ಅಪರಾಧ

ಧರ್ಮಸ್ಥಳ ಪ್ರಕರಣ : ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿದ ಎಸ್‌ಐಟಿ

ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ಇಂದು ಬೆಳಗ್ಗೆ ಬಂಧಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಮುಸುಕುಧಾರಿ ವ್ಯಕ್ತಿಯ ನಂಬಿ ಸರ್ಕಾರ ವಿಶೇಷ ತನಿಖಾ ತಂಡ ರಕ್ಷಿಸಿತ್ತು. ಈ ತಂಡ ಆತ ತೋರಿಸಿದ 17 ಜಾಗಗಳಲ್ಲಿ ಅಗೆದರೂ ಶವದ ಕುರುಹುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಡೀ ಮುಸುಕುಧಾರಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಸ್ವತಹ ವಿಚಾರಣೆ ನಡೆಸಿದ್ದಾರೆ . ಬಳಿಕ ಎಸ್‌ಐಟಿ ಹೆಚ್ಚಿನ […]

ಧರ್ಮಸ್ಥಳ ಪ್ರಕರಣ : ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿದ ಎಸ್‌ಐಟಿ Read More »

ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ

ಲೋಕಾಯುಕ್ತ ದಾಳಿಯಿಂದ ಬಯಲಾದ ಹಾಸ್ಟೆಲ್‌ನ ಅವ್ಯವಸ್ಥೆ ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡ ಶುಕ್ರವಾರ ದಾಳಿ ನಡೆಸಿದಾಗ ಅನೇಕ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ವಸತಿಗೃಹದ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಇರಲಿಲ್ಲ. ಧವಸ ಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿವೆ. ಸ್ಟಾಕ್ ರಿಜಿಸ್ಟ್ರರ್ ಕೂಡ

ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ Read More »

ಮಗಳೇ ಇಲ್ಲ ಎಂದು ಹೇಳಿ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದ ಸುಜಾತ ಭಟ್‌

ಕ್ಷಣಕ್ಕೊಂದು ಹೇಳಿಕೆ ನೀಡಿ ಪ್ರಕರಣವನ್ನು ಗೊಂದಲಮಯಗೊಳಿಸಿದ ವೃದ್ಧೆ ಮಂಗಳೂರು: ನನಗೆ ಅನನ್ಯಾ ಭಟ್‌ ಎಂಬ ಮಗಳೇ ಇಲ್ಲ. ನನಗೆ ಸುಳ್ಳು ದೂರು ನೀಡಲು ಹೇಳಿದ್ದರು. ಅವರು ಹೇಳಿದಂತೆ ದೂರು ನೀಡಿದ್ದೇನೆ ಎಂದು ನಿನ್ನೆ ಹೇಳಿದ್ದ ಸುಜಾತ ಭಟ್‌ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದು ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ ಎಂದು ಹೇಳಿ ಇಡೀ ಪ್ರಕರಣವನ್ನು ಗೊಂದಲಮಯಗೊಳಿಸಿದ್ದಾರೆ. ಶುಕ್ರವಾರ ಖಾಸಗಿ ವಾಹಿನಿಯೊಂದರ ಜೊತೆ ಕಾರಿನಲ್ಲಿ ಕುಳಿತು ಮಾತನಾಡಿದ್ದ ನಾನು ಹೇಳಿದ್ದೆಲ್ಲ ಕಟ್ಟುಕಥೆ. ಗಿರೀಶ್‌ ಮಟ್ಟಣ್ಣ, ಜಯಂಟ್‌

ಮಗಳೇ ಇಲ್ಲ ಎಂದು ಹೇಳಿ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದ ಸುಜಾತ ಭಟ್‌ Read More »

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು

ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ನಿಂದನೆ ಪ್ರಕರಣದಲ್ಲಿ ಸೆರೆಯಾಗಿರುವ ತಿಮರೋಡಿ ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ತಿಮರೋಡಿ ಹಿರಿಯಡ್ಕ ಸಬ್ ಜೈಲಿನಲ್ಲಿದ್ದಾರೆ. ಬಂಧಿಸುವ ವೇಳೆ ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲಿ ಹೈಡ್ರಾಮಾ ನಡೆದಿತ್ತು. ಪೊಲೀಸರ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು Read More »

ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ

ಮರ ಏರಿ ಆವರಣದೊಳಗೆ ಜಿಗಿದು ಒಳ ನುಗ್ಗಿದ್ದ ಆಗಂತುಕನ ತೀವ್ರ ವಿಚಾರಣೆ ನವದೆಹಲಿ : ಹೊಸ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6.30ಕ್ಕೆ ನಡೆದಿದ್ದು, ಆತ ರೈಲು ಭವನ ಮೂಲಕವಾಗಿ ಗರುಡ ದ್ವಾರದ ತನಕ ತಲುಪಿದ್ದಾನೆ. ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪ್ರಶ್ನಿಸಿ ಬಳಿಕ ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು

ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ Read More »

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌?

ಆಡಿಯೋ ಹರಿಬಿಟ್ಟು ಪ್ರಕರಣ ಬಗ್ಗೆ ಮಾತನಾಡಿದ ವೃದ್ಧೆ ಧರ್ಮಸ್ಥಳ: ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಹೇಳಿಕೊಂಡಿದ್ದ ಸುಜಾತ ಭಟ್‌ ಈಗ ದಿಢೀರ್‌ ಎಂದು ಕೇಸನ್ನು ವಾಪಸು ಪಡೆದುಕೊಳ್ಳುವುದಾಗಿ ಹೇಳಿದ್ದು, ಅವರ ಬಗ್ಗೆ ಇರುವ ಅನುಮಾನ ಇನ್ನಷ್ಟು ಹೆಚ್ಚವಾಗುವಂತೆ ಮಾಡಿದೆ. ಇತ್ತೀಚೆಗೆ ಸುಜಾತಾ ಭಟ್ ತಮ್ಮ ಮಗಳೆಂದು ಫೋಟೋವೊಂದನ್ನು​ ತೋರಿಸಿದ್ದರು. ಆದರೆ ಅದು ಅನನ್ಯಾ ಭಟ್ ಅಲ್ಲ, ಬದಲಿಗೆ ವಾಸಂತಿ ಎಂಬ ಸತ್ಯ ಹೊರಬಂದಿತ್ತು. ಹೀಗಿರುವಾಗ ಕೇಸ್ ವಾಪಸ್ ಪಡೆಯುವುದಾಗಿ ಸುಜಾತಾ ಭಟ್

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌? Read More »

ಬಂಟ್ವಾಳ : ಬಾಲಕನಿಗೆ ಲೈಂಗಿಕ ಕಿರುಕುಳ

ತಲೆಮರೆಸಿಕೊಂಡ ಆರೋಪಿಗೆ ಶೋಧ ಬಂಟ್ವಾಳ : ಅಪ್ರಾಪ್ತ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ. ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಅಬ್ದುಲ್ಲಾ ಯಾನೆ ಮೋನು ಯಾನೆ ಪಿಲಿಮೋನು ಎಂಬಾತ ಆರೋಪಿಯಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ. ಬಾಲಕ ಕೂದಲು ಕಟ್ ಮಾಡುವುದಕ್ಕಾಗಿ ಸಲೂನ್‌ಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಪಿಲಿ ಮೋನು ಬಾಲಕನನ್ನು ತನ್ನ ಸ್ಕೂಟರ್‌ನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ

ಬಂಟ್ವಾಳ : ಬಾಲಕನಿಗೆ ಲೈಂಗಿಕ ಕಿರುಕುಳ Read More »

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ!

ಕಿರುಕುಳ ಆರೋಪ ಹೊತ್ತು ರಾಜೀನಾಮೆ ನೀಡಿರುವ ಕಾಂಗ್ರೆಸ್‌ ಯುವ ನಾಯಕನ ಇನ್ನಷ್ಟು ಕರ್ಮಕಾಂಡಗಳು ಬಯಲು ತಿರುವನಂತಪುರಂ: ಮಲಯಾಳಂ ನಟಿ ರಿನಿ ಆನ್ ಜಾರ್ಜ್ ಅವರಿಗೆ ಕಿರುಕುಳ ನೀಡಿದ ಆರೋಪ ಹೊತ್ತು ಕೇರಳ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಪದವಿಗೆ ಗುರುವಾರ ರಾಜೀನಾಮೆ ನೀಡಿರುವ ಶಾಸಕ ರಾಹುಲ್‌ ಮಮಕೂಟತ್ತಿಲ್‌ ತೃತೀಯ ಲಿಂಗಿಗೂ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದೆ. ನಟಿ ರಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ ಬಳಿಕ ಇನ್ನೂ ಹಲವು ಮಹಿಳೆಯರು ರಾಹುಲ್‌ ಮಮಕೂಟತ್ತಿಲ್‌ನ ಕಿರುಕುಳದ ಬಗ್ಗೆ

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ! Read More »

ದಿನಕ್ಕೊಂದು ಅನೂಹ್ಯ ತಿರುವು ಪಡೆಯುತ್ತಿರುವ ಧರ್ಮಸ್ಥಳ ಪ್ರಕರಣ

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿ – ಅಪಪ್ರಚಾರದ ವಿರುದ್ಧ ದೂರು ಧರ್ಮಸ್ಥಳ : ಧರ್ಮಸ್ಥಳದ ಶವ ಹೂತ ಪ್ರಕರಣ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ದಿನಕ್ಕೊಬ್ಬರಂತೆ ಎಂಟ್ರಿಯಾಗುತ್ತಿದ್ದು, ಎಸ್‌ಐಟಿ ಅಧಿಕಾರಿಗಳೇ ಗೊಂದಲಕ್ಕೊಳಗಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳಿಗೆ ಬಹು ಆಯಾಮದಲ್ಲಿ ತನಿಖೆ ನಡೆಸಲು ತನಿಖಾ ತಂಡ ಪ್ರಣವ್‌ ಮೊಹಾಂತಿ ಸೂಚಿಸಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಈ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ವಿಡಿಯೋ ಹಾಕಿದ್ದಾರೆ ಎಂದು ನಾಲ್ವರ

ದಿನಕ್ಕೊಂದು ಅನೂಹ್ಯ ತಿರುವು ಪಡೆಯುತ್ತಿರುವ ಧರ್ಮಸ್ಥಳ ಪ್ರಕರಣ Read More »

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ Read More »

error: Content is protected !!
Scroll to Top