ಅಪರಾಧ

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ

ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಅಮಾನವೀಯ ಕೃತ್ಯ ಕಾಸರಗೋಡು: ಮಗನೇ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಜೀವಂತ ದಹಿಸಿ ಕೋಮದ ಅಮಾನವೀಯ ಘಟನೆ ಮಂಜೇಶ್ವರ ಸಮೀಪ ವರ್ಕಾಡಿ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ವರ್ಕಾಡಿ ನಲ್ಲಂಗಿಯ ದಿ.ಲೂಯಿಸ್ ಮೊಂತೆರೋ ಎಂಬವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ಎಸಗಿದ್ದಾನೆ. ಘಟನೆಯಲ್ಲಿ ನೆರೆಮನೆಯ ಲೋಲಿಟಾ (30) ಎಂಬವರು ಗಂಭೀರ ಸುಟ್ಟ ಗಾಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿದ್ದು, ಬಳಿಕ ತಾಯಿಗೆ ಹುಷಾರಿಲ್ಲ […]

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ Read More »

ಆಪರೇಷನ್‌ ಸಿಂದೂರ : ಇನ್ನೋರ್ವ ಪಾಕ್‌ ಗೂಢಚಾರ ಸೆರೆ

ನೌಕಾ ನೆಲೆಯ ಮಾಹಿತಿ ರವಾನಿಸಿದ್ದ ಪಾಕ್‌ ಏಜೆಂಟ್‌ ನವದೆಹಲಿ: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ದೆಹಲಿಯ ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗ ಬಂಧಿಸಿದೆ. ಹರಿಯಾಣದ ರೇವಾರಿಯದ ಪುನ್ಸಿಕಾ ನಿವಾಸಿ ವಿಶಾಲ್ ಯಾದವ್ ಸೆರೆಯಾದ ಪಾಕ್‌ ಏಜೆಂಟ್‌. ಈತ ನೌಕಾಪಡೆ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ಡಾಕ್‌ಯಾರ್ಡ್ ನಿರ್ದೇಶನಾಲಯದಲ್ಲಿ ಕೆಲಸ ಮಾಡುತ್ತಿದ್ದ ವಿಶಾಲ್‌ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾ ಶರ್ಮಾ ಎಂಬಾಕೆಯ ಜೊತೆ ಸಂಪರ್ಕದಲ್ಲಿದ್ದ.

ಆಪರೇಷನ್‌ ಸಿಂದೂರ : ಇನ್ನೋರ್ವ ಪಾಕ್‌ ಗೂಢಚಾರ ಸೆರೆ Read More »

ಜೆಲ್ಲಿ ಚಾಕೊಲೇಟ್‌ ರೂಪದಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ

ಬೆಂಗಳೂರು : ಈಗ ಹೊಸ ಮಾದರಿಯ ಜೆಲ್ಲಿ ಗಾಂಜಾ ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳೇ ಇದರ ಗ್ರಾಹಕರು. ಈ ಬಗ್ಗೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಜೆಲ್ಲಿ ಗಾಂಜಾ ಗ್ಯಾಂಗನ್ನು ಬಂಧಿಸಿದ್ದಾರೆ. ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಬ್ಯಾಟರಾಯನಪುರ ಇನ್ಸ್‌ಪೆಕ್ಟರ್ ಕೆ.ಜೀವನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ಮಾಡಿದ್ದು, ಒಟ್ಟು

ಜೆಲ್ಲಿ ಚಾಕೊಲೇಟ್‌ ರೂಪದಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ Read More »

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ : ಮಹಿಳೆ ಸಹಿತ ಏಳು ಮಂದಿ ಸೆರೆ

ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರಿಂದ ಹಣ ವಸೂಲಿ ದಂಧೆ ಮೈಸೂರು: ಜಾನುವಾರು ರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆ ಸೇರಿ ಏಳು ಮಂದಿಯನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರು ಎನ್ನಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಸಹಿತ ಏಳು ಮಂದಿಯನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಈ ಘಟನೆ ನಡೆದಿದೆ. ಹಿಂದೂ ಸಂಘಟನೆ ಹೆಸರಿನಲ್ಲಿ

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ : ಮಹಿಳೆ ಸಹಿತ ಏಳು ಮಂದಿ ಸೆರೆ Read More »

ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿ : 12 ಮಂದಿ ಸಾವು

ಮೆಕ್ಸಿಕೋ : ಮೆಕ್ಸಿಕನ್ ರಾಜ್ಯದ ಗುವಾನಾಜುವಾಟೊದ ಇರಾಪುವಾಟೊ ನಗರದಲ್ಲಿ ಬುಧವಾರ ರಾತ್ರಿ ಸಂಭ್ರಮಾಚರಣೆ ವೇಳೆ ಬಂದೂಕುಧಾರಿಗಳು ಗುಂಡು ಹಾರಿಸಿದಾಗ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಗೌರವಾರ್ಥ ಸ್ಥಳೀಯರು ನೃತ್ಯ ಮತ್ತು ಮದ್ಯಪಾನ ಮಾಡುತ್ತಿದ್ದಾಗ ಈ ದಾಳಿ ನಡೆದಿದೆ. ಆನ್‌ಲೈನ್‌ನಲ್ಲಿ ವೈರಲ್‌ ಆಗಿರುವ ವೀಡಿಯೊಗಳಲ್ಲಿ ಗುಂಡಿನ ದಾಳಿಯಿಂದ ಭಯಭೀತರಾದ ಜನ ಓಡಿಹೋಗುವುದನ್ನು ಹಾಗೂ ಶವಗಳನ್ನು ಕಾಣಬಹುದು. ಇರಾಪುವಾಟೊ ಅಧಿಕಾರಿ ರೊಡಾಲ್ಫೊ ಗ್ಮೆಜ್ ಸೆರ್ವಾಂಟೆಸ್ ಪತ್ರಿಕಾಗೋಷ್ಠಿಯಲ್ಲಿ ಸಾವಿನ ಸಂಖ್ಯೆ 12ಕ್ಕೆ

ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿ : 12 ಮಂದಿ ಸಾವು Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಯುವಕನ ವಿರುದ್ಧಪ್ರಕರಣ ದಾಖಲು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನಂತೆ ಬಪ್ಪಳಿಗೆ ನಿವಾಸಿ ಕೃಷ್ಣ ಎಂಬವರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೃಷ್ಣ ಹಾಗೂ ಯುವತಿಗೆ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ ಪರಸ್ಪರ ಪ್ರೀತಿಸುತ್ತಿದ್ದು 2024 ರ ಅಕ್ಟೋಬರ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ಬರ ಹೇಳಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಬಳಿಕ 2025 ಜನವರಿಯಲ್ಲಿ ಮನೆಗೆ ಬರಲು ಹೇಳಿ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಯುವಕನ ವಿರುದ್ಧಪ್ರಕರಣ ದಾಖಲು Read More »

ಕ್ರೈಸ್ತ ದಫನ ಭೂಮಿಯ ಸಮಾಧಿ ಹಾನಿಗೊಳಿಸಿದ ದುಷ್ಕರ್ಮಿಗಳು : ಪ್ರಕರಣ ದಾಖಲು

ಪುತ್ತೂರು: ಕ್ರೈಸ್ತ ದಫನ ಭೂಮಿಯ ಸಮಾಧಿಯೊಂದನ್ನು ದುಷ್ಕರ್ಮಿಗಳು ಒಡೆದು ಹಾನಿ ಮಾಡಿದ ಘಟನೆ ಜೂನ್‍ 14 ರಂದು ನಡೆದಿದ್ದು, ಈ ಕುರಿತು ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಆನೆಮಜಲು ಪರಿಸರದಲ್ಲಿ ಜೂನ್ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ರೈಸ್ತ ದಫನ ಭೂಮಿಯ ಸಮಾಧಿ ಹಾನಿಗೊಳಿಸಿದ ದುಷ್ಕರ್ಮಿಗಳು : ಪ್ರಕರಣ ದಾಖಲು Read More »

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ

ನವದೆಹಲಿ : ಮದುವೆಗೆ ಒಪ್ಪದ ಹಿನ್ನಲೆ ಅನ್ಯಕೋಮಿ ವ್ಯಕ್ತಿಯೋರ್ವ ಬುರ್ಖಾ ಧರಿಸಿಕೊಂಡು ಮನೆಗೆ ನುಗ್ಗಿ ಯುವತಿಯನ್ನು 5ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ. ನೇಹಾ ಮಹಡಿಯಿಂದ ಬಿದ್ದು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷದ ಹಿಂದೆ ಉತ್ತರ ಪ್ರದೇಶ ಮೂಲದ ತೌಫಿಕ್ ಎಂಬಾತನ ಪರಿಚಯವಾಗಿತ್ತು. ಅಲ್ಲದೇ ಆರೋಪಿ ತೌಫಿಕ್ ದೆಹಲಿಯ ಮಂಡೋಲಿಯಲ್ಲಿ ಕೆಲಸ ಮಾಡುತ್ತಿದ್ದ. ನೇಹಾ ಹಾಗೂ ತೌಫಿಕ್ ಆಗಾಗ ಭೇಟಿಯಾಗುತ್ತಿದ್ದರು, ಅಲ್ಲದೇ ತೌಫಿಕ್ ನನ್ನು ಅಣ್ಣ ಎಂದು ಕರೆಯುತ್ತಿದ್ದಳು ಅಷ್ಟೇ

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ Read More »

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ

ಮಂಗಳೂರು: ವಿವಿಧ ಆ್ಯಪ್‌ ಗಳ ಸಾಲಗಳಿಂದ ಬೇಸತ್ತು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್ ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ. ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ Read More »

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌

ಸಮರ ವಿರಾಮದ ಬೆನ್ನಿಗೆ ದೇಶದ್ರೋಹಿಗಳ ಬೇಟೆ; 700 ಮಂದಿ ಸೆರೆ ಟೆಹ್ರಾನ್‌ : ಸಮರ ವಿರಾಮ ಜಾರಿಗೆ ಬಂದ ಮರುದಿನವೇ ಇರಾನ್‌ ತನ್ನಲ್ಲಿರುವ ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ ಶುರುಮಾಡಿದ್ದು, ಇಸ್ರೇಲ್‌ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಮೂವರನ್ನು ನೇಣಿಗೇರಿಸಿದೆ. ಇಸ್ರೇಲ್‌ ಮತ್ತು ಇರಾನ್‌ ನಡುವೆ 12 ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಶಾಂತಿ ಮಾತುಕತೆಯ ಬಳಿಕ ನಿನ್ನೆ ಕೊನೆಗೊಂಡಿದೆ. ಇದರ ಬೆನ್ನಿಗೆ ಇರಾನ್‌ ಸರ್ಕಾರ ಇಸ್ರೇಲ್‌ಗೆ ನೆರವಾಗಿರುವವರ ಬೇಟೆಯಾಡಲು ಪ್ರಾರಂಭಿಸಿದೆ. ನಿನ್ನೆಯೇ ಇಸ್ರೇಲ್‌ನ ಬೇಹುಪಡೆ ಮೊಸಾದ್‌ಗೆ ನೆರವಾದ

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌ Read More »

error: Content is protected !!
Scroll to Top