ಅಪರಾಧ

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ

ಹನಿಟ್ರ್ಯಾಪ್ ಆರೋಪ ಸುಳ್ಳು ಎಂದ ಸೌಮ್ಯಾ ಶೆಟ್ಟಿ ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ತೇಜೋವಧೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ […]

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ Read More »

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ 10 ತಾಸು ದಿಗ್ಭಂಧನ ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏ.1ರಂದು ನಡೆದಿದ್ದ ಏಳು ನ್ಯಾಯಾಧೀಶರ ಘೇರಾವ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಚುನಾವಣಾ ಆಯೋಗ ಎನ್‌ಐಎಗೆ ವಹಿಸಿದೆ. ಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿ

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ Read More »

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಎಐ ವಿಡಿಯೋ ಮೂಲಕ ಧರ್ಮಸ್ಥಳದ ತೇಜೋವಧೆ ಮಾಡಿದ್ದ ಸಮೀರ್‌ ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಧರ್ಮಸ್ಥಳ

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಅಧಿಕಾರ ದುರುಪಯೋಪಡಿಸಿಕೊಂಡಿರುವುದಕ್ಕೆ ತೀಕ್ಷ್ಣ ತರಾಟೆ ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು.

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ Read More »

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಿರ್ದೇಶಕ ಹಾಗೂ ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ರಂಜಿತ್‌ ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ Read More »

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ Read More »

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಹ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇರಳ ಮೂಲದ ಕಾರ್ಮಿಕ ಜೋಸೆಫ್ ತೋಮಸ್ (69) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೊಸಂಗಡಿಯ ಶಾಜು.ಪಿ.ಟಿ ಎಂಬವರ ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು, ಮೃತದೇಹ ಮಾ. 30ರಂದು ಸಂಜೆಯ ವೇಳೆ ಶಾಜು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿದೆ.

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ Read More »

ಡ್ರಗ್ಸ್‌ ಸೇವಿಸಿ ಅಸಭ್ಯ ವರ್ತನೆ : ಓರ್ವ ಸೆರೆ

ಬಂಟ್ವಾಳ : ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ಎಂದು ಗುರುತಿಸಲಾಗಿದೆ. ಮಾರ್ಚ್‌ 30ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿಯವರಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು

ಡ್ರಗ್ಸ್‌ ಸೇವಿಸಿ ಅಸಭ್ಯ ವರ್ತನೆ : ಓರ್ವ ಸೆರೆ Read More »

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ

ಕೊಲೆ ಶಂಕೆ; ಉನ್ನತ ತನಿಖೆಗೆ ಆಗ್ರಹ ಮಂಗಳೂರು : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಯುವ ಉದ್ಯಮಿ ಸುದೀಪ್ ರೈ ಮದುವೆಯಾದ ಒಂದೇ ತಿಂಗಳಿಗೆ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವು ಪಡದುಕೊಂಡಿದೆ. ಪತ್ನಿ ಸೌಮ್ಯಾ ಶೆಟ್ಟಿಯೇ ಸುದೀಪ್ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿ ಈ ಮೊದಲು ಕೆಲವು ಮದುವೆಯಾಗಿರುವುದು ಬಯಲಾಗಿದೆ. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ Read More »

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ

‘ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಬಳಸಿದ ಎರಡು ಹಾಡುಗಳು ಬೆಂಗಳೂರು: ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಂಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ Read More »

error: Content is protected !!
Scroll to Top