ಅಪರಾಧ

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ

ಐಶ್ವರ್ಯಾ ಗೌಡ ಜುವೆಲ್ಲರಿ ಅಂಗಡಿ ಮಾಲೀಕನಿಗೆ 9 ಕೋ.ರೂ. ವಂಚಿಸಿದ ಪ್ರಕರಣ ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರನ್ನು ಜೂ.23ರಂದು ವಿಚಾರಣೆಗೊಳಪಡಿಸಲಿದೆ. ಇ.ಡಿ.ಯಿಂದ ಸಮನ್ಸ್‌ ಜಾರಿಯಾಗಿರುವುದು ನಿಜ. ಅದರಂತೆ ಜೂ. 23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. ಅಧಿಕಾರಿಗಳು ಮನೆಗೆ ಬಂದು ಸಮನ್ಸ್‌ ನೀಡಿದಾಗ ನಾನು ಮನೆಯಲ್ಲಿ ಇರಲಿಲ್ಲ. ಅನಂತರ ಮನೆಗೆ ಬಂದು ಯಾವ ವಿಚಾರವಾಗಿ ಸಮನ್ಸ್‌ ಎಂದು ನೋಡಿದಾಗ ಐಶ್ವರ್ಯ […]

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ Read More »

ಬಾಡಿಗೆಗೆಂದು ತೆಗೆದುಕೊಂಡ ಲಾರಿಯನ್ನು ಚಾಲಕನೇ ಅಡವಿಟ್ಟ | ವಿಚಾರಿಸಲು ಹೋದ ಮಾಲೀಕನಿಗೆ ಜೀವ ಬೆದರಿಕೆ | ಪ್ರಕರಣ ದಾಖಲು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕನೇ ಅಡವಿಟ್ಟು ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್‍ ಎಂ. ಎಂಬವರು ನಗರ ಠಾಣೆಗೆ ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ಕಿರಣ್ ಪ್ರಕರಣದ ಆರೋಪಿಗಳು ಎಂದು ತಿಳಿದು ಬಂದಿದೆ. ತಮ್ಮ ಮಾಲಕತ್ವದ ಲಾರಿಗೆ  ಅಸಾಸುದ್ದೀನ್ ಫೈರೋಝ್ ನನ್ನು ಚಾಲಕನಾಗಿ ನೇಮಿಸಿದ್ದು, ಮಾ.29ರಂದು ಸರಕು ಸಾಗಾಟದ ಉದ್ದೇಶಕ್ಕಾಗಿ ಲಾರಿಯನ್ನು ಪಡೆದ ಆತ

ಬಾಡಿಗೆಗೆಂದು ತೆಗೆದುಕೊಂಡ ಲಾರಿಯನ್ನು ಚಾಲಕನೇ ಅಡವಿಟ್ಟ | ವಿಚಾರಿಸಲು ಹೋದ ಮಾಲೀಕನಿಗೆ ಜೀವ ಬೆದರಿಕೆ | ಪ್ರಕರಣ ದಾಖಲು Read More »

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌

ಹಿಂದಿನ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಮಂಗಳೂರು: ದ್ವೇಷ ಭಾಷಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ದಕ್ಷಿಣ ಕನ್ನಡದ ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಗೃಹ ಸಚಿವರಿಗೆ ಸ್ಪೀಕರ್‌ ಯು.ಟಿ.ಖಾದರ್‌ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌ Read More »

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ

ತನಿಖೆ ನಡೆಸಿ ಎರಡು ವಾರದಲ್ಲಿ ವರದಿ ನೀಡಲು ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೆ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪಾಲಿಸುವ ನೆಪದಲ್ಲಿ ಪುತ್ತೂರು ಸೇರಿದಂತೆ ವಿವಿಧೆಡೆ ಹಿಂದೂ ಮುಖಂಡರ, ಕಾರ್ಯಕರ್ತರ ಮನೆಗಳಿಗೆ ರಾತ್ರೋರಾತ್ರಿ ತೆರಳಿ ವಿಚಾರಣೆ ನಡೆಸಿದ್ದ ಕುರಿತು ಸಮಗ್ರ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ತನಿಖಾ ವಿಭಾಗದ ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಾಡಿದೆ. ಹಿಂದೂ

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ Read More »

ಬಂಟ್ವಾಳ : ಹೊಂಡಕ್ಕೆ ಬಿದ್ದು ಯುವಕ ಸಾವು

ಬಂಟ್ವಾಳ : ನಾಪತ್ತೆಯಾಗಿದ್ದ ಯುವಕನ ಮೃತದೇಹ ರಸ್ತೆ ಬದಿಯ ಕೃಷಿ ಹೊಂಡದಲ್ಲಿ ಸೋಮವಾರ ಪತ್ತೆಯಾಗಿದೆ. ಮೃತ ಯುವಕನನ್ನು ಅಮ್ಮುಂಜೆ ಗ್ರಾಮದ ಬೆಂಜನಪದವು ಕಂಬಳ ಮನೆಯ ನಿವಾಸಿ ಜನಾರ್ದನ ಪೂಜಾರಿ ಅವರ ಪುತ್ರ ಸಾಗರ್ (28) ಎಂದು ಗುರುತಿಸಲಾಗಿದೆ. ಕಾಲುಜಾರಿ ಹೊಂಡಕ್ಕೆ ಬಿದ್ದಿರುವ ಸಾಧ್ಯತೆ ಇದೆ ಎಂದು ಸಂಶಯಿಸಲಾಗಿದೆ. ಪೈಟಿಂಗ್ ಕೆಲಸ ಮಾಡಿಕೊಂಡಿದ್ದ ಸಾಗರ್ ತಾಯಿಯ ಜೊತೆ ಬಿ.ಸಿ.ರೋಡಿಗೆ ಔಷಧಿ ತರಲೆಂದು ಅಟೋರಿಕ್ಷಾದಲ್ಲಿ ತೆರಳಿದ್ದರು. ವಾಪಾಸು ಬರುವಾಗ ಬೆಂಜನಪದವು ಮೂರು ಮಾರ್ಗ ಎಂಬಲ್ಲಿ ಸಾಗರ್ ಇಳಿದಿದ್ದು, ಬಳಿಕ ಮನೆಗೆ

ಬಂಟ್ವಾಳ : ಹೊಂಡಕ್ಕೆ ಬಿದ್ದು ಯುವಕ ಸಾವು Read More »

ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು

ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡು ನುಂಗಿದ್ದ ಹಸುಳೆ ಮಂಗಳೂರು: ಬೀಡಿಯ ತುಂಡು ನುಂಗಿ 10 ತಿಂಗಳು ಪ್ರಾಯದ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ಸಮೀಪ ಅಡ್ಯಾರ್‌ನಲ್ಲಿ ಸಂಭವಿಸಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್‌ ಕುಮಾರ್‌ ಸಾವನ್ನಪ್ಪಿರುವ ನತದೃಷ್ಟ ಮಗು. ಕಳೆದ ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ಮಗು ನುಂಗಿದೆ. ಅಸ್ವಸ್ಥಗೊಂಡ ಮಗುವನ್ನು ಸಂಜೆ ವೇಳೆಗೆ ವೆನ್ಲಾಕ್‌ ಆಸ್ಪತ್ರೆಗೆ ಕರೆತಂದಿದ್ದರು. ಆದರೆ

ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು Read More »

ಮಹಿಳೆಗೆ ಕಿರುಕುಳ : ಪ್ರಸಿದ್ಧ ದೇವಸ್ಥಾನದ ಅರ್ಚಕನ ಬಂಧನ

ಪೂಜೆಯ ನೆಪದಲ್ಲಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಅರ್ಚಕರು ಬೆಂಗಳೂರು: ಪೂಜೆ ಮಾಡಿಸುವ ನೆಪದಲ್ಲಿ ಬೆಂಗಳೂರಿನ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ದೇವಸ್ಥಾನದ ಅರ್ಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಮುಖ್ಯ ಅರ್ಚಕ ತಲೆಮರೆಸಿಕೊಂಡಿದ್ದಾನೆ. ವಾಟ್ಸಪ್‌ನಲ್ಲಿ ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಕೇರಳ ತೃಶ್ಶೂರ್‌ನ ಪ್ರಸಿದ್ಧ ದೇವಾಲಯದ ಅರ್ಚಕರಿಬ್ಬರು ಮಹಿಳೆಯನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು ಎಂದು ಬೆಳ್ಳಂದೂರು ಪೊಲೀಸರು ತಿಳಿಸಿದ್ದಾರೆ. ತೃಶ್ಶೂರ್‌ನ ಪ್ರಸಿದ್ಧ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಅರುಣ್ ಬಂಧಿತ ಆರೋಪಿ. ಮುಖ್ಯ

ಮಹಿಳೆಗೆ ಕಿರುಕುಳ : ಪ್ರಸಿದ್ಧ ದೇವಸ್ಥಾನದ ಅರ್ಚಕನ ಬಂಧನ Read More »

ಚಿಕ್ಕಪುತ್ತೂರು ನಿವಾಸಿ ರೇಷ್ಮಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚಿಂತನ್ ಎಂಬವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಭಾನುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ಚಿಂತನ್, ಅವರ ಪತ್ನಿ ಹಾಗು ಪುತ್ರಿ ವಾಸ್ತವ್ಯ ಹೊಂದಿದ್ದರು. 4 ವರ್ಷಗಳ ಹಿಂದೆಯಷ್ಟೆ ಚಿಂತನ್ ಅವರ ವಿವಾಹ ಸುರತ್ಕಲ್ ನ. ರೇಷ್ಮಾ ಅವರ ಜೊತೆ ನಡೆದಿತ್ತು. ಭಾನುವಾರ ರಾತ್ರಿ ರೇಷ್ಮಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು

ಚಿಕ್ಕಪುತ್ತೂರು ನಿವಾಸಿ ರೇಷ್ಮಾ ನೇಣು ಬಿಗಿದು ಆತ್ಮಹತ್ಯೆ Read More »

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು

ಹೂಡಿಕೆ ಮಾಡಿದರೆ ಲಾಭ, ನಿವೇಶನ ನೀಡುವ ನೆಪವೊಡ್ಡಿ ಭಾರಿ ಮೋಸ ನವದೆಹಲಿ:‌ ‘ಧೋಲೇರಾ ಸ್ಮಾರ್ಟ್ ಸಿಟಿ’ ಯೋಜನೆ ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ ಖತರ್ನಾಕ್‌ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾನಿ ಮತ್ತು ರಣವೀರ್ ಬಿಜಾರಾನಿ ಎಂದು ಗುರುತಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ರಣವೀರ್ ಬಿಜಾರಾನಿ 2014ರಲ್ಲಿ ಮೊದಲ

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು Read More »

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ

ಬೆಳ್ತಂಗಡಿ : ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‍ ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಶನಿವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದ್ದು. ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ Read More »

error: Content is protected !!
Scroll to Top