ಅಪರಾಧ

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಥ್ರಿಲ್ಲರ್‌ ಸಿನಿಮಾ ಮಾದರಿ ಇದೆ ಈ ಪ್ರಕರಣ ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ ಬಳಿಕ ದಂಪತಿ ನಾಪತ್ತೆಯಾಗಿದ್ದ ಪ್ರಕರಣ ಥ್ರಿಲ್ಲರ್‌ ಸಿನಿಮಾ ಮಾದರಿ ಟ್ವಿಸ್ಟ್‌ ಪಡೆದುಕೊಂಡಿದ್ದು, ಪತಿಯನ್ನು ನವವಿವಾಹಿತ ಪತ್ನಿಯೇ ಕೊಲ್ಲಿಸಿರುವುದು ಬಯಲಾಗಿದೆ. ಹತ್ಯೆ ಆರೋಪದಲ್ಲಿ ಪೊಲೀಸರು ಪತ್ನಿಯನ್ನು ಬಂಧಿಸಿದ್ದಾರೆ. ಇಂದೋರ್‌ನ ದಂಪತಿ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ ಬಳಿಕ ನಿಗೂಢವಾಗಿ ನಾಪತ್ತೆಯಾದ ಪ್ರಕರಣ ದೇಶದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಟೂರಿಸ್ಟ್‌ ಗೈಡ್‌ ನೀಡಿದ್ದ ಸಣ್ಣ ಸುಳಿವೊಂದು ಇಡೀ ಪ್ರಕರಣವನ್ನು ಬಯಲೆಗೆಳೆಯಲು ಪೊಲೀಸರಿಗೆ ನೆರವಾಗಿದೆ. ಪತಿಯ ಕೊಲೆಗೆ ಸಂಚು […]

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು

ಪುತ್ತೂರು: ಚಲಿಸುತ್ತಿದ್ದ ಕಾರನ್ನು ನಿಲ್ಲಿಸಿ ಹಲ್ಲೆ ನಡೆಸಿದ ಘಟನೆ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶಿಕ್ (28) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನ ಕಾರಿನಲ್ಲಿ ಮಾರಿಪಳ್ಳ ಎಂಬಲ್ಲಿಗೆ ಹೋಗಿ ಬರುತ್ತಿದ್ದ ಸಂದರ್ಭ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ಶಾಫಿ ಗಡಿಯಾರ ಮತ್ತು ಜೆಸಿಬಿ ಸಿದ್ಧಿಕ್ ಎಂಬವರು ಕಾರನ್ನು ತಡೆದ ನಿಲ್ಲಿಸಿ. ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಅಬೂಬಕ್ಕರ್ ರಾಶಿಕ್ ಪುತ್ತೂರು

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು Read More »

ಮೂರೂ ಕೊಲೆ ಪ್ರಕರಣಗಳ ಎನ್‌ಐಎ ತನಿಖೆ : ಮುಂಜುನಾಥ ಭಂಡಾರಿ ಆಗ್ರಹ

ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಬೇಡ ಎಂದು ಹೇಳಿಕೆ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿದ್ದು, ಈ ಮೂರು ಕೊಲೆ ಪ್ರಕರಣಗಳ ಎನ್‌ಐಎ ತನಿಖೆಯಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ. ಬೆನ್ನುಬೆನ್ನಿಗೆ ನಡೆದ ಈ ಮೂರು ಕೊಲೆಗಳು ಇಡೀ ಕರಾವಳಿಯಲ್ಲಿ ಆತಂಕ ಮೂಡಿಸಿವೆ. ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಎನ್‌ಐಎ ತನಿಖೆಗೆ ವಹಿಸಿದರೆ ದುಷ್ಕೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ಮಂಜುನಾಥ್

ಮೂರೂ ಕೊಲೆ ಪ್ರಕರಣಗಳ ಎನ್‌ಐಎ ತನಿಖೆ : ಮುಂಜುನಾಥ ಭಂಡಾರಿ ಆಗ್ರಹ Read More »

ಸುಹಾಸ್‌ ಶೆಟ್ಟಿ ಹತ್ಯೆಯ ಎನ್‌ಐಎ ತನಿಖೆ : ಹಿಂದೂ ನಾಯಕರ ಸ್ವಾಗತ

ರಾಜ್ಯ ಸರ್ಕಾರದ ತನಿಖೆಯಲ್ಲಿ ನ್ಯಾಯ ಸಿಗುವ ವಿಶ್ವಾಸ ಇರಲಿಲ್ಲ ಎಂದ ಕ್ಯಾ.ಬ್ರಿಜೇಶ್‌ ಚೌಟ ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿರುವುದನ್ನು ಬಿಜೆಪಿ ಸಂಸದರು, ಶಾಸಕರು ಮತ್ತು ಮುಖಂಡರು ಸ್ವಾಗತಿಸಿ ಇದರಿಂದ ನೈಜ ಆರೋಪಿಗಳು ಸೆರೆಯಾಗಿ ನ್ಯಾಯ ಸಿಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಮೇ

ಸುಹಾಸ್‌ ಶೆಟ್ಟಿ ಹತ್ಯೆಯ ಎನ್‌ಐಎ ತನಿಖೆ : ಹಿಂದೂ ನಾಯಕರ ಸ್ವಾಗತ Read More »

ಮೊಬೈಲ್‍ ಕಳ್ಳನ ಬಂಧನ

ಪುತ್ತೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನೊಬ್ಬನನ್ನು ಪೊಲೀಸರು ಹಿಡಿದು ಠಾಣೆಗೆ ಕರೆದೊಯ್ದಿದ್ದಾರೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿ ಅರುಣಾ ಚಿತ್ರ ಮಂದಿರದ ಬಳಿ ಹಿಡಿದಿದ್ದಾರೆ. ಸದ್ಯ ಆತನನ್ನು ಪುತ್ತೂರು ಠಾಣೆಗೆ ಕರೆದೊಯ್ದಿದ್ದಾರೆ.

ಮೊಬೈಲ್‍ ಕಳ್ಳನ ಬಂಧನ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ Read More »

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು

ಕಡಬ: ತಮ್ಮ ಅಣ್ಣನ ಮೇಲೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯಂತ್ನಿಸಿದ ಘಟನೆ ಭಾನುವಾರ ಸಂಜೆ ಕಡಬ ತಾಲೂಕಿನ ಕೋಡಿಂಬಾಳದ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ (45) ಎಂದು ಗುರುತಿಸಲಾಗಿದೆ. ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು. ರೈಲು ಹೋದ ಬಳಿಕ ಹನುಮಪ್ಪ

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ

ಮೈತೆಯಿ ಸಂಘಟನೆಯ ನಾಯಕನ ಬಂಧನ ವಿರೋಧಿಸಿ ಪ್ರತಿಭಟನೆ ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ Read More »

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು

ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶ ಹಂಚಿಕೆ ಮಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯು.ಟಿ. ಖಾದರ್‌ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿದ ಕುರಿತು ಮಂಗಳೂರು ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹರಿಯಬಿಡಲಾಗಿತ್ತು. ಈ ಗ್ರೂಪ್‌ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು Read More »

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ

ಅಲ್ಪ ಪರಿಹಾರ ನೀಡಿದ್ದಕ್ಕೆ ಟೀಕೆ ವ್ಯಕ್ತವಾದ ಬಳಿಕ ಹೆಚ್ಚಳ ಮಾಡಿದ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಬರೀ 10 ಲ.ರೂ. ಪರಿಹಾರ ಘೋಷಿಸಿದ್ದಕ್ಕೆ ಭಾರಿ ಟೀಕೆಗೆ ಗುರಿಯಾಗಿದ್ದ ಸರ್ಕಾರ ಇದೀಗ ಪರಿಹಾರ ಮೊತ್ತವನ್ನು 25 ಲ.ರೂ.ಗೆ ಏರಿಕೆ ಮಾಡಿದೆ. ಕಾಲ್ತುಳಿತದಿಂದ ಸಾವನ್ನಪ್ಪಿದ 11 ಮಂದಿಯ ಕುಟುಂಬಗಳ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗೆ ಹೆಚ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಮೊದಲು ಮೃತರ ಕುಟುಂಬಗಳಿಗೆ

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ Read More »

error: Content is protected !!
Scroll to Top