ಅಪರಾಧ

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಿಸುತ್ತಿದ್ದ 4 ಲಾರಿಗಳು ವಶ

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ನಡೆದಿದೆ. ಮಿಂಚಪದವಿನಿಂದ ಸುಳ್ಯದ ಕಡೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದು ಸುಳ್ಯ ಪೊಲೀಸ್ ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಿಸುತ್ತಿದ್ದ 4 ಲಾರಿಗಳು ವಶ Read More »

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌

ವಿಡಿಯೋ ಭಾರಿ ವೈರಲ್‌ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧ ನಡೆಸುತ್ತಿರುವ ಹೋರಾಟದ ಮುಂಚೂಣಿಯಲ್ಲಿರುವ ಗಿರೀಶ್‌ ಮಟ್ಟಣ್ಣನವರ್‌ ಕೊಲೆ ಆರೋಪಿಯನ್ನು ತನ್ನ ಜೊತೆ ಇಟ್ಟುಕೊಂಡು ಆತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ವಿಡಿಯೋ ಒಂದು ನಿನ್ನೆಯಿಂದ ವೈರಲ್‌ ಆಗಿದ್ದು, ಅವರು ನಡೆಸುತ್ತಿರುವ ಹೋರಾಟದ ಸಾಚಾತನವನ್ನು ಬಯಲುಗೊಳಿಸಿದೆ. ಮಾಧ್ಯಮಗಳ ಜೊತೆಗೆ ಮಾತನಾಡುವಾಗ ರೌಡಿಶೀಟರ್‌ ಒಬ್ಬನನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಗಿರೀಶ್ ಮಟ್ಟಣ್ಣನವರ್ ಪರಿಚಯಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ತಮ್ಮ ಪಕ್ಕದಲ್ಲಿ ನಿಂತಿದ್ದ ಮದನ ಬುಗಡಿ

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌ Read More »

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ

ಪೊಲೀಸರ ಪ್ರಶ್ನೆಗಳ ಬಾಣದಿಂದ ಕಂಗಾಲಾದ ಸುಳ್ಳು ಸುದ್ದಿಕೋರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ರೇಪ್ ಮತ್ತು ಮರ್ಡರ್ ಆಗಿದೆ ಎಂದು ಎಐ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದ ಯೂಟ್ಯೂಬರ್‌ ಮಹಮ್ಮದ್‌ ಸಮೀರ್ ಬೆಳ್ತಂಗಡಿ ಠಾಣೆಯಲ್ಲಿ ಭಾನುವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗಿದ್ದ. ಅಧಿಕಾರಿಗಳು ಆತನನ್ನು ಸುಮಾರು 4.30 ತಾಸುಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ. ಸೋಮವಾರ ಕೂಡ ಸಮೀರ್‌ ವಿಚಾರಣೆ ನಡೆಯಲಿದೆ. ಸೋಮವಾರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ ಜೊತೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ. ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ Read More »

ಬಂಟ್ವಾಳ : ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋದಾಮಿಗೆ ದಾಳಿ

ಕಲ್ಲಡ್ಕ ಪಟ್ಟೆಕೋಡಿಯಲ್ಲಿ 25 ಕ್ವಿಂಟಾಲ್‌ಗೂ ಅಧಿಕ ಅಕ್ಕಿ ವಶ ಬಂಟ್ವಾಳ : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಖಾಸಗಿ ಗೋದಾಮಿನಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು ಶನಿವಾರ ದಾಳಿ ನಡೆಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳದ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಗೋದಾಮಿನಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಪ್ರಕರಣಕ್ಕೆ ಸಂಬಂದಿಸಿ ಕಲ್ಲಡ್ಕ ನಿವಾಸಿಗಳಾದ ಗೋದಾಮು ನಿರ್ವಾಹಕ ಉಮ್ಮರಬ್ಬ ಯಾನೆ ಪುತ್ತುಮೋನು (47) ಹಾಗೂ ಕೆಲಸಗಾರ ರಫೀಕ್ (42) ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಂಟ್ವಾಳ : ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋದಾಮಿಗೆ ದಾಳಿ Read More »

ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 20 ವರ್ಷ ಜೈಲು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಯುವಕ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರ ವಯಸ್ಸಿನ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಮಾನು ಕೆ.ಎಸ್. ಶನಿವಾರ ಈ ತೀರ್ಪು ನೀಡಿದ್ದಾರೆ. ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯ ಕಾಡಿನ ಬಿಜಾಪುರ ಕಾಲನಿ ನಿವಾಸಿ ಸಮೀರ್ ಎಂಬಾತ ಅಪ್ರಾಪ್ತ ಯುವತಿಯ

ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 20 ವರ್ಷ ಜೈಲು Read More »

ಶಿವ ರುದ್ರತಾಂಡವದ ಫೋಟೊ ಅಪ್‌ಲೋಡ್‌ ಮಾಡಿದ ಧರ್ಮಸ್ಥಳ ದೇಗುಲ

ಅಪಪ್ರಚಾರ ಮಾಡಿದವರಿಗೆ ಧರ್ಮವೇ ಗೆಲ್ಲುತ್ತದೆ ಎಂಬ ಸಂದೇಶ ಮಂಗಳೂರು: ನೂರಾರು ಶವ ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ತಲೆಬುರುಡೆ ಸಮೇತ ಪೊಲೀಸರ ಬಳಿ ಬಂದಿದ್ದ ಮುಸುಕುಧಾರಿ ಚಿನ್ನಯ್ಯ ಎಂಬಾತನ ಬಂಧನವಾಗಿ ಬುರುಡೆ ಹಿಂದಿನ ಮುಸುಕು ಒಂದೊಂದಾಗಿ ಸರಿಯಲು ತೊಡಗಿದಂತೆ ಧರ್ಮಸ್ಥಳ ದೇವಸ್ಥಾನದ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಶಿವ ರುದ್ರತಾಂಡವ ಮಾಡುತ್ತಿರುವ ಫೋಟೊ ಒಂದನ್ನು ಅಪ್ಲೋಡ್‌ ಮಾಡಿ ಕೊನೆಯ ಗೆಲುವು ಎಂದಿದ್ದರೂ ಧರ್ಮಕ್ಕೆ ಎನ್ನುವುದನ್ನು ಸೂಚಿಸಲಾಗಿದೆ. ಧರ್ಮ ವಿಜಯದ ಸಂಕೇತವಾಗಿ ಧರ್ಮಸ್ಥಳ ದೇವಸ್ಥಾನದ ಹಿಂದೆ ಶಿವ ರುದ್ರತಾಂಡವದ ಫೋಟೊ

ಶಿವ ರುದ್ರತಾಂಡವದ ಫೋಟೊ ಅಪ್‌ಲೋಡ್‌ ಮಾಡಿದ ಧರ್ಮಸ್ಥಳ ದೇಗುಲ Read More »

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂತಿದ್ದಾಗಿ ಹೇಳಿದ ಅನಾಮಿಕ ದೂರುದಾರ ಮಾಸ್ಕ್‌ಮ್ಯಾನ್ ಯಾರು ಎನ್ನುವ ಸತ್ಯ ಬಯಲಾಗಿದ್ದು, ಇದು ಧರ್ಮಸ್ಥಳದ ಅಭಿಮಾನಿಗಳಿಗೆ ಸಂತಸ ನೀಡಿದೆ. ಮುಸುಕುಧಾರಿಯ ಹೆಸರು ಚೆನ್ನಯ್ಯ ಯಾನೆ ಚೆನ್ನನನ್ನು ‌ಸುಳ್ಳು ದೂರು ನೀಡಿದ ಆರೋಪ ಮತ್ತು ಮೊದಲ ಬುರುಡೆಯನ್ನು ‌ಎಲ್ಲಿಂದ ತಂದ ಎನ್ನುವ ಮಾಹಿತಿ ನೀಡದ ಆರೋಪದಡಿ SIT ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತ ಕಟ್ಟಿದ ಬುರುಡೆ ಕಥೆ, ನೂರಾರು ಹೆಣಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣ ಇಡೀ ದೇಶವನ್ನೇ ಧರ್ಮಸ್ಥಳದತ್ತ ‌ತಿರುಗುವಂತೆ ಮಾಡಿತ್ತು. ಅಲ್ಲದೆ ಈ ವರೆಗೆ

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ Read More »

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ

ಆರೋಗ್ಯ ಸರಿಯಿಲ್ಲ, ರಕ್ಷಣೆ ಕೊಡಿ ಎಂದು ಮೊರೆಯಿಟ್ಟಿದ್ದ ಸುಜಾತ ಭಟ್‌ ಬೆಂಗಳೂರು: ನಿನ್ನೆಯಿಂದೀಚೆಗೆ ಗಳಿಗೆಗೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಸುಜಾತ ಭಟ್‌ಗೆ ಪೊಲೀಸ್‌ ರಕ್ಷಣೆ ನೀಡಲಾಗಿದೆ. ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಸುಜಾತ ಭಟ್‌ ಇರುವ ಮನೆಗೆ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸುಜಾತ ಭಟ್ ಮನವಿ ಹಿನ್ನೆಲೆಯಲ್ಲಿ ಬೆಂಗಳೂರಿನ

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ Read More »

ಎಸ್‌ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ

ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು ಧರ್ಮಸ್ಥಳ: ಇಷ್ಟರ ತನಕ ಮುಸುಕು ಹಾಕಿ ಎಸ್‌ಐಟಿ ಎದುರು ಹಾಜರಾಗುತ್ತಿದ್ದ ವ್ಯಕ್ತಿಯನ್ನು ಇದೇ ಮೊದಲ ಸಲ ಅಧಿಕೃತವಾಗಿ ಗುರುತಿಸಲಾಗಿದ್ದು, ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದೆ. ಎಸ್‌ಐಟಿ ವಿಚಾರಣೆ ವೇಳೆ ಅವನು ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿದ ಬಳಿಕ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ

ಎಸ್‌ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ Read More »

ನಾಳೆ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ಸೂಚನೆ

ಬಳ್ಳಾರಿಯಲ್ಲಿರುವ ಮನೆಗೆ ನೋಟಿಸ್‌ ಅಂಟಿಸಿ ಬಂದ ಪೊಲೀಸರು ಧರ್ಮಸ್ಥಳ : ಧರ್ಮಸ್ಥಳ ಕೇತ್ರದ ಕುರಿತು ಅಪಪ್ರಚಾರ ಮಾಡಿರುವ ಕುರಿತು ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ನ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಳ್ಳಾರಿಯ ಬಂಡಿಹಟ್ಟಿ ಏರಿಯಾದಲ್ಲಿರುವ ಸಮೀರ್‌ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ಭಾನುವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನಿನ್ನೆ ಸಂಜೆಯೇ ಧರ್ಮಸ್ಥಳ ಠಾಣೆ ಪೊಲೀಸರು ಮನೆಗೆ ನೋಟಿಸ್‌

ನಾಳೆ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ಸೂಚನೆ Read More »

error: Content is protected !!
Scroll to Top