ಅಪರಾಧ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ತುಂಬೆ ಗ್ರಾಮದ ಪರ್ಲಕ್ಕೆಯ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ತೇಜಸ್ ಮೊಡಂಕಾಪುವಿನ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ. ನಿನ್ನೆ ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ನೌಕಯಲ್ಲಿದ್ದು, ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ತೇಜಸ್‌ ಎಂದಿನಂತೆ ಸಂಜೆ ಮನೆಗೆ ಬಂದು ನೇಣು ಹಾಕಿಕೊಂಡಿದ್ದ. ತಂದೆ […]

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ

ಮಂಗಳೂರು: ಉಳ್ಳಾಲದಿಂದ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಲು ಪ್ರಮುಖ ಆರೋಪಿಗೆ ದಂಪತಿ ನೆರವಾಗಿದ್ದರು ಎನ್ನಲಾಗಿದೆ. 16ರ ಹರೆಯದ ಮಗಳು ಮನೆಯಿಂದ ಹೊರ ಹೋದವಳು ನಂತರ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಿರುವುದಾಗಿ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನು ಅಪಹರಿಸಿದ ಆರೋಪಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್

ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ Read More »

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ

ಭೀಕರ ಕೃತ್ಯ ಎಸಗಿದ ಬಳಿಕ ಗ್ರಾಮಕ್ಕೆ ಗ್ರಾಮವೇ ಪಲಾಯನ ಪಾಟ್ನಾ: ಮಾಟ ಮಂತ್ರ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರು ಸದಸ್ಯರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಪೂರ್ನಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ಪ್ರದೇಶದ ಟೆಟ್ಗಾಮಾ ಎಂಬ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಭೀಕರ ಕೊಲೆ ಸುತ್ತಮುತ್ತಲೂ ಆಘಾತ ಸೃಷ್ಟಿಸಿದೆ. ಕೃತ್ಯ ಎಸಗಿದ ಎಲ್ಲ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಈ ಭಯಾನಕ ಘಟನೆಯು 4 ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದೆ.

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ Read More »

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿದ ಯುವಕನೊಬ್ಬ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ‌ನಡೆದಿದೆ. ಗ್ಯಾರೇಜಿನಲ್ಲಿ ಕೆಲಸ‌ ಮಾಡುತ್ತಿದ್ದ ಕೊಡ್ಮಣ್ ನಿವಾಸಿ ಸುಧೀರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಹಲ್ಲೆಗೊಳಗಾದ ಯುವತಿ ತುಂಬೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ. ಈ ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್?

ಬೆಂಗಳೂರು: ಡ್ರಗ್ಸ್ ದಂಧೆಗೆ, ಸೇವನೆಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗ ಪೊಲೀಸರು ರೆಸಾರ್ಟ್, ಹೋಂಸ್ಟೇ, ಹೊಟೇಲ್ ಸೇರಿದಂತೆ ಇನ್ನಿತರ ಪಾರ್ಟಿ ಮಾಡುವ ಸ್ಥಳಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್‌ಗಳು, ಹೊಟೇಲ್‌ಗಳು, ಹೋಮ್‌ಸ್ಟೇ‌ಗಳಲ್ಲಿ ಪಾರ್ಟಿಗಾಗಿ ಬುಕ್ ಮಾಡುವ ಕೆಲ ಆಯೋಜಕರು, ಅಲ್ಲಿ ಮಾದಕ ದ್ರವ್ಯಗಳಿಗಾಗಿಯೂ ವ್ಯವಸ್ಥೆ ಮಾಡುತ್ತಾರೆ‌. ಡ್ರಗ್ಸ್ ಸೇವನೆಯಂತಹ ಸಮಾಜ ಘಾತುಕ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆ ಪಾರ್ಟಿಗಳಿಗೆ ತಮ್ಮ ಕಟ್ಟಡಗಳು, ಸ್ಥಳಗಳನ್ನು ಬಿಟ್ಟು ಕೊಡುವವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಹೋಂಸ್ಟೇ ನಡೆಸುವವರು

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್? Read More »

ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಸೂರಿನಲ್ಲಿ ಮಂಗಳೂರು ನಗರದ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಧ್ರುವ ಡಿ. ಶೆಟ್ಟಿ ಎಂದು ಗುರುತಿಸಲಾಗಿದ್ದು, ಈತ ಹಾಸನದ ಸಕಲೇಶಪುರದವನು ಎಂದು ತಿಳಿದು ಬಂದಿದೆ. ಈತನ ಬಗ್ಗೆ ಮಾದಕ ವಸ್ತು ಪೂರೈಕೆ ಆರೋಪದಲ್ಲಿ ಜುಲೈ 2 ರಂದು ಪ್ರಕರಣ ದಾಖಲಾಗಿತ್ತು. ಈಗಾಗಲೇ ಐವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಧಿಸಲಾಗಿದ್ದು, ಇವರೆಲ್ಲರಿಗೂ ಧ್ರುವ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು ಎಂಬುದಾಗಿ ಮೂಲಗಳು ತಿಳಿಸಿವೆ. ಬಂಧಿತನಿಂದ ಮೊಬೈಲ್ ಫೋನ್,

ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಯುವಕ-ಯುವತಿಯ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್‍ ಲೋಡ್‍ | ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಇಲ್ಲಿನ ಬಿರುಮಲೆ ಬೆಟ್ಟದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಬಂಧಿತ ವ್ಯಕ್ತಿಗಳು. ಯುವಕರು ಬಿರುಮಲೆ ಗುಡ್ಡೆಯಲ್ಲಿ  ಯುವಕ ಹಾಗೂ ಯುವತಿ ಇರುವಾಗ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ತಿಳಿದು ಬಂದಿದೆ. ಈ

ಯುವಕ-ಯುವತಿಯ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್‍ ಲೋಡ್‍ | ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಕೋಟ್ಯಾಂತರ ವಂಚಿಸಿದ ಕುರಿತು ಮಂಗಳೂರು ಪೂರ್ವ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hiruglim Elegant Overseas International (Opc) Private Limited ಹೆಸರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 259 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ Read More »

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ

ಕೌಟುಂಬಿಕ ಕಲಹದಿಂದ ಬೇಸತ್ತು ಡೆತ್‌ನೋಟ್‌ ಬರೆದು ಸಾವಿಗೆ ಶರಣಾದ ಪಿಎಸ್‌ಐ ಬೆಂಗಳೂರು: ನಿವೃತ್ತಿಯ ಅಂಚಿನಲ್ಲಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌ ಒಬ್ಬರ ಮೃತದೇಹ ತುಮಕೂರಿನ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ದಾವಣಗೆರೆ ಪೊಲೀಸ್ ಠಾಣೆಯ ಸಬ್‌ಇನ್ಸ್​ ಪೆಕ್ಟರ್ ನಾಗರಾಜಪ್ಪ (58) ಮೃತಪಟ್ಟವರು. ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. 4 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ Read More »

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ

ಪತಿಯ ಹೆಸರಿನಲ್ಲಿ ಸಿಮ್‌ ಖರೀದಿಸಿ ವಂಚನೆ ಎಸಗಲಾಗಿದೆ ಎಂದು ಬೆದರಿಸಿದ್ದ ವಂಚಕರು ಮಂಗಳೂರು : ಮಂಗಳೂರಿನ ಮಹಿಳೆಯೊಬ್ಬರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 3.16 ಕೋಟಿ ರೂ. ಖಾತೆಯಿಂದ ಎಗರಿಸಿದ ಕುರಿತು ದೂರು ದಾಖಲಾಗಿದೆ. ಮಹಿಳೆಯ ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಮತ್ತು ಸಂಶಯಾಸ್ಪದ ಲಿಂಕ್ ಕಳುಹಿಸಲಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು 3,16,52,142 ರೂ. ಲೂಟಿ ಮಾಡಿದ್ದಾರೆ. ಜೂನ್ 5ರಂದು ಮುಂಬೈ ಸಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನುಶರ್ಮ

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ Read More »

error: Content is protected !!
Scroll to Top