ಅಪರಾಧ

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು

ವಿಷ ಹಾಕಿ ಕೊಂದಿರುವ ಶಂಕೆ ಮಂಗಳೂರು : ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೈನುಗಾರರಾಗಿರುವ ಜೋಸೆಫ್ ಸ್ಟ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ. ಕರು ಇರುವ ಹಾಲು ಕರೆಯುವ, ಗರ್ಭಿಣಿ ಹಸುಗಳು, ದೊಡ್ಡ ಮತ್ತು ಮಧ್ಯಮ ಗಾತ್ರದ ಎತ್ತುಗಳು ಸೇರಿವೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್ […]

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು Read More »

ಪಹಲ್ಗಾಮ್‌ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಏ.22ರಂದು 26 ಪ್ರವಾಸಿಗರನ್ನು ಸಾಯಿಸಿದ್ದ ಭೀಕರ ಕೃತ್ಯಕ್ಕೆ ಸಾಥ್‌ ನೀಡಿದವರು ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು 26 ಪ್ರವಾಸಿಗರನ್ನು ಕೊಂದು ಹಾಕಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಬಂಧಿತರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ಪಾಕಿಸ್ತಾನದ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ತನಿಖೆ ವೇಳೆ ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು

ಪಹಲ್ಗಾಮ್‌ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ Read More »

ಹಸುವಿನ ಕೆಚ್ಚಲು ಕೊಯ್ದು ವಿಕೃತಿ : ಹಸು ಸಾವು, ದೂರು ದಾಖಲು

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದ ಘಟನೆ ಬೆಂಗಳೂರು ದಕ್ಷಿಣದ ಸೂಲಿವಾರ ಗ್ರಾಮದಲ್ಲಿ ನಡೆದಿದೆ. ಹಾಲಿನ ಡೈರಿ ಅಧ್ಯಕ್ಷ ಮರಿಬಸವಯ್ಯ ಎನ್ನುವವರಿಗೆ ‌ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಗಾಯಾಳು ಹಸು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಚಿದೆ. ಗುರುಸಿದ್ದಪ್ಪ ಎನ್ನುವವರು ಹಳೇ ವೈಷಮ್ಯದ ಕಾರಣಕ್ಕೆ ಅವರ ಜಮೀನಿಗೆ ಮೇವು ತಿನ್ನಲು ಬಂದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ ಎಂದು ಹಸುವಿನ ಮಾಲೀಕರು ಆರೋಪಿಸಿದ್ದಾರೆ. ಈ ಹಿಂದೆ ಡೈರಿಯ ಅಧ್ಯಕ್ಷ ಚುನಾವಣೆಯ ಸಂದರ್ಭದಲ್ಲಿ ಮರಿ ಬಸವಯ್ಯ ಮತ್ತು ಗುರು ಸಿದ್ದಪ್ಪ

ಹಸುವಿನ ಕೆಚ್ಚಲು ಕೊಯ್ದು ವಿಕೃತಿ : ಹಸು ಸಾವು, ದೂರು ದಾಖಲು Read More »

ಪಾನ್ ಶಾಪ್‍ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್‍ ಮಾರಾಟ : ಆರೋಪಿ ಬಂಧನ

ಮಂಗಳೂರು: ಪಾನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ಮಾದರಿಯ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ವ್ಯಕ್ತಿ. ಮಂಗಳೂರು ಪಂಪೈಲ್ ಹತ್ತಿರದಲ್ಲಿರುವ ಕೆನರಾ ಬ್ಯಾಂಕ್ ಮುಂದುಗಡೆ ಪಾನ್‍ ಶಾಪ್‍ ಹೊಂದಿದ್ದು, ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾ‌ರ್ ಹೆಸರಿನ ಮಾದಕ ದ್ರವ್ಯ ಸುವಾಸನೆಯುಳ್ಳ ಚಾಕಲೇಟ್ ವಶಕ್ಕೆ ಪಡೆದುಕೊಳ್ಳಲಾಗಿದೆ.  ಮಂಗಳೂರು ಉಪ

ಪಾನ್ ಶಾಪ್‍ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್‍ ಮಾರಾಟ : ಆರೋಪಿ ಬಂಧನ Read More »

ಪತ್ನಿಯನ್ನು ಕತ್ತಿಯಿಂದ ಕಡಿದು ಕೊಂದ ಕುಡುಕ ಪತಿ

ಪತ್ನಿ ಮೊಬೈಲ್‌ ಅತಿಯಾಗಿ ಬಳಸುತ್ತಾಳೆಂದು ಜಗಳವಾಡಿ ಕೊಲೆ ಉಡುಪಿ : ಪತ್ನಿ ಅತಿಯಾಗಿ ಮೊಬೈಲ್ ಉಪಯೋಗಿಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉಡುಪಿ ಸಮೀಪ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಆರೋಪಿ ಪತಿ ಗಣೇಶ್ ಪೂಜಾರಿಯು ತನ್ನ ಪತ್ನಿ ರೇಖಾಳನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ ಆರೋಪಿ ಗಣೇಶ್ ಪೂಜಾರಿ ವಿಪರೀತ ಮದ್ಯ ವ್ಯಸನಿಯಾಗಿದ್ದ. ಪತ್ನಿ ರೇಖಾ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆ

ಪತ್ನಿಯನ್ನು ಕತ್ತಿಯಿಂದ ಕಡಿದು ಕೊಂದ ಕುಡುಕ ಪತಿ Read More »

ಹಿಂದು ಮುಖಂಡರ ಮನೆ ಮಧ್ಯರಾತ್ರಿ ತಪಾಸಣೆ : ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ. ರಾಧಾ ಮನೆ ಶೋಧಿಸಿದ ಪ್ರಕರಣ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದ ದಿನಗಳಲ್ಲಿ ಮಧ್ಯರಾತ್ರಿ ಹಿಂದು ಮುಖಂಡರ ಮನೆಗಳಿಗೆ ಹೋಗಿ ತಪಾಸಣೆ ಮಾಡಿದ್ದ ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಯಾವುದೇ ಕಾರಣವಿಲ್ಲದೆ ಮಧ್ಯರಾತ್ರಿ ವೇಳೆ ಆರ್​ಎಸ್​​ಎಸ್ ನಾಯಕರೊಬ್ಬರ ಮನೆಗೆ ಪೊಲೀಸರು ಹೋಗಿ ಫೋಟೊ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್​​ಪಿ ಅರುಣ್​ಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿ ಸೂಕ್ತ ದಾಖಲೆ

ಹಿಂದು ಮುಖಂಡರ ಮನೆ ಮಧ್ಯರಾತ್ರಿ ತಪಾಸಣೆ : ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌ Read More »

ಮಂಗಳೂರು : ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಸೇರಿ 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಆರೋಪಕ್ಕೊಳಗಾಗಿದ್ದ ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್‌ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸುಹಾಸ್‌ ಶೆಟ್ಟಿ ಹತ್ಯೆಗೆ ರಶೀದ್‌ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ

ಮಂಗಳೂರು : ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಸೇರಿ 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ Read More »

ಗಂಡ – ಹೆಂಡತಿ  ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ | ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಬಿ.ಸಿ.ರೋಡ್: ಗಂಡ- ಹೆಂಡತಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ತಿಮ್ಮಪ್ಪ ಮೂಲ್ಯ (50) ಹಾಗೂ ಆತನ ಪತ್ನಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನ;ಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದರೆ,  ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಯಂತಿ ಅವರು ಗರ್ಭಿಣಿ ಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.

ಗಂಡ – ಹೆಂಡತಿ  ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ | ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು Read More »

ಜಮೀನಿನ ನಕ್ಷೆ ಮಾಡಿಕೊಡಲು ಲಂಚ ಸ್ವೀಕರಿಸಿದ ಸರ್ವೆಯರ್‌, ದಲ್ಲಾಳಿ ಲೋಕಾಯುಕ್ತ ಬಲೆಗೆ

ಎರಡು ತುಂಡು ಜಮೀನುಗಳ ನಕ್ಷೆ, ಪ್ರಾಪರ್ಟಿ ಕಾರ್ಡ್‌ಗೆ 41,500 ರೂ.ಲಂಚ ಪಡೆದಿದ್ದ ಸರ್ವೆಯರ್‌ ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಕೊಡಲು ಲಂಚ ಸ್ವೀಕರಿಸಿದ ಭೂಮಾಪನ ಇಲಾಖೆಯ ಸರ್ವೆಯರ್‌ ಮತ್ತು ಈತನಿಗೆ ಸಹಕರಿಸಿದ ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣ ಪಡೆಯುತ್ತಿರುವಾಗಲೇ ಬಲೆಬೀಸಿ ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು ಕಳೆದ ಫೆಬ್ರವರಿಯಲ್ಲಿ

ಜಮೀನಿನ ನಕ್ಷೆ ಮಾಡಿಕೊಡಲು ಲಂಚ ಸ್ವೀಕರಿಸಿದ ಸರ್ವೆಯರ್‌, ದಲ್ಲಾಳಿ ಲೋಕಾಯುಕ್ತ ಬಲೆಗೆ Read More »

ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ  ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಆಟದಲ್ಲಿ ನಿರತರಾಗಿದ್ದ 9 ಮಂದಿಯನ್ನು ಬಂಧಿಸಿದ ಘಟನೆ ಓಡಿಲ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ

ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ Read More »

error: Content is protected !!
Scroll to Top