ಅಪರಾಧ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ: ಆರೋಪಿ ವಿರುದ್ಧ ದೂರು ದಾಖಲು

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿ ಮಾಡಿ, ಹಲ್ಲೆ ನಡೆಸಿದ ಆರೋಪಿಯ ಮೇಲೆ ಪ್ರಕರಣ ದಾಖಲಾಗಿದೆ. ಗಾಯಾಳು ಪೊಲೀಸ್ ಪ್ರವೀಣ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎ. 18 ರಂದು ಸಂಚಾರ ಪೂರ್ವ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್, ಹಲೇಷಾ, ಚಂಪಾ ಎಂಬವರು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್ ಸವಾರನೊಬ್ಬ ಮಹಿಳೆಯೊಬ್ಬಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದು, ವಾಹನವನ್ನು ಬಿಕರ್ನಕಟ್ಟೆಗೆ ಹೋಗುವ ಫ್ರೀ ಲೆಫ್ಟ್‌ನಲ್ಲಿ ನಿಲ್ಲಿಸಿದ್ದಾನೆ. ಇದರಿಂದ ಇತರ […]

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ: ಆರೋಪಿ ವಿರುದ್ಧ ದೂರು ದಾಖಲು Read More »

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಗೃಹಣಿಯೊಬ್ಬಳು ವರದಕ್ಷಿಣೆಯ ಕುರುಕುಳದಿಂದ ಬೇಸತ್ತು, ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ(28) ಎಂಬವರೇ ಮೃತ ದುರ್ದೈವಿ. ಶ್ರೀನಿಧಿ ಅವರು ಸಂತೋಷ್ ಜೊತೆಗೆ 2021 ರಲ್ಲಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಸಹ ಇವರಿಗಿದ್ದಾರೆ. ಗಂಡ ಮತ್ತು ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ, ಕಿರುಕುಳದಿಂದ ಬೇಸತ್ತು ಶ್ರೀನಿಧಿ ಅವರು ಕಿಟಕಿಗೆ ‌ಶಾಲಿನಿಂದ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಶ್ರೀನಿಧಿ ಅವರು ತವರು

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು Read More »

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ

ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿದ್ದ ಆರೋಪಿಯನ್ನು ನಾಯಕನಹಟ್ಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಳ್ಳಕೆರೆ ತಾಲೂಕಿನ ಗಿಂತ ಕೊಲಮ್ಮನಹಳ್ಳಿಯ ಪಾಲಯ್ಯ ಜಿ. ಎಂದು ಗುರುತಿಸಲಾಗಿದೆ. ಪಾಲಯ್ಯ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಆರೋಪಿ ನೆಟ್ಟಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ ಸುಮಾರು 187 ಕೆಜಿ ಸೊಪ್ಪನ್ನು ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ Read More »

ಕಾಂಗ್ರೆಸ್‌ ಶಾಸಕನ ಮನೆ ಬಾಗಿಲಿಗೆ ಬಂದ ಬಿಟ್‌ ಕಾಯಿನ್‌ ಹಗರಣದ ತನಿಖೆ

ನಲಪಾಡ್‌ ನಡೆಸಿದ ಕೋಟಿಗಟ್ಟಲೆ ವ್ಯವಹಾರದ ಮೇಲೆ ಅನುಮಾನ ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಮತ್ತು ಅವರ ಮಗ ಮೊಹಮ್ಮದ್‌ ನಲಪಾಡ್‌ ಮನೆ ಮತ್ತು ಕಚೇರಿಗಳ ಮೆಲೆ ದಾಳಿ ನಡೆಸುವುದರೊಂದಿಗೆ ಕರ್ನಾಟಕದಲ್ಲಿ ಕೆಲ ವರ್ಷಗಳ ಹಿಂದೆ ಭಾರಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಹಗರಣದ ತನಿಖೆ ಈಗ ಕಾಂಗ್ರೆಸ್ ಎನ್.ಎ. ಹ್ಯಾರಿಸ್ ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು

ಕಾಂಗ್ರೆಸ್‌ ಶಾಸಕನ ಮನೆ ಬಾಗಿಲಿಗೆ ಬಂದ ಬಿಟ್‌ ಕಾಯಿನ್‌ ಹಗರಣದ ತನಿಖೆ Read More »

ಟಿಸಿಎಸ್‌ ಲವ್‌ ಜಿಹಾದ್‌ ಮಾಸ್ಟರ್‌ ಮೈಂಡ್‌ ನಿದಾ ಖಾನ್‌ಗಿಲ್ಲ ಜಾಮೀನು

ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಕೋರ್ಟ್‌ ನಾಸಿಕ್ : ನಾಸಿಕ್‌ನಲ್ಲಿರುವ ಟಿಸಿಎಸ್‌ನಲ್ಲಿ ನಡೆದಿರುವ ಇಲ್‌ ಜಿಹಾದ್‌ ಪ್ರಕರಣದ ಸೂತ್ರಧಾರಿ ಎನ್ನಲಾಗಿರುವ ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವಳ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ

ಟಿಸಿಎಸ್‌ ಲವ್‌ ಜಿಹಾದ್‌ ಮಾಸ್ಟರ್‌ ಮೈಂಡ್‌ ನಿದಾ ಖಾನ್‌ಗಿಲ್ಲ ಜಾಮೀನು Read More »

ಮನೆಯಂಗಳದಲ್ಲಿ ‌ನಿಲ್ಲಿಸಿದ್ದ ಸ್ಕೂಟಿಗೆ ಕನ್ನ ಹಾಕಿದ ಕಳ್ಳ

ಕಾರ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ‌ಸ್ಕೂಟಿಯನ್ನು ಮನೆಯ ಬಾಗಿಲು ಒಡೆದು ಒಳನುಗ್ಗಿ, ಸ್ಕೂಟಿಯ ಕೀ ತೆಗೆದುಕೊಂಡು ಕಳ್ಳನೊಬ್ಬ ಎಗರಿಸಿಕೊಂಡು ಹೋದ ಘಟನೆ ಕಸಬಾ ಗ್ರಾಮದ ಆನಂದನಗರದಲ್ಲಿ ‌ನಡೆದಿದೆ. ಕರಿಯಕಲ್ಲು ‌ನಿವಾಸಿ ಹರೀಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ ಅವರು ಉಜಿರೆಯಲ್ಲಿ ಕೆಲಸ ಮಾಡುತ್ತಿದ್ದು ಎ. 16 ರಂದು ತೆರಳಿದ್ದರು. ಎ. 19 ರಂದು ಹರೀಶ್ ಅವರಿಗೆ ಸಂಬಂಧಿಕರು ಕರೆ ಮಾಡಿ ಮನೆಯ ಬಾಗಿಲು ಒಡೆದಿರುವ ಬಗ್ಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಕಳ್ಳತನ

ಮನೆಯಂಗಳದಲ್ಲಿ ‌ನಿಲ್ಲಿಸಿದ್ದ ಸ್ಕೂಟಿಗೆ ಕನ್ನ ಹಾಕಿದ ಕಳ್ಳ Read More »

ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ

ಬೀದರ್: ಸೂರ್ಯನ ತಾಪಕ್ಕೆ ಕರ್ನಾಟಕ ಕೊತಕೊತ ಕುದಿಯುತ್ತಿದ್ದು, ಬಿಸಿಲಿನ ಹೊಡೆತಕ್ಕೆ ಬೀದರ್‌ನಲ್ಲಿ ಓರ್ವ ವ್ಯಕ್ತಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹೀಟ್ ಸ್ಟ್ರೋಕ್‌ಗೆ ಬಲಿಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಮೊಹಮದ್ ಸಮೀರ್ ಲಯಿಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಮಲನಗರದ ಡಿಗ್ಗಿ ‌ನಗರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ -50 ರಲ್ಲಿ ಈ ಘಟನೆ ನಡೆದಿದೆ. ಕಮಲಾ ನಗರದ ಸಲೂನ್ ಒಂದರಲ್ಲಿ ಲಯೀಕ್ ಕೆಲಸ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಸಮೀಪದ ಮೆಕ್ಯಾನಿಕ್ ಅಂಗಡಿ ಒಂದರ ಬಳಿ ಬಂದು ನೀರು

ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ Read More »

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ

ಅಮೆರಿಕದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ಟೆಹ್ರಾನ್‌ : ಸಂಧಾನಕ್ಕೆ ಬರುವುದಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ ಅಮೆರಿಕ ಸೇನೆ ಇರಾನ್ ಧ್ವಜ ಹೊಂದಿದ್ದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಶಾಂತಿ ಪ್ರಕ್ರಿಯೆಯನ್ನು ಸಂಪೂರ್ಣ ಹದಗೆಡಿಸಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ Read More »

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

error: Content is protected !!
Scroll to Top