹಿಳೆಯನ್ನು ವಿವಾಹವಾಗಿ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. 1998ರ ಫೆಬ್ರವರಿ 14ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ Read More »

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ನೊಟೀಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ‌ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಪತ್ನಿಗೆ ಈವರೆಗೆ ವಿಚಾರಣೆಗೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ಹಾಗೆಯೇ ತನಿಖೆಗೆ ಸಂಬಂಧಿಸಿದ

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ Read More »

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ

298 ಮಂದಿಯ ಸಾವಿಗೆ ರಷ್ಯಾವೇ ನೇರ ಹೊಣೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಸ್ಟ್ರಾಸ್‌ಬರ್ಗ್: 283 ಪ್ರಯಣಿಕರು ಮತ್ತು 15 ಸಿಬ್ಬಂದಿ ಸಾವಿಗೀಡಾಗಿದ್ದ ಮಲೇಷ್ಯಾದ ನಾಗರಿಕ ಯಾನ ವಿಮಾನ ಪತನಕ್ಕೆ ಯಾವುದೇ ತಾಂತ್ರಿಕ ದೋಷ ಕಾರಣವಲ್ಲ, ರಷ್ಯಾದ ಕ್ಷಿಪಣಿ ಬಡಿದು ಈ ವಿಮಾನ ಪತನಗೊಂಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಯುರೋಪ್‌ನ ಉನ್ನತ ಮಾನವ ಹಕ್ಕುಗಳ ನ್ಯಾಯಾಲಯ ಬಹಿರಂಗಪಡಿಸಿದೆ. 2014ರ ಜುಲೈ 17ರಂದು ಮಲೇಷ್ಯಾ ಏರ್‌ಲೈನ್ಸ್‌ MH17 ಬೋಯಿಂಗ್‌ 777 ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲ 283 ಪ್ರಯಾಣಿಕರು

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ Read More »

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ

ಬೆಂಗಳೂರಿನ ಜನನಿಬಿಢ ರಸ್ತೆಗಳಲ್ಲಿ ನಡೆದುಕೊಂಡು ಹೋಗುವವರ ವಿಡಿಯೋ ಮಾಡುತ್ತಿದ್ದ ಆರೋಪಿ ಬೆಂಗಳೂರು: ಬೆಂಗಳೂರಿನ ಜನನಿಬಿಢ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ವಿಡಿಯೋ ಶೂಟ್‌ ಮಾಡಿ ಅಸಭ್ಯ ಕಮೆಂಟ್‌ಗಳೊಂದಿಗೆ ಇನ್‌ಗ್ರಾಂಗೆ ಅಪ್‌ಲೋಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬನಶಂಕರಿ, ಕೋರಮಂಗಲ ಮತ್ತಿತರೆಡೆ ಸಾರ್ವಜನಿಕ ರಸ್ತೆಯ ಜನಜಂಗುಳಿಯ ವಿಡಿಯೋ ಮಾಡುತ್ತಿದ್ದೇನೆ ಎಂದು ಜನರನ್ನು ನಂಬಿಸಿ ರಹಸ್ಯವಾಗಿ ಯುವತಿಯರ ವಿಡಿಯೋ ಮತ್ತು ಫೋಟೊ ಶೂಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಕೆ.ಆರ್ ಪುರಂ ನಿವಾಸಿ

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು

ಪುತ್ತೂರು: ಪುತ್ತೂರಿನ ಶಾಸಕ‌ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿ ಹಾಗೂ ಕಮಿಷನರ್ ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು Read More »

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ

ಹೆಡ್‌ಮೇಷ್ಟ್ರು ಸೇರಿ ಆರು ಮಂದಿ ವಿರುದ್ಧ ಪೋಕ್ಸೊ ಕೇಸ್‌ ಪುಣೆ : ಶಾಲೆಯ ಮುಖ್ಯಶಿಕ್ಷಕನೇ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಶೌಚಾಲಯದಲ್ಲಿ ರಕ್ತದ ಕಲೆ ಕಂಡ ಹಿನ್ನೆಲೆಯಲ್ಲಿ ಮುಟ್ಟಾದವರು ಯಾರು ಎಂದು ತಿಳಿಯಲು ಮುಖ್ಯಶಿಕ್ಷಕ ಎಲ್ಲ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮಂಗಳವಾರ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು.

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ Read More »

error: Content is protected !!
Scroll to Top