ಅಪರಾಧ

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ

ಅಮಾನತಿಗೆ ಕಾರಣ ಕೊಟ್ಟ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ಕೆಲವು ಪೊಲೀಸ್‌ ಅಧಿಕಾರಿಗಳನ್ನು ಹೊಣೆ ಮಾಡಿರುವ ಸರ್ಕಾರ ನಿನ್ನೆ ಅವರನ್ನು ಅಮಾನತಿನಲ್ಲಿಟ್ಟಿದೆ. ಆದರೆ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿರುವ ಬಿ.ದಯಾನಂದ್‌ ಅವರ ತಲೆದಂಡಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರ ತಲೆದಂಡ ಮಾಡಿದೆ. ಅದರಲ್ಲೂ ಕೆರಿಯರ್‌ನಲ್ಲಿ […]

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ Read More »

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು

ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್‌ಬಾಲ್‌ ಕ್ರೀಡಾಪಟು ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಡುಪಿಯ ಹೆಬ್ರಿ ಮೂಲದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್ ಬಾಲ್ ಕ್ರೀಡಾಪಟು ಚಿನ್ಮಯಿ ಶೆಟ್ಟಿ (19) ಮೃತಪಟ್ಟವರು. ಪ್ರಸ್ತುತ ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ರಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿಯವರ ಪುತ್ರಿ ಕು.ಚಿನ್ಮಯಿ ಶೆಟ್ಟಿ. ಅವರು ಬೆಂಗಳೂರಿನ ಕನಕಪುರ ಮಾರ್ಗದ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ‘ಯಕ್ಷತರಂಗ ಬೆಂಗಳೂರು’ನ ಯಕ್ಷಗಾನ

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು Read More »

11 ಮಂದಿಯ ಸಾವಿಗೆ ಯಾರು ಹೊಣೆ ? : ದಾಖಲಾಗದ ಎಫ್‌ಐಆರ್‌

ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆಗೆ ಮುಂದಾದ ಹೈಕೋರ್ಟ್‌ ಬೆಂಗಳೂರು : ಆರ್​ಸಿಬಿಯ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬಗ್ಗೆ ಇನ್ನೂ ಒಂದೇ ಒಂದು ಎಫ್‌ಐಆರ್‌ ದಾಖಲಾಗದಿರುವುದು ನಾನಾ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ. ಇಡೀ ಘಟನೆಯನ್ನು ಯಾರದ್ದಾದರೂ ತಲೆಗೆ ಕಟ್ಟಿ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ ಎಂಬ ದಟ್ಟ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಾಪಿಸಿದೆ. ಇಷ್ಟೊಂದು

11 ಮಂದಿಯ ಸಾವಿಗೆ ಯಾರು ಹೊಣೆ ? : ದಾಖಲಾಗದ ಎಫ್‌ಐಆರ್‌ Read More »

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

ಉಪ್ಪಿನಂಗಡಿ: ಬೈಕ್ ನಲ್ಲಿ ಬಂದ ಸವಾರರಿಬ್ಬರು  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ  ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.  ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ 10 ಪವನ್ ಚಿನ್ನವನ್ನು ಕಳ್ಳರು ಎಗರಿಸಿದ್ದಾರೆ. ತನ್ನ ಮನೆಗೆ ಕೆಲಸಕ್ಕೆ ಬರುವಾತ ಅನಾರೋಗ್ಯದ ಕಾರಣದಿಂದ ಕೆಲಸಕ್ಕೆ ಬಾರದಿದ್ದಾಗ ಅವರ ಆರೋಗ್ಯ ವಿಚಾರಿಸಲು ಅಲೀಮಮ್ಮ ಅವರು ಮುದರ ಅವರ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದರಲ್ಲಿ ಬಂದ ಇಬ್ಬರು ಬೈಕ್‌ ನಿಲ್ಲಿಸಿ ಅಲೀಮಮ್ಮ

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ

ಅಂದು ಮಾಡಿದ ಟೀಕೆಗಳನ್ನೇ ತಿರುಗುಬಾಣವಾಗಿ ಬಳಸಿ ಕಾಲೆಳೆಯುತ್ತಿರುವ ನೆಟ್ಟಿಗರು ಮಂಗಳೂರು: ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್‌ ಕಪ್‌ ಗೆದ್ದ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಅಮಾಯಕರು ಸಾವನ್ನಪ್ಪಿದ ಘಟನೆಯ ಬಳಿಕ ಕುಂಭಮೇಳದ ಸಂದರ್ಭದಲ್ಲಿ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ-2 ಚಿತ್ರದ ಪ್ರೀಮಿಯರ್‌ ಶೋ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ವಿವಿಧ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದೀಚೆಗೆ ಜನರು ಈ ಎರಡು

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ Read More »

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ

ರಾತ್ರಿ ಸರ್ಚ್‌ ವಾರಂಟ್‌ನೊಂದಿಗೆ ಹೋಗಿ ಪರಿಶೀಲನೆ ಮಂಗಳೂರು: ಪದೇ ಪದೆ ಸಂಭವಿಸಿದ ಹತ್ಯೆಗಳಿಂದ ಪ್ರಕ್ಷುಬ್ದಗೊಂಡಿರುವ ದಕ್ಷಿಣ ಕನ್ನಡದಲ್ಲಿ ಪೊಲೀಸರ ಕಾರ್ಯಾಚರಣೆಗಳು ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತರನ್ನು ಮತ್ತು ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆರೋಪದ ಬೆನ್ನಲ್ಲೇ ಪೊಲೀಸರು ಬುಧವಾರ ರಾತ್ರಿ ಬಜರಂಗದಳದ ಮುಖಂಡ ಭರತ್‌ ಕುಮ್ಡೇಲು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಭರತ್ ಕುಮ್ಡೇಲು ಮನೆ ಶೋಧಿಸಿದ್ದಾರೆ ಎನ್ನಲಾಗಿದೆ. ಮನೆ ಬಾಗಿಲು ಒಡೆದು

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ Read More »

ಮಂಗಳೂರು ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಫೋಟಿಸುವುದಾಗಿ ಹುಸಿ ಬಾಂಬ್‍ ಕರೆ | ಸ್ಥಳಕ್ಕೆ ತೆರಳಿದ ಪೊಲೀಸರು, ನಿಷ್ಕ್ರೀಯದಳ

ಮಂಗಳೂರು: ನಾಟೆಕಲ್ ಕಣಚೂರು  ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯನ್ನು ಬಾಂಬ್‍ ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಕರೆಯೊಂದು ಬಂದಿದ್ದು, ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಬಾಂಬ್‍ ನಿಷ್ಕ್ರೀಯದಳ ಹಾಗೂ ಪೊಲೀಸರು ತೆರಳಿ ಪರಿಶೀಲಿಸಿದಾಗ ಹುಸಿ ಬಾಂಬ್‍ ಕರೆ ಎಂದು ತಿಳಿಸಿ ಘಟನೆ ಬುಧವಾರ ನಡೆದಿದೆ. ಬುಧವಾರ ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿ ಕರೆ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿ  ಬೆಳಗ್ಗೆ 11

ಮಂಗಳೂರು ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಫೋಟಿಸುವುದಾಗಿ ಹುಸಿ ಬಾಂಬ್‍ ಕರೆ | ಸ್ಥಳಕ್ಕೆ ತೆರಳಿದ ಪೊಲೀಸರು, ನಿಷ್ಕ್ರೀಯದಳ Read More »

ಪ್ರಚೋದನಕಾರಿ ಪೋಸ್ಟ್‌ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ : 5 ಯುವಕರ ಬಂಧನ

ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್‌ಗಳ ಮೇಲೆ ನಿಗಾ ಇಡಲು ವಿಶೇಷ ತಂಡ ಮಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಪೋಸ್ಟ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಐವರನ್ನು ಬಂಧಿಸಿದ್ದಾರೆ. ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಮೊದಲ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ನಿವಾಸಿ

ಪ್ರಚೋದನಕಾರಿ ಪೋಸ್ಟ್‌ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ : 5 ಯುವಕರ ಬಂಧನ Read More »

ಬೆಂಗಳೂರು ಕಾಲ್ತುಳಿತ : ಮೃತರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ಗಳು…

ಸಾವಿಗೆ ಕಾರಣವಾದ ಕ್ರಿಕೆಟ್‌ ಅಭಿಮಾನ ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ ದುರಂತದಲ್ಲಿ ಮೃತಪಟ್ಟವರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ ಕೂಡ ಸೇರಿದ್ದಾರೆ. ತಡರಾತ್ರಿ ಸರ್ಕಾರ ಮೃತಪಟ್ಟ 11 ಜನರ ಮಾಹಿತಿಯನ್ನು ಬಿಡುಗಡೆಮಾಡಿದೆ. ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ ಕನಕಶ್ರೀ ಲೇಔಟ್‌ನಲ್ಲಿ ವಾಸವಿದ್ದ 9ನೇ ತರಗತಿ ವಿದ್ಯಾರ್ಥಿನಿ ದಿವ್ಯಾಂಶಿ (14) ಎಂಬಾಕೆ ಮೃತಪಟ್ಟಿದ್ದು, ಈಕೆ ಶಿವಕುಮಾರ್-ಅಶ್ವಿನಿ ದಂಪತಿಯ ಪುತ್ರಿ. ನಿನ್ನೆ ಮಧ್ಯಾಹ್ನ ತಾಯಿ ಅಶ್ವಿನಿ, ಚಿಕ್ಕಮ್ಮ ರಚನಾ, ದಿವ್ಯಾಂಶ್ರೀ ಸೇರಿ ಕುಟುಂಬದ

ಬೆಂಗಳೂರು ಕಾಲ್ತುಳಿತ : ಮೃತರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್‌ಗಳು… Read More »

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌

ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತ ನವದೆಹಲಿ: ಪಾಕಿಸ್ತಾನ ಪರ ಗೂಢಚಾರಿಕೆ ಮಾಡಿ ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತನನ್ನು ಕೂಡ ಪೊಲೀಸರು ಇಂದು ಇದೇ ಆರೋಪದಲ್ಲಿ ಬಂಧಿಸಿದ್ದಾರೆ. ಈತನೂ ಯೂಟ್ಯೂಬರ್‌ ಆಗಿದ್ದಾನೆ ಮತ್ತು ಜ್ಯೋತಿ ಮಲ್ಹೋತ್ರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 11 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಜಾನ್‌ ಮಹಲ್‌ ಎಂಬ ಯೂ ಟ್ಯೂಬ್‌ ಚಾನೆಲ್‌ ನಡೆಸುತ್ತಿರುವ ಜಸ್ಬೀರ್‌ ಸಿಂಗ್‌ ಸೆರೆಯಾಗಿರುವ ಯೂಟ್ಯೂಬರ್‌. ಗೂಢಚಾರಿಕೆಗೆ ಸಂಬಂಧಿಸಿ ಸೆರೆಯಾಗಿರುವ ಎರಡನೇ ಯೂಟ್ಯೂಬರ್‌ ಈತ. ಗೂಢಚಾರಿಕೆಗೆ

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌ Read More »

error: Content is protected !!
Scroll to Top